<p>ಮುಂಬೈ (ಪಿಟಿಐ): ಬೃಹತ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯಿಂದ ಇನ್ನೂ ಅನುಮತಿ ಸಿಗದ ಕಾರಣ ವಾಂಖೇಡೆ ಕ್ರೀಡಾಂಗಣದಲ್ಲಿ ಅಕ್ಟೋವರ್ 23ರಂದು ಭಾರತ ಹಾಗೂ ಪ್ರವಾಸಿ ಇಂಗ್ಲೆಂಡ್ ತಂಡಗಳ ನಡುವಣ ಏಕದಿನ ಪಂದ್ಯ ನಡೆಯುವುದು ಅನುಮಾನ ಎನ್ನುವ ಮಾಧ್ಯಮಗಳ ವರದಿಯನ್ನು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ತಳ್ಳಿಹಾಕಿದೆ.<br /> <br /> `ವಾಖೇಡೆಯಲ್ಲಿ ಪಂದ್ಯ ನಡೆಯುವುದು ಖಚಿತ~ ಎಂದು ಸ್ಪಷ್ಟಪಡಿಸಿರುವ ಎಂಸಿಎ ಜಂಟಿ ಕಾರ್ಯದರ್ಶಿ ನಿತೀನ್ ದಲಾಲ್ ಅವರು `ಪಂದ್ಯ ಆಯೋಜಿಸುವುದಕ್ಕೆ ಯಾವುದೇ ತೊಡಕಿಲ್ಲ. ನಮ್ಮ ಎಂಜಿನಿಯರ್ ಶಶಿ ಪ್ರಭು ಅವರು ಬುಧವಾರ ಬಿಎಂಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಗತ್ಯವಾದ ಎಲ್ಲ ಅನುಮತಿ ಪತ್ರಗಳನ್ನು ಪಡೆಯಲಾಗುತ್ತದೆ~ ಎಂದರು.<br /> <br /> ಸಂಪೂರ್ಣವಾಗಿ ನವೀಕರಣಗೊಂಡಿರುವ ವಾಂಖೇಡೆ ಕ್ರೀಡಾಂಗಣದಲ್ಲಿ ಮಳೆ ನೀರು ಹರಿಯುವುದಕ್ಕಾಗಿ ಚರಂಡಿ ನಿರ್ಮಾಣ ಮಾಡುವ ಕೆಲಸ ಇನ್ನೂ ಪೂರ್ಣವಾಗಿಲ್ಲ. ಅದೂ ಬೇಗ ಮುಗಿಯುತ್ತದೆ. ಒಮ್ಮೆ ನಿರ್ಮಾಣ ಪೂರ್ಣಗೊಂಡ ನಂತರ ಬಿಎಂಸಿಯಿಂದ ಪ್ರಮಾಣ ಪತ್ರವನ್ನು ಪಡೆಯಲಾಗುವುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ಬೃಹತ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯಿಂದ ಇನ್ನೂ ಅನುಮತಿ ಸಿಗದ ಕಾರಣ ವಾಂಖೇಡೆ ಕ್ರೀಡಾಂಗಣದಲ್ಲಿ ಅಕ್ಟೋವರ್ 23ರಂದು ಭಾರತ ಹಾಗೂ ಪ್ರವಾಸಿ ಇಂಗ್ಲೆಂಡ್ ತಂಡಗಳ ನಡುವಣ ಏಕದಿನ ಪಂದ್ಯ ನಡೆಯುವುದು ಅನುಮಾನ ಎನ್ನುವ ಮಾಧ್ಯಮಗಳ ವರದಿಯನ್ನು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ತಳ್ಳಿಹಾಕಿದೆ.<br /> <br /> `ವಾಖೇಡೆಯಲ್ಲಿ ಪಂದ್ಯ ನಡೆಯುವುದು ಖಚಿತ~ ಎಂದು ಸ್ಪಷ್ಟಪಡಿಸಿರುವ ಎಂಸಿಎ ಜಂಟಿ ಕಾರ್ಯದರ್ಶಿ ನಿತೀನ್ ದಲಾಲ್ ಅವರು `ಪಂದ್ಯ ಆಯೋಜಿಸುವುದಕ್ಕೆ ಯಾವುದೇ ತೊಡಕಿಲ್ಲ. ನಮ್ಮ ಎಂಜಿನಿಯರ್ ಶಶಿ ಪ್ರಭು ಅವರು ಬುಧವಾರ ಬಿಎಂಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಗತ್ಯವಾದ ಎಲ್ಲ ಅನುಮತಿ ಪತ್ರಗಳನ್ನು ಪಡೆಯಲಾಗುತ್ತದೆ~ ಎಂದರು.<br /> <br /> ಸಂಪೂರ್ಣವಾಗಿ ನವೀಕರಣಗೊಂಡಿರುವ ವಾಂಖೇಡೆ ಕ್ರೀಡಾಂಗಣದಲ್ಲಿ ಮಳೆ ನೀರು ಹರಿಯುವುದಕ್ಕಾಗಿ ಚರಂಡಿ ನಿರ್ಮಾಣ ಮಾಡುವ ಕೆಲಸ ಇನ್ನೂ ಪೂರ್ಣವಾಗಿಲ್ಲ. ಅದೂ ಬೇಗ ಮುಗಿಯುತ್ತದೆ. ಒಮ್ಮೆ ನಿರ್ಮಾಣ ಪೂರ್ಣಗೊಂಡ ನಂತರ ಬಿಎಂಸಿಯಿಂದ ಪ್ರಮಾಣ ಪತ್ರವನ್ನು ಪಡೆಯಲಾಗುವುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>