<p><strong>ಚಿಕ್ಕಬಳ್ಳಾಪುರ</strong>: ಪುನರ್ವಸತಿ ಸೌಲಭ್ಯ, ಮೂಲಸೌಕರ್ಯ ಒದಗಿಸದೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿ ನಗರದ ಕಂದವಾರ ಬಡಾವಣೆ ಶೆಡ್ಗಳಲ್ಲಿ ವಾಸವಿರುವ ಬಸಪ್ಪ ಛತ್ರದ ನಿವಾಸಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> ಶೆಡ್ಗಳ ಮುಂಭಾಗ ಪ್ರತಿಭಟನೆ ನಡೆಸಿದ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಸುಮಾರು 42ಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು, ನಮಗೆ ವರ್ಷಗಳಿಂದ ಭರವಸೆ ನೀಡಲಾಗುತ್ತಿದೆ ಹೊರತು ಬೇಡಿಕೆ ಮಾತ್ರ ಈಡೇರಿಸುತ್ತಿಲ್ಲ ಎಂದು ಆರೋಪಿಸಿದರು.<br /> <br /> ಬಿ.ಬಿ.ರಸ್ತೆ ಸಮೀಪದ ಬಸಪ್ಪ ಛತ್ರದ ಬಳಿ ವಾಸವಿದ್ದ ನಮ್ಮನ್ನು ಇಲ್ಲಸಲ್ಲದ ಕಾರಣ ಹೇಳಿ ಅಲ್ಲಿಂದ ಎತ್ತಂಗಡಿ ಮಾಡಿಸಲಾಯಿತು. 3 ವರ್ಷಗಳಿಂದ ತಾತ್ಕಾಲಿಕ ಶೆಡ್ಗಳಲ್ಲಿ ವಾಸವಿದ್ದೇವೆ. ಯಾವುದೇ ಮೂಲಸೌಕರ್ಯ, ಉತ್ತಮ ವಸತಿ ಸೌಕರ್ಯ ಕಲ್ಪಿಸಿಲ್ಲ ಎಂದರು.<br /> <br /> ಶೆಡ್ ನಿವಾಸಿ ಮಂಜು ಮಾತನಾಡಿ, ಪುನರ್ವಸತಿ ಸೌಲಭ್ಯ ಕಲ್ಪಿಸುವ ಜವಾಬ್ದಾರಿ ಯಾರದ್ದು ಎಂಬುದು ನಮಗೆ ಈವರೆಗೂ ಗೊತ್ತಾಗಿಲ್ಲ. ನಗರಸಭೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ, ಜಿಲ್ಲಾಧಿಕಾರಿ ಕಚೇರಿ ಎದುರಿಗೂ ಪ್ರತಿಭಟನೆ ನಡೆಸಿದೆವು. ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಬೇಸಿಗೆ ಆರಂಭವಾಗಿದ್ದು, ಶೆಡ್ನಲ್ಲಿ ವಾಸವಿರಲು ಸಾಧ್ಯವಾಗದ ಸ್ಥಿತಿ ನಿರ್ಮಾಣಗೊಂಡಿದೆ. ಜತೆಗೆ ಹುಳು– ಹುಪ್ಪಟೆ ಕಾಟದಿಂದ ಯಾತನೆ ಅನುಭವಿಸುತ್ತಿದ್ದೇವೆ. ಕೆಲ ತಿಂಗಳ ಹಿಂದೆಯಷ್ಟೇ ತೀವ್ರ ಚಳಿಗೆ ಎರಡು ಮಕ್ಕಳು ಸಾವನ್ನಪ್ಪಿದ್ದವು. ಈ ಬೇಸಿಗೆಗೆ ಏನಾಗುತ್ತದೋ? ಅದಕ್ಕೆ ಯಾರು ಹೊಣೆಗಾರರು ಆಗುತ್ತಾರೆ ಎಂದು ಅವರು ಪ್ರಶ್ನಿಸಿದರು.