<p><strong>ಬೆಂಗಳೂರು: </strong>ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಖುದ್ದು ಅವರೇ ಮಂಗಳವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.<br /> <br /> ಅವರ ಪ್ರತಿಕ್ರಿಯೆ ಇರುವ ವಿಡಿಯೊ ಪ್ರತಿ ಬಿಡುಗಡೆಯಾಗಿದ್ದು, ಅದರಲ್ಲಿ ಅವರ ಮಾತು ಇಂತಿದೆ.<br /> ನಾನು ನಿಮ್ಮ ಅಂಬರೀಷ್ ಎಂದು ಮಾತು ಆರಂಭಿಸಿದ ಅವರು, ‘ಆರೋಗ್ಯದಲ್ಲಿ ತುಸು ಏರುಪೇರಾಗಿತ್ತು. ಅಭಿಮಾನಿಗಳು ತೋರಿಸಿದ ಪ್ರೀತಿಯಿಂದ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ’ ಎಂದು ತಿಳಿಸಿದ್ದಾರೆ.<br /> <br /> ‘ನಾನೊಬ್ಬ ನಟ, ಸಚಿವ ಅಂತ ಸರ್ಕಾರ ಸಹಾಯ ಮಾಡಿಲ್ಲ. ನನಗೆ ಪ್ರೀತಿಯಿಂದ ನೆರವು ನೀಡಿದೆ. ಇಂತಹ ಸಂದರ್ಭಗಳಲ್ಲಿ ಸ್ಪಂದಿಸುವುದು ಮುಖ್ಯ. ಈ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಋಣಿಯಾಗಿದ್ದೇನೆ’ ಎಂದು ಭಾವುಕರಾದರು.<br /> <br /> ‘ಅಭಿಮಾನಿಗಳ ಪೂಜೆ, ಪುನಸ್ಕಾರ ಫಲಿಸಿದೆ. ಆತಂಕ ಬೇಡ. ವಿಕ್ರಂ ಆಸ್ಪತ್ರೆಯ ವೈದ್ಯರು ಹಾಗೂ ಸಿಂಗಪುರ ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದಾರೆ. ಇನ್ನು ವಾರದಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ’ ಎಂದು ತಿಳಿಸಿದರು.<br /> <br /> ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರು ಫೆ. 21 ರಂದು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಾರ್ಚ್ 1 ರಂದು ವಿಶೇಷ ಏರ್ ಆಂಬುಲೆನ್ಸ್ನಲ್ಲಿ ಅವರನ್ನು ಸಿಂಗಪುರಕ್ಕೆ ಕರೆದುಕೊಂಡು ಹೋಗಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಖುದ್ದು ಅವರೇ ಮಂಗಳವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.<br /> <br /> ಅವರ ಪ್ರತಿಕ್ರಿಯೆ ಇರುವ ವಿಡಿಯೊ ಪ್ರತಿ ಬಿಡುಗಡೆಯಾಗಿದ್ದು, ಅದರಲ್ಲಿ ಅವರ ಮಾತು ಇಂತಿದೆ.<br /> ನಾನು ನಿಮ್ಮ ಅಂಬರೀಷ್ ಎಂದು ಮಾತು ಆರಂಭಿಸಿದ ಅವರು, ‘ಆರೋಗ್ಯದಲ್ಲಿ ತುಸು ಏರುಪೇರಾಗಿತ್ತು. ಅಭಿಮಾನಿಗಳು ತೋರಿಸಿದ ಪ್ರೀತಿಯಿಂದ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ’ ಎಂದು ತಿಳಿಸಿದ್ದಾರೆ.<br /> <br /> ‘ನಾನೊಬ್ಬ ನಟ, ಸಚಿವ ಅಂತ ಸರ್ಕಾರ ಸಹಾಯ ಮಾಡಿಲ್ಲ. ನನಗೆ ಪ್ರೀತಿಯಿಂದ ನೆರವು ನೀಡಿದೆ. ಇಂತಹ ಸಂದರ್ಭಗಳಲ್ಲಿ ಸ್ಪಂದಿಸುವುದು ಮುಖ್ಯ. ಈ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಋಣಿಯಾಗಿದ್ದೇನೆ’ ಎಂದು ಭಾವುಕರಾದರು.<br /> <br /> ‘ಅಭಿಮಾನಿಗಳ ಪೂಜೆ, ಪುನಸ್ಕಾರ ಫಲಿಸಿದೆ. ಆತಂಕ ಬೇಡ. ವಿಕ್ರಂ ಆಸ್ಪತ್ರೆಯ ವೈದ್ಯರು ಹಾಗೂ ಸಿಂಗಪುರ ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದಾರೆ. ಇನ್ನು ವಾರದಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ’ ಎಂದು ತಿಳಿಸಿದರು.<br /> <br /> ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರು ಫೆ. 21 ರಂದು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಾರ್ಚ್ 1 ರಂದು ವಿಶೇಷ ಏರ್ ಆಂಬುಲೆನ್ಸ್ನಲ್ಲಿ ಅವರನ್ನು ಸಿಂಗಪುರಕ್ಕೆ ಕರೆದುಕೊಂಡು ಹೋಗಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>