<p><strong>ಶಿವಮೊಗ್ಗ:</strong> ‘ಮಾಟ-ಮಂತ್ರ ಮಾಡಿಸಿ, ಕೊಲ್ಲಲು ಷಡ್ಯಂತ್ರ ರೂಪಿಸಲಾಗಿದೆ ಎನ್ನುವುದು ಮುಖ್ಯಮಂತ್ರಿಗಳ ವೈಯಕ್ತಿಕ ಅಭಿಪ್ರಾಯ. ಈ ಮೂಲಕ ಅವರು ತಮ್ಮ ಆತಂಕ ಬಹಿರಂಗಪಡಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ತಿಳಿಸಿದರು. <br /> <br /> ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮ್ಮ ವಿರುದ್ಧ ವಾಮಾಚಾರ ಮಾಡಲಾಗುತ್ತಿದೆ ಎಂಬುದು ಗೊತ್ತಾದಾಗ ಅದನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವ ಬದಲು ಬಹಿರಂಗಪಡಿಸುವುದು ಸೂಕ್ತ. ವೈಯಕ್ತಿಕವಾಗಿ ನಾನೂ ವಾಮಾಚಾರ ನಂಬುತ್ತೇನೆ’ ಎಂದು ಪ್ರತಿಕ್ರಿಯಿಸಿದರು. <br /> <br /> ರಾಜ್ಯದಲ್ಲಿ ಮಾಟ-ಮಂತ್ರಕ್ಕೆ ಪ್ರತಿಪಕ್ಷಗಳು ಪ್ರಸಿದ್ಧಿ ಪಡೆದಿವೆ. ವಾಮಮಾರ್ಗದ ಮೂಲಕ ಅಧಿಕಾರದ ಗದ್ದುಗೆ ಏರಲು ಮಾಟ-ಮಂತ್ರ ಮಾಡುವ ಪರಿಸ್ಥಿತಿಯೂ ಇದೆ ಎಂದು ಆರೋಪಿಸಿದರು. <br /> <br /> ‘ವರದಿ ಒಪ್ಪಿಕೊಳ್ಳಿ’: ನ್ಯಾ. ಸೋಮಶೇಖರ್ ಆಯೋಗ, ಚರ್ಚ್ಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ಹತ್ತಾರು ಸ್ಥಳಗಳಿಗೆ ಭೇಟಿ ನೀಡಿ, ನೂರಾರು ಸಾಕ್ಷಿಗಳನ್ನು ಕಲೆ ಹಾಕಿ ಕೂಲಂಕಷವಾಗಿ ಪರಿಶೀಲಿಸಿ, ವರದಿ ಸಲ್ಲಿಸಿದೆ. ಅದನ್ನು ಒಪ್ಪಿಕೊಳ್ಳಬೇಕು ಎಂದು ಈಶ್ವರಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಮಾಟ-ಮಂತ್ರ ಮಾಡಿಸಿ, ಕೊಲ್ಲಲು ಷಡ್ಯಂತ್ರ ರೂಪಿಸಲಾಗಿದೆ ಎನ್ನುವುದು ಮುಖ್ಯಮಂತ್ರಿಗಳ ವೈಯಕ್ತಿಕ ಅಭಿಪ್ರಾಯ. ಈ ಮೂಲಕ ಅವರು ತಮ್ಮ ಆತಂಕ ಬಹಿರಂಗಪಡಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ತಿಳಿಸಿದರು. <br /> <br /> ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮ್ಮ ವಿರುದ್ಧ ವಾಮಾಚಾರ ಮಾಡಲಾಗುತ್ತಿದೆ ಎಂಬುದು ಗೊತ್ತಾದಾಗ ಅದನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವ ಬದಲು ಬಹಿರಂಗಪಡಿಸುವುದು ಸೂಕ್ತ. ವೈಯಕ್ತಿಕವಾಗಿ ನಾನೂ ವಾಮಾಚಾರ ನಂಬುತ್ತೇನೆ’ ಎಂದು ಪ್ರತಿಕ್ರಿಯಿಸಿದರು. <br /> <br /> ರಾಜ್ಯದಲ್ಲಿ ಮಾಟ-ಮಂತ್ರಕ್ಕೆ ಪ್ರತಿಪಕ್ಷಗಳು ಪ್ರಸಿದ್ಧಿ ಪಡೆದಿವೆ. ವಾಮಮಾರ್ಗದ ಮೂಲಕ ಅಧಿಕಾರದ ಗದ್ದುಗೆ ಏರಲು ಮಾಟ-ಮಂತ್ರ ಮಾಡುವ ಪರಿಸ್ಥಿತಿಯೂ ಇದೆ ಎಂದು ಆರೋಪಿಸಿದರು. <br /> <br /> ‘ವರದಿ ಒಪ್ಪಿಕೊಳ್ಳಿ’: ನ್ಯಾ. ಸೋಮಶೇಖರ್ ಆಯೋಗ, ಚರ್ಚ್ಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ಹತ್ತಾರು ಸ್ಥಳಗಳಿಗೆ ಭೇಟಿ ನೀಡಿ, ನೂರಾರು ಸಾಕ್ಷಿಗಳನ್ನು ಕಲೆ ಹಾಕಿ ಕೂಲಂಕಷವಾಗಿ ಪರಿಶೀಲಿಸಿ, ವರದಿ ಸಲ್ಲಿಸಿದೆ. ಅದನ್ನು ಒಪ್ಪಿಕೊಳ್ಳಬೇಕು ಎಂದು ಈಶ್ವರಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>