<p><strong>ವಾಡಿ: </strong>ಪುರಸಭೆ ವತಿಯಿಂದ ಹಮ್ಮಿಕೊಂಡ ಸಮಗ್ರ ನೀರು ಸರಬರಾಜು ಯೋಜನೆಯಡಿ ಸುಮಾರು ₨12ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಜಲ ಶುದ್ಧೀಕರಣ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲು ಫೆ.28ರಂದು ಪಟ್ಟಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ ಎಂದು ಅಧ್ಯಕ್ಷೆ ಹಸೀನಬೇಗಂ ಖುರೇಷಿ ತಿಳಿಸಿದರು.<br /> <br /> ಎಸ್ಎಫ್ಪಿ ಯೋಜನೆಯಡಿ ಸುಮಾರು ₨ 5ಲಕ್ಷ ವೆಚ್ಚದಲ್ಲಿ ಸಮುದಾಯ ಭವನ, ₨12ಲಕ್ಷದಲ್ಲಿ 7, 11 ನೇ ವಾರ್ಡ್ನಲ್ಲಿ ಮಹಿಳಾ ಸಮುದಾಯ ಶೌಚಾಲಯ ಕಟ್ಟಡವನ್ನು ಮುಖ್ಯಮಂತ್ರಿ ಉದ್ಘಾಟಿಸಿ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಿದ್ದಾರೆ ಎಂದು ಬುಧವಾರ ಪುರ-ಸಭೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> 5,7,10,19,ವಾರ್ಡ್ನಲ್ಲಿ ಸುಮಾರು ₨69ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಿಮೆಂಟ್ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳಿಗೆ ಗೂದ್ದಲಿ ಪೂಜೆ ಮತ್ತು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₨ 3ಲಕ್ಷ ಸಹಾಯಧನ ಮತ್ತು ₨ 6ಲಕ್ಷ ಆರೋಗ್ಯ ಪರಿಹಾರಧನ ಹಾಗೂ ಪುರಸಭೆ 23ಪೌರ ಕಾರ್ಮಿಕರರಿಗೆ ₨7ಲಕ್ಷದ ಅನಿಲ ಸಿಲಿಂಡರ್ ಉಚಿತವಾಗಿ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ವಿತರಿಸಲಿದ್ದಾರೆ ಎಂದು ಮುಖ್ಯಾಧಿಕಾರಿ ರಮೇಶ ಪಟ್ಟೆದಾರ್ ಸಮಾರಂಭದ ವಿವರ ನೀಡಿದರು.<br /> <br /> ಸ್ವಯಂ ಉದ್ಯೋಗ ಮಾಡುತ್ತಿರುವ ಯುವಕರಿಗೆ ₨ 23ಲಕ್ಷ ಸಹಾಯಧನ ಹಾಗೂ ಅಂಗವಿಕಲರಿಗೆ ಮೂರು ಸೈಕಲ್ ವಿತರಣೆ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು. ಫೆ.28ರ ಸಮಾರಂಭಕ್ಕೆ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಚಿವ ಖಮರುಲ್ ಇಸ್ಲಾಂ ಭಾಗವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ: </strong>ಪುರಸಭೆ ವತಿಯಿಂದ ಹಮ್ಮಿಕೊಂಡ ಸಮಗ್ರ ನೀರು ಸರಬರಾಜು ಯೋಜನೆಯಡಿ ಸುಮಾರು ₨12ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಜಲ ಶುದ್ಧೀಕರಣ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲು ಫೆ.28ರಂದು ಪಟ್ಟಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ ಎಂದು ಅಧ್ಯಕ್ಷೆ ಹಸೀನಬೇಗಂ ಖುರೇಷಿ ತಿಳಿಸಿದರು.<br /> <br /> ಎಸ್ಎಫ್ಪಿ ಯೋಜನೆಯಡಿ ಸುಮಾರು ₨ 5ಲಕ್ಷ ವೆಚ್ಚದಲ್ಲಿ ಸಮುದಾಯ ಭವನ, ₨12ಲಕ್ಷದಲ್ಲಿ 7, 11 ನೇ ವಾರ್ಡ್ನಲ್ಲಿ ಮಹಿಳಾ ಸಮುದಾಯ ಶೌಚಾಲಯ ಕಟ್ಟಡವನ್ನು ಮುಖ್ಯಮಂತ್ರಿ ಉದ್ಘಾಟಿಸಿ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಿದ್ದಾರೆ ಎಂದು ಬುಧವಾರ ಪುರ-ಸಭೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> 5,7,10,19,ವಾರ್ಡ್ನಲ್ಲಿ ಸುಮಾರು ₨69ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಿಮೆಂಟ್ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳಿಗೆ ಗೂದ್ದಲಿ ಪೂಜೆ ಮತ್ತು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₨ 3ಲಕ್ಷ ಸಹಾಯಧನ ಮತ್ತು ₨ 6ಲಕ್ಷ ಆರೋಗ್ಯ ಪರಿಹಾರಧನ ಹಾಗೂ ಪುರಸಭೆ 23ಪೌರ ಕಾರ್ಮಿಕರರಿಗೆ ₨7ಲಕ್ಷದ ಅನಿಲ ಸಿಲಿಂಡರ್ ಉಚಿತವಾಗಿ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ವಿತರಿಸಲಿದ್ದಾರೆ ಎಂದು ಮುಖ್ಯಾಧಿಕಾರಿ ರಮೇಶ ಪಟ್ಟೆದಾರ್ ಸಮಾರಂಭದ ವಿವರ ನೀಡಿದರು.<br /> <br /> ಸ್ವಯಂ ಉದ್ಯೋಗ ಮಾಡುತ್ತಿರುವ ಯುವಕರಿಗೆ ₨ 23ಲಕ್ಷ ಸಹಾಯಧನ ಹಾಗೂ ಅಂಗವಿಕಲರಿಗೆ ಮೂರು ಸೈಕಲ್ ವಿತರಣೆ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು. ಫೆ.28ರ ಸಮಾರಂಭಕ್ಕೆ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಚಿವ ಖಮರುಲ್ ಇಸ್ಲಾಂ ಭಾಗವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>