<p><strong>ಬೆಂಗಳೂರು:</strong> ನಗರದ ವಾಣಿ ವಿಲಾಸ ಆಸ್ಪತ್ರೆಗೆ ವೈದ್ಯಕೀಯ ಸಚಿವ ಎಸ್.ಎ. ರಾಮದಾಸ್ ಅವರು ಸೋಮವಾರ ದಿಢೀರ್ ಭೇಟಿ ನೀಡಿದಾಗ ಅರ್ಧಕ್ಕಿಂತಲೂ ಹೆಚ್ಚಿನ ಸಿಬ್ಬಂದಿ ಗೈರುಹಾಜರಾಗಿರುವುದು ಕಂಡು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಹಾಗೂ ವೈದ್ಯಕೇತರ ಸಿಬ್ಬಂದಿ ಸೇರಿ ಒಟ್ಟು 311 ಸಿಬ್ಬಂದಿ ಇದ್ದರೆ, ಕರ್ತವ್ಯಕ್ಕೆ ಹಾಜರಾದವರ ಸಂಖ್ಯೆ ಕೇವಲ 132 ಸಿಬ್ಬಂದಿ. <br /> ಸುಮಾರು ಅರ್ಧಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗೈರುಹಾಜರಿಯಾಗಿರುವುದನ್ನು ಕಂಡು ಸಚಿವರು ಆಸ್ಪತ್ರೆಯ ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಆಡಳಿತದ ವಿರುದ್ಧ ಬಂದ ದೂರುಗಳ ನಿವಾರಣೆಗೆ ಸಮರ್ಪಕವಾಗಿ ಸ್ಪಂದಿಸಿಲ್ಲ.</p>.<p> ಅಲ್ಲದೇ ಇಲ್ಲಿನ ಸಿಬ್ಬಂದಿ ಲಂಚಕ್ಕಾಗಿ ಪೀಡಿಸುತ್ತಿರುವ ಕುರಿತು ಹಲವು ರೋಗಿಗಳು ದೂರು ದಾಖಲಿಸಿರುವುದು ಗಮನಕ್ಕೆ ಬಂದಿತು. ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ರಾಮದಾಸ್ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p><strong>ಅಮಾನತು?<br /> </strong>ವೈದ್ಯರ ಅನಧಿಕೃತ ಗೈರುಹಾಜರು ಹಾಗೂ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ಅಧೀಕ್ಷಕ ಡಾ.ಸೋಮೆಗೌಡ ಅವರನ್ನು ಅಮಾನತು ಮಾಡಲು ವೈದ್ಯಕೀಯ ಸಚಿವ ಎಸ್.ಎ. ರಾಮದಾಸ್ ಸೂಚನೆ ನೀಡಿದ್ದಾರೆ.</p>.<p>‘ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅಧೀಕ್ಷಕರನ್ನು ಅಮಾನತುಗೊಳಿಸುವಂತೆ ಮೌಖಿಕವಾಗಿ ಸೂಚನೆ ನೀಡಿದ್ದು ನಿಜ’ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಡಾ. ಸಿದ್ದಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ವಾಣಿ ವಿಲಾಸ ಆಸ್ಪತ್ರೆಗೆ ವೈದ್ಯಕೀಯ ಸಚಿವ ಎಸ್.ಎ. ರಾಮದಾಸ್ ಅವರು ಸೋಮವಾರ ದಿಢೀರ್ ಭೇಟಿ ನೀಡಿದಾಗ ಅರ್ಧಕ್ಕಿಂತಲೂ ಹೆಚ್ಚಿನ ಸಿಬ್ಬಂದಿ ಗೈರುಹಾಜರಾಗಿರುವುದು ಕಂಡು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಹಾಗೂ ವೈದ್ಯಕೇತರ ಸಿಬ್ಬಂದಿ ಸೇರಿ ಒಟ್ಟು 311 ಸಿಬ್ಬಂದಿ ಇದ್ದರೆ, ಕರ್ತವ್ಯಕ್ಕೆ ಹಾಜರಾದವರ ಸಂಖ್ಯೆ ಕೇವಲ 132 ಸಿಬ್ಬಂದಿ. <br /> ಸುಮಾರು ಅರ್ಧಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗೈರುಹಾಜರಿಯಾಗಿರುವುದನ್ನು ಕಂಡು ಸಚಿವರು ಆಸ್ಪತ್ರೆಯ ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಆಡಳಿತದ ವಿರುದ್ಧ ಬಂದ ದೂರುಗಳ ನಿವಾರಣೆಗೆ ಸಮರ್ಪಕವಾಗಿ ಸ್ಪಂದಿಸಿಲ್ಲ.</p>.<p> ಅಲ್ಲದೇ ಇಲ್ಲಿನ ಸಿಬ್ಬಂದಿ ಲಂಚಕ್ಕಾಗಿ ಪೀಡಿಸುತ್ತಿರುವ ಕುರಿತು ಹಲವು ರೋಗಿಗಳು ದೂರು ದಾಖಲಿಸಿರುವುದು ಗಮನಕ್ಕೆ ಬಂದಿತು. ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ರಾಮದಾಸ್ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p><strong>ಅಮಾನತು?<br /> </strong>ವೈದ್ಯರ ಅನಧಿಕೃತ ಗೈರುಹಾಜರು ಹಾಗೂ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ಅಧೀಕ್ಷಕ ಡಾ.ಸೋಮೆಗೌಡ ಅವರನ್ನು ಅಮಾನತು ಮಾಡಲು ವೈದ್ಯಕೀಯ ಸಚಿವ ಎಸ್.ಎ. ರಾಮದಾಸ್ ಸೂಚನೆ ನೀಡಿದ್ದಾರೆ.</p>.<p>‘ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅಧೀಕ್ಷಕರನ್ನು ಅಮಾನತುಗೊಳಿಸುವಂತೆ ಮೌಖಿಕವಾಗಿ ಸೂಚನೆ ನೀಡಿದ್ದು ನಿಜ’ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಡಾ. ಸಿದ್ದಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>