<p><strong>ಸವಣೂರ: </strong>ನಗರದ ನಿವಾಸಿಗಳನ್ನು ಕಾಡಿದ ವಾಂತಿ-ಬೇಧಿ ಪ್ರಕರಣವನ್ನು ಈ ಬಾರಿ ತಕ್ಷಣಕ್ಕೆ ನಿಯಂತ್ರಿಸಲಾಗಿದ್ದು, ಯಾವುದೇ ರೋಗಿಗಳು ಆಸ್ಪತ್ರೆಗೆ ದಾಖಲಾಗಿಲ್ಲ.<br /> <br /> ಗುರುವಾರ ಸರ್ಕಾರಿ ಆಸ್ಪತ್ರೆಯಲ್ಲಿ ವಾಂತಿ-ಭೇದಿಯಿಂದ ಬಳಲಿದ ಯಾವದೇ ರೋಗಿಗಳು ದಾಖಲಾಗಿಲ್ಲ. ಸಾಮಾನ್ಯ ದಿನದ ರೀತಿಯಲ್ಲಿ ಆಸ್ಪತ್ರೆಯ ಹೊರರೋಗಿಗಳ ವಿಭಾಗ ದಲ್ಲಿ 40-50 ರೋಗಿಗಳನ್ನು ತಪಾಸಣೆ ಮಾಡಿ ಅಗತ್ಯ ಚಿಕಿತ್ಸೆ ನೀಡ ಲಾಗಿದೆ ಎಂದು ತಾಲ್ಲೂಕು ಆರೋಗ್ಯಾ ಧಿಕಾರಿ ಡಾ. ಚಂದ್ರಕಲಾ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿ ಗಳಾದ ಡಾ. ಸುಮಾ ತಿಳಿಸಿದ್ದಾರೆ. <br /> <br /> ತಕ್ಷಣದ ಕ್ರಮಗಳು: ನಗರದಲ್ಲಿ ಮಾಂಸ ಮಾರಾಟ ವನ್ನು ಸ್ಥಗಿತ ಸೇರಿದಂತೆ ಪರಿಶುದ್ಧ ನೀರು ಪೂರೈಕೆ ಹಲವು ಮುಂಜಾಗ್ರತಾ ಕ್ರಮಗಳನ್ನು ಆಡಳಿತ ವ್ಯವಸ್ಥೆ ಕೈಗೊಳ್ಳಲಾಗಿದೆ. 5 ಲಕ್ಷ ರೂಪಾಯಿ ಅನುದಾನ ನೀಡಲಾಗಿದ್ದು, ಉಳಿದ 3 ಲಕ್ಷ ರೂ ಅನುದಾನ ವನ್ನು ಪುರಸಭೆ ಭರಿಸಲಿದೆ ಎಂದು ತಹಶೀಲ್ದಾರರು ತಿಳಿಸಿದ್ದಾರೆ. <br /> <br /> ನಗರದ ಚರಂಡಿಗಳಲ್ಲಿರುವ ಅನಧಿಕೃತ ನಳದ ಸಂಪರ್ಕ ವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾ ಗುತ್ತಿದೆ. ಚರಂಡಿ ಗಳಲ್ಲಿರುವ ನಳದ ಸಂಪರ್ಕವನ್ನು ಸಾರ್ವಜನಿಕರೇ ಸ್ವಯಂ ಪ್ರೇರಣೆಯಿಂದ ತೆರವು ಗೊಳಿಸಬೇಕು ಎಂದು ಅವರು ಕೋರಿದ್ದಾರೆ.<br /> <br /> ಸಾರ್ವಜನಿಕ ಆಸ್ಪತ್ರೆಯಲ್ಲಿ ಈಗ ರೋಗಿಗಳ ದಾಖಲಾತಿ ಕಡಿಮೆಯಾಗಿದ್ದು, ರೋಗಿಗಳಿಗೆ ಅಗತ್ಯವಾದ ಎಲ್ಲ ವೈದ್ಯಕೀಯ ಸೌಲಭ ಕಲ್ಪಿಸಲಾಗಿದೆ. ಗ್ರಾಮೀಣ ಭಾಗದಿಂದ ಹೆಚ್ಚುವರಿ ವೈದ್ಯರ ಸೇವೆಯನ್ನು ಪಡೆಯಲಾಗುತ್ತಿದೆ. ಆಸ್ಪತ್ರೆಯಲ್ಲಿ ಅವಶ್ಯಕವಾದ ಔಷಧಿಗಳ ಲಭ್ಯತೆ ಇದೆ ಎಂದು ತಹಶೀಲ್ದಾರ ಡಾ. ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ. <br /> <br /> ಸವಣೂರ ನಗರದಲ್ಲಿ ಮೀನು ಸೇರಿದಂತೆ ಇತರೇ ಮಾಂಸಾಹಾರಿ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಕುಡಿಯುವ ನೀರನ್ನು ಕುದಿಸಿ ಆರಿಸಿ ಕುಡಿಯುವದರೊಂದಿಗೆ, ತಮ್ಮ ವಯಕ್ತಿಕ ಶುಚಿತ್ವ ಹಾಗೂ ಪರಿಸರದ ನೈರ್ಮಲ್ಯ ಕಾಯ್ದುಕೊಳ್ಳುವಂತೆ ತಹ ಶೀಲ್ದಾರರು ಸಾರ್ವಜನಿಕರಲ್ಲಿ ಕೋರಿಕೊಂಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರ: </strong>ನಗರದ ನಿವಾಸಿಗಳನ್ನು ಕಾಡಿದ ವಾಂತಿ-ಬೇಧಿ ಪ್ರಕರಣವನ್ನು ಈ ಬಾರಿ ತಕ್ಷಣಕ್ಕೆ ನಿಯಂತ್ರಿಸಲಾಗಿದ್ದು, ಯಾವುದೇ ರೋಗಿಗಳು ಆಸ್ಪತ್ರೆಗೆ ದಾಖಲಾಗಿಲ್ಲ.