<p><strong>ಬೆಂಗಳೂರು: </strong>ನಗರದ ವಿವಿಧ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿದ ಉಪ ಲೋಕಾಯುಕ್ತ ಎಸ್. ಬಿ.ಮಜ್ಜಗೆ ಅವರು ಇನ್ನೊಂದು ವಾರದೊಳಗೆ ರಸ್ತೆಗಳ ಗುಂಡಿಗಳನ್ನು ಮುಚ್ಚುವಂತೆ ಹಾಗೂ ರಸ್ತೆಗಳ ಬದಿಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಲಾಲ್ಬಾಗ್ ಸಮೀಪದ ಸಿದ್ದಯ್ಯ ರಸ್ತೆ, ಕೆ.ಆರ್.ರಸ್ತೆ, ಕೆ.ಜಿ.ರಸ್ತೆ, ಆರ್ಕಾಟ್ ಶ್ರೀನಿವಾಸಾಚಾರ್ ರಸ್ತೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆ, ಅರಮನೆ ರಸ್ತೆ, ಗುಬ್ಬಿ ತೋಟದಪ್ಪ ರಸ್ತೆ, ಧನ್ವಂತ್ರಿ ರಸ್ತೆ, ಓಕಳಿಪುರ ಮುಖ್ಯರಸ್ತೆಗಳಿಗೆ ಭೇಟಿ ನೀಡಿದ ಮಜ್ಜಗೆ ಅವರು, ರಸ್ತೆಗಳಲ್ಲಿನ ಗುಂಡಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.<br /> `ರಸ್ತೆಗಳ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಬಿಬಿಎಂಪಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮಳೆಗಾಲಕ್ಕೂ ಮುನ್ನ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಬೇಕಿತ್ತು. ಆದರೆ, ಈ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ವಿಫಲರಾಗಿದ್ದಾರೆ. ಗುಂಡಿಗಳಿಂದ ಹೆಚ್ಚು ಅನಾಹುತವಾಗದಂತೆ ಮೊದಲು ಗುಂಡಿಗಳನ್ನು ಮುಚ್ಚಬೇಕು.<br /> <br /> ಮಳೆಗಾಲದ ನಂತರ ರಸ್ತೆಗಳ ಸಂಪೂರ್ಣ ನವೀಕರಣಕ್ಕೆ ಬಿಬಿಎಂಪಿ ಮುಂದಾಗಬೇಕು' ಎಂದು ಅವರು ಸೂಚಿಸಿದರು. ಕೆ.ಜಿ.ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಪರಿಶೀಲಿಸುವ ವೇಳೆ ಕಾವೇರಿ ಭವನದ ಎದುರಿನ ಸ್ಕೈವಾಕ್ನ ಲಿಫ್ಟ್ ಕಾರ್ಯನಿರ್ವಹಿಸದೇ ಇರುವುದನ್ನು ಗಮನಿಸಿದ ಅವರು, `ಹತ್ತು ದಿನಗಳೊಳಗೆ ಲಿಫ್ಟ್ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಕೆ.ಆರ್.ಮಾರುಕಟ್ಟೆ ಸಮೀಪದ ಆರ್ಕಾಟ್ ಶ್ರೀನಿವಾಸಾಚಾರ್ ರಸ್ತೆ ಬದಿಯಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನು ನಾಳೆ ಸಂಜೆಯೊಳಗೆ ವಿಲೇವಾರಿ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. `ಒಂದು ವಾರದೊಳಗೆ ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಬದಿಗಳಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ಆದಷ್ಟು ಬೇಗ ವಿಲೇವಾರಿ ಮಾಡಲಾಗುವುದು' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ವಿವಿಧ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿದ ಉಪ ಲೋಕಾಯುಕ್ತ ಎಸ್. ಬಿ.ಮಜ್ಜಗೆ ಅವರು ಇನ್ನೊಂದು ವಾರದೊಳಗೆ ರಸ್ತೆಗಳ ಗುಂಡಿಗಳನ್ನು ಮುಚ್ಚುವಂತೆ ಹಾಗೂ ರಸ್ತೆಗಳ ಬದಿಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಲಾಲ್ಬಾಗ್ ಸಮೀಪದ ಸಿದ್ದಯ್ಯ ರಸ್ತೆ, ಕೆ.ಆರ್.ರಸ್ತೆ, ಕೆ.ಜಿ.ರಸ್ತೆ, ಆರ್ಕಾಟ್ ಶ್ರೀನಿವಾಸಾಚಾರ್ ರಸ್ತೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆ, ಅರಮನೆ ರಸ್ತೆ, ಗುಬ್ಬಿ ತೋಟದಪ್ಪ ರಸ್ತೆ, ಧನ್ವಂತ್ರಿ ರಸ್ತೆ, ಓಕಳಿಪುರ ಮುಖ್ಯರಸ್ತೆಗಳಿಗೆ ಭೇಟಿ ನೀಡಿದ ಮಜ್ಜಗೆ ಅವರು, ರಸ್ತೆಗಳಲ್ಲಿನ ಗುಂಡಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.<br /> `ರಸ್ತೆಗಳ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಬಿಬಿಎಂಪಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮಳೆಗಾಲಕ್ಕೂ ಮುನ್ನ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಬೇಕಿತ್ತು. ಆದರೆ, ಈ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ವಿಫಲರಾಗಿದ್ದಾರೆ. ಗುಂಡಿಗಳಿಂದ ಹೆಚ್ಚು ಅನಾಹುತವಾಗದಂತೆ ಮೊದಲು ಗುಂಡಿಗಳನ್ನು ಮುಚ್ಚಬೇಕು.<br /> <br /> ಮಳೆಗಾಲದ ನಂತರ ರಸ್ತೆಗಳ ಸಂಪೂರ್ಣ ನವೀಕರಣಕ್ಕೆ ಬಿಬಿಎಂಪಿ ಮುಂದಾಗಬೇಕು' ಎಂದು ಅವರು ಸೂಚಿಸಿದರು. ಕೆ.ಜಿ.ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಪರಿಶೀಲಿಸುವ ವೇಳೆ ಕಾವೇರಿ ಭವನದ ಎದುರಿನ ಸ್ಕೈವಾಕ್ನ ಲಿಫ್ಟ್ ಕಾರ್ಯನಿರ್ವಹಿಸದೇ ಇರುವುದನ್ನು ಗಮನಿಸಿದ ಅವರು, `ಹತ್ತು ದಿನಗಳೊಳಗೆ ಲಿಫ್ಟ್ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಕೆ.ಆರ್.ಮಾರುಕಟ್ಟೆ ಸಮೀಪದ ಆರ್ಕಾಟ್ ಶ್ರೀನಿವಾಸಾಚಾರ್ ರಸ್ತೆ ಬದಿಯಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನು ನಾಳೆ ಸಂಜೆಯೊಳಗೆ ವಿಲೇವಾರಿ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. `ಒಂದು ವಾರದೊಳಗೆ ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಬದಿಗಳಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ಆದಷ್ಟು ಬೇಗ ವಿಲೇವಾರಿ ಮಾಡಲಾಗುವುದು' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>