<p><strong>ಬೆಂಗಳೂರು:</strong> ‘ಕೆಂಪೇಗೌಡ ಸ್ಮಾರಕ ವಸ್ತು ಸಂಗ್ರಹಾಲಯವನ್ನು ತಾತ್ಕಾಲಿಕವಾಗಿ ಮೆಯೋಹಾಲ್ನ ಕಟ್ಟಡದಲ್ಲಿ ಏಪ್ರಿಲ್ 7ರಂದು ಉದ್ಘಾಟಿಸಲು ನಿರ್ಧರಿಸಲಾಗಿದೆ’ ಎಂದು ಮೇಯರ್ ಎಸ್.ಕೆ. ನಟರಾಜ್ ತಿಳಿಸಿದರು.ನಗರದಲ್ಲಿ ಗುರುವಾರ ನಡೆದ ಉದ್ಘಾಟನಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಂಗ್ರಹಾಲಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ ಎಂದರು.<br /> <br /> ಕೆಂಪೇಗೌಡ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಬೇಕೆಂದು 2000ರಲ್ಲಿ ನಿರ್ಧರಿಸಲಾಗಿತ್ತು. ಆದರೆ ನಾನಾ ಕಾರಣಗಳಿಂದಾಗಿ ಕಾಮಗಾರಿ ವಿಳಂಬವಾಯಿತು. ಈಗ ಸಾಹಿತಿ ದೇ.ಜವರೇಗೌಡರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅವರ ಅವಿರತ ಪ್ರಯತ್ನದ ಫಲವಾಗಿ ಉದ್ಘಾಟನೆಗೆ ಕಾಲ ಕೂಡಿ ಬಂದಿದೆ ಎಂದು ಪ್ರಶಂಸಿಸಿದರು.<br /> <br /> ಶಾಶ್ವತ ನೆಲೆಗೆ ಕ್ರಮ: ವಸ್ತು ಸಂಗ್ರಹಾಲಯವನ್ನು ಶಾಶ್ವತವಾಗಿ ಸ್ಥಾಪಿಸಲು ಸೂಕ್ತ ಸ್ಥಳವನ್ನು ಹುಡುಕಲಾಗುತ್ತಿದೆ.ಮಲ್ಲೇಶ್ವರದ ಬಳಿ ಸುಮಾರು ಆರು ಎಕರೆ ಜಾಗ ಇರುವುದಾಗಿ ತಿಳಿದುಬಂದಿದ್ದು, ಈ ಸಂಬಂಧ ಪರಿಶೀಲಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಪೂರ್ವ ವಲಯದ ಜಂಟಿ ಆಯುಕ್ತರಾದ ಶಿವಶಂಕರ್, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ, ಬಿ. ಗಣೇಶ್, ಪಾಲಿಕೆ ಸದಸ್ಯರಾದ ಗೀತಾ ಶ್ರಿನಿವಾಸ್ ರೆಡ್ಡಿ, ಶಿವಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೆಂಪೇಗೌಡ ಸ್ಮಾರಕ ವಸ್ತು ಸಂಗ್ರಹಾಲಯವನ್ನು ತಾತ್ಕಾಲಿಕವಾಗಿ ಮೆಯೋಹಾಲ್ನ ಕಟ್ಟಡದಲ್ಲಿ ಏಪ್ರಿಲ್ 7ರಂದು ಉದ್ಘಾಟಿಸಲು ನಿರ್ಧರಿಸಲಾಗಿದೆ’ ಎಂದು ಮೇಯರ್ ಎಸ್.ಕೆ. ನಟರಾಜ್ ತಿಳಿಸಿದರು.ನಗರದಲ್ಲಿ ಗುರುವಾರ ನಡೆದ ಉದ್ಘಾಟನಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಂಗ್ರಹಾಲಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ ಎಂದರು.<br /> <br /> ಕೆಂಪೇಗೌಡ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಬೇಕೆಂದು 2000ರಲ್ಲಿ ನಿರ್ಧರಿಸಲಾಗಿತ್ತು. ಆದರೆ ನಾನಾ ಕಾರಣಗಳಿಂದಾಗಿ ಕಾಮಗಾರಿ ವಿಳಂಬವಾಯಿತು. ಈಗ ಸಾಹಿತಿ ದೇ.ಜವರೇಗೌಡರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅವರ ಅವಿರತ ಪ್ರಯತ್ನದ ಫಲವಾಗಿ ಉದ್ಘಾಟನೆಗೆ ಕಾಲ ಕೂಡಿ ಬಂದಿದೆ ಎಂದು ಪ್ರಶಂಸಿಸಿದರು.<br /> <br /> ಶಾಶ್ವತ ನೆಲೆಗೆ ಕ್ರಮ: ವಸ್ತು ಸಂಗ್ರಹಾಲಯವನ್ನು ಶಾಶ್ವತವಾಗಿ ಸ್ಥಾಪಿಸಲು ಸೂಕ್ತ ಸ್ಥಳವನ್ನು ಹುಡುಕಲಾಗುತ್ತಿದೆ.ಮಲ್ಲೇಶ್ವರದ ಬಳಿ ಸುಮಾರು ಆರು ಎಕರೆ ಜಾಗ ಇರುವುದಾಗಿ ತಿಳಿದುಬಂದಿದ್ದು, ಈ ಸಂಬಂಧ ಪರಿಶೀಲಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಪೂರ್ವ ವಲಯದ ಜಂಟಿ ಆಯುಕ್ತರಾದ ಶಿವಶಂಕರ್, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ, ಬಿ. ಗಣೇಶ್, ಪಾಲಿಕೆ ಸದಸ್ಯರಾದ ಗೀತಾ ಶ್ರಿನಿವಾಸ್ ರೆಡ್ಡಿ, ಶಿವಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>