<br /> <br /> ಗುರುವಾರ ಸರ್ಕಾರಿ ಆಸ್ಪತ್ರೆಯಲ್ಲಿ ವಾಂತಿ-ಭೇದಿಯಿಂದ ಬಳಲಿದ ಯಾವದೇ ರೋಗಿಗಳು ದಾಖಲಾಗಿಲ್ಲ. ಸಾಮಾನ್ಯ ದಿನದ ರೀತಿಯಲ್ಲಿ ಆಸ್ಪತ್ರೆಯ ಹೊರರೋಗಿಗಳ ವಿಭಾಗ ದಲ್ಲಿ 40-50 ರೋಗಿಗಳನ್ನು ತಪಾಸಣೆ ಮಾಡಿ ಅಗತ್ಯ ಚಿಕಿತ್ಸೆ ನೀಡ ಲಾಗಿದೆ ಎಂದು ತಾಲ್ಲೂಕು ಆರೋಗ್ಯಾ ಧಿಕಾರಿ ಡಾ. ಚಂದ್ರಕಲಾ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿ ಗಳಾದ ಡಾ. ಸುಮಾ ತಿಳಿಸಿದ್ದಾರೆ. <br /> <br /> ತಕ್ಷಣದ ಕ್ರಮಗಳು: ನಗರದಲ್ಲಿ ಮಾಂಸ ಮಾರಾಟ ವನ್ನು ಸ್ಥಗಿತ ಸೇರಿದಂತೆ ಪರಿಶುದ್ಧ ನೀರು ಪೂರೈಕೆ ಹಲವು ಮುಂಜಾಗ್ರತಾ ಕ್ರಮಗಳನ್ನು ಆಡಳಿತ ವ್ಯವಸ್ಥೆ ಕೈಗೊಳ್ಳಲಾಗಿದೆ. 5 ಲಕ್ಷ ರೂಪಾಯಿ ಅನುದಾನ ನೀಡಲಾಗಿದ್ದು, ಉಳಿದ 3 ಲಕ್ಷ ರೂ ಅನುದಾನ ವನ್ನು ಪುರಸಭೆ ಭರಿಸಲಿದೆ ಎಂದು ತಹಶೀಲ್ದಾರರು ತಿಳಿಸಿದ್ದಾರೆ. <br /> <br /> ನಗರದ ಚರಂಡಿಗಳಲ್ಲಿರುವ ಅನಧಿಕೃತ ನಳದ ಸಂಪರ್ಕ ವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾ ಗುತ್ತಿದೆ. ಚರಂಡಿ ಗಳಲ್ಲಿರುವ ನಳದ ಸಂಪರ್ಕವನ್ನು ಸಾರ್ವಜನಿಕರೇ ಸ್ವಯಂ ಪ್ರೇರಣೆಯಿಂದ ತೆರವು ಗೊಳಿಸಬೇಕು ಎಂದು ಅವರು ಕೋರಿದ್ದಾರೆ.<br /> <br /> ಸಾರ್ವಜನಿಕ ಆಸ್ಪತ್ರೆಯಲ್ಲಿ ಈಗ ರೋಗಿಗಳ ದಾಖಲಾತಿ ಕಡಿಮೆಯಾಗಿದ್ದು, ರೋಗಿಗಳಿಗೆ ಅಗತ್ಯವಾದ ಎಲ್ಲ ವೈದ್ಯಕೀಯ ಸೌಲಭ ಕಲ್ಪಿಸಲಾಗಿದೆ. ಗ್ರಾಮೀಣ ಭಾಗದಿಂದ ಹೆಚ್ಚುವರಿ ವೈದ್ಯರ ಸೇವೆಯನ್ನು ಪಡೆಯಲಾಗುತ್ತಿದೆ. ಆಸ್ಪತ್ರೆಯಲ್ಲಿ ಅವಶ್ಯಕವಾದ ಔಷಧಿಗಳ ಲಭ್ಯತೆ ಇದೆ ಎಂದು ತಹಶೀಲ್ದಾರ ಡಾ. ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ. <br /> <br /> ಸವಣೂರ ನಗರದಲ್ಲಿ ಮೀನು ಸೇರಿದಂತೆ ಇತರೇ ಮಾಂಸಾಹಾರಿ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಕುಡಿಯುವ ನೀರನ್ನು ಕುದಿಸಿ ಆರಿಸಿ ಕುಡಿಯುವದರೊಂದಿಗೆ, ತಮ್ಮ ವಯಕ್ತಿಕ ಶುಚಿತ್ವ ಹಾಗೂ ಪರಿಸರದ ನೈರ್ಮಲ್ಯ ಕಾಯ್ದುಕೊಳ್ಳುವಂತೆ ತಹ ಶೀಲ್ದಾರರು ಸಾರ್ವಜನಿಕರಲ್ಲಿ ಕೋರಿಕೊಂಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>