<br /> <br /> ನಿವಾಸಿಗಳಾದ ಶಂಕರ್, ಮಹೇಶ್, ಜಬೀ, ಅಬ್ದುಲ್, ಉಲ್ಲಾಶಾಮಿ, ಮಣಿ, ಗೌಶರ್, ಫಾತಿಮಾ, ಪಾಷಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಪುನರ್ವಸತಿ ಸೌಲಭ್ಯ, ಮೂಲಸೌಕರ್ಯ ಒದಗಿಸದೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿ ನಗರದ ಕಂದವಾರ ಬಡಾವಣೆ ಶೆಡ್ಗಳಲ್ಲಿ ವಾಸವಿರುವ ಬಸಪ್ಪ ಛತ್ರದ ನಿವಾಸಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> ಶೆಡ್ಗಳ ಮುಂಭಾಗ ಪ್ರತಿಭಟನೆ ನಡೆಸಿದ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಸುಮಾರು 42ಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು, ನಮಗೆ ವರ್ಷಗಳಿಂದ ಭರವಸೆ ನೀಡಲಾಗುತ್ತಿದೆ ಹೊರತು ಬೇಡಿಕೆ ಮಾತ್ರ ಈಡೇರಿಸುತ್ತಿಲ್ಲ ಎಂದು ಆರೋಪಿಸಿದರು.<br /> <br /> ಬಿ.ಬಿ.ರಸ್ತೆ ಸಮೀಪದ ಬಸಪ್ಪ ಛತ್ರದ ಬಳಿ ವಾಸವಿದ್ದ ನಮ್ಮನ್ನು ಇಲ್ಲಸಲ್ಲದ ಕಾರಣ ಹೇಳಿ ಅಲ್ಲಿಂದ ಎತ್ತಂಗಡಿ ಮಾಡಿಸಲಾಯಿತು. 3 ವರ್ಷಗಳಿಂದ ತಾತ್ಕಾಲಿಕ ಶೆಡ್ಗಳಲ್ಲಿ ವಾಸವಿದ್ದೇವೆ. ಯಾವುದೇ ಮೂಲಸೌಕರ್ಯ, ಉತ್ತಮ ವಸತಿ ಸೌಕರ್ಯ ಕಲ್ಪಿಸಿಲ್ಲ ಎಂದರು.<br /> <br /> ಶೆಡ್ ನಿವಾಸಿ ಮಂಜು ಮಾತನಾಡಿ, ಪುನರ್ವಸತಿ ಸೌಲಭ್ಯ ಕಲ್ಪಿಸುವ ಜವಾಬ್ದಾರಿ ಯಾರದ್ದು ಎಂಬುದು ನಮಗೆ ಈವರೆಗೂ ಗೊತ್ತಾಗಿಲ್ಲ. ನಗರಸಭೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ, ಜಿಲ್ಲಾಧಿಕಾರಿ ಕಚೇರಿ ಎದುರಿಗೂ ಪ್ರತಿಭಟನೆ ನಡೆಸಿದೆವು. ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಬೇಸಿಗೆ ಆರಂಭವಾಗಿದ್ದು, ಶೆಡ್ನಲ್ಲಿ ವಾಸವಿರಲು ಸಾಧ್ಯವಾಗದ ಸ್ಥಿತಿ ನಿರ್ಮಾಣಗೊಂಡಿದೆ. ಜತೆಗೆ ಹುಳು– ಹುಪ್ಪಟೆ ಕಾಟದಿಂದ ಯಾತನೆ ಅನುಭವಿಸುತ್ತಿದ್ದೇವೆ. ಕೆಲ ತಿಂಗಳ ಹಿಂದೆಯಷ್ಟೇ ತೀವ್ರ ಚಳಿಗೆ ಎರಡು ಮಕ್ಕಳು ಸಾವನ್ನಪ್ಪಿದ್ದವು. ಈ ಬೇಸಿಗೆಗೆ ಏನಾಗುತ್ತದೋ? ಅದಕ್ಕೆ ಯಾರು ಹೊಣೆಗಾರರು ಆಗುತ್ತಾರೆ ಎಂದು ಅವರು ಪ್ರಶ್ನಿಸಿದರು.<br /> <br /> ನಿವಾಸಿಗಳಾದ ಶಂಕರ್, ಮಹೇಶ್, ಜಬೀ, ಅಬ್ದುಲ್, ಉಲ್ಲಾಶಾಮಿ, ಮಣಿ, ಗೌಶರ್, ಫಾತಿಮಾ, ಪಾಷಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>