<p><strong>ವಾರಾಣಸಿ (ಪಿಟಿಐ/ಐಎಎನ್ಎಸ್)</strong>: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ತಾವು ಕಣಕ್ಕೆ ಇಳಿಯುವುದಾಗಿ ದೆಹಲಿ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.<br /> <br /> ಇಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಕೇಜ್ರಿವಾಲ್, ‘ಹಿಂದೂಗಳ ಪವಿತ್ರ ನಗರವಾದ ವಾರಾಣಸಿಯಿಂದಲೇ ಮೋದಿ ವಿರುದ್ಧ ಸ್ಪರ್ಧಿಸುವ ಸವಾಲು ಸ್ವೀಕರಿಸುವೆ’ ಎಂದರು. ಪಕ್ಷದ ಚಿಹ್ನೆಯಾದ ಪೊರಕೆಯೊಂದಿಗೆ ಜಮಾಯಿಸಿದ್ದ ನೂರಾರು ಕಾರ್ಯಕರ್ತರು ಹರ್ಷೋದ್ಗಾರಗಳ ಮೂಲಕ ಇದಕ್ಕೆ ಸಮ್ಮತಿ ನೀಡಿದರು.<br /> <br /> ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ದಿಗ್ವಿಜಯ್ ಸಿಂಗ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಮೋದಿ ಸ್ಪರ್ಧಿಸಿರುವ ಇನ್ನೊಂದು ಕ್ಷೇತ್ರವಾದ ಗುಜರಾತ್ನ ವಡೋದರಾದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.<br /> <br /> <strong>ಮೋದಿ, ರಾಹುಲ್ ವಿರುದ್ಧ ವಾಗ್ದಾಳಿ</strong>: ‘ಪ್ರಧಾನಿಯಾಗುವ ಹಪಾಹಪಿಯಲ್ಲಿ ಮೋದಿ ಕಳಂಕಿತ ರಾಜಕಾರಣಿಗಳ ಜತೆ ಸಖ್ಯ ಮಾಡಿಕೊಂಡಿದ್ದಾರೆ. ಅವರು ಕಾರ್ಪೊರೇಟ್ ಕ್ಷೇತ್ರದ ಏಜೆಂಟರು. ಗುಜರಾತ್ ಅಭಿವೃದ್ಧಿ ಕುರಿತ ವ್ಯಾಖ್ಯಾನಗಳೆಲ್ಲ ಕಟ್ಟುಕಥೆಯಾಗಿವೆ’ ಎಂದು ಕೇಜ್ರಿವಾಲ್ ವಾರಾಣಸಿಯಲ್ಲಿ ಮೂದಲಿಸಿದರು.<br /> <br /> ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರತ್ತಲೂ ಮಾತಿನ ಬಾಣ ಪ್ರಯೋಗಿಸಿದ ಅವರು, ‘ಕಾಂಗ್ರೆಸ್ ಚಕ್ರವರ್ತಿ ಕೂಡ ಮೋದಿ ಅವರಿಗಿಂತ ಭಿನ್ನವಾಗಿಲ್ಲ. ಇವರಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳು’ ಎಂದು ಲೇವಡಿ ಮಾಡಿದರು.<br /> <br /> ‘ಕಾಂಗ್ರೆಸ್ ಮಂದಿ ತಮ್ಮ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಹೀಗಿರುವಾಗ ಈ ಎರಡೂ ಪಕ್ಷಗಳ ಮಧ್ಯೆ ಯಾವ ವ್ಯತ್ಯಾಸವೂ ಕಾಣದು. ಯುಪಿಎ ಹತ್ತು ವರ್ಷಗಳ ಆಡಳಿತಕ್ಕೆ ಜನ ರೋಸಿ ಹೋಗಿದ್ದಾರೆ. ಈ ಬಾರಿ ಯುಪಿಎ ಹಾಗೂ ಎನ್ಡಿಎ ಮೈತ್ರಿಕೂಟಗಳಿಗೆ ಮಣ್ಣುಮುಕ್ಕಿಸಬೇಕು. ದೇಶದಲ್ಲಿ ಹೊಸ ರೀತಿಯ ರಾಜಕೀಯಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಕರೆ ನೀಡಿದರು.<br /> <br /> ‘ನನ್ನ ಸಹೋದ್ಯೋಗಿ ಕುಮಾರ್ ವಿಶ್ವಾಸ್ ಅವರು ಉತ್ತರಪ್ರದೇಶದ ಅಮೇಠಿಯಿಂದ ರಾಹುಲ್ ಗಾಂಧಿ ವಿರುದ್ಧ ಸೆಣಸುತ್ತಿದ್ದಾರೆ. ನಾನು ವಾರಾಣಸಿಯಿಂದ ಮೋದಿ ವಿರುದ್ಧ ಅಖಾಡಕ್ಕೆ ಇಳಿಯುತ್ತಿದ್ದೇನೆ. ರಾಹುಲ್ ಹಾಗೂ ಮೋದಿ ಸೋತಲ್ಲಿ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಲಿದೆ’ ಎಂದು ವಿಶ್ಲೇಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ (ಪಿಟಿಐ/ಐಎಎನ್ಎಸ್)</strong>: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ತಾವು ಕಣಕ್ಕೆ ಇಳಿಯುವುದಾಗಿ ದೆಹಲಿ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.<br /> <br /> ಇಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಕೇಜ್ರಿವಾಲ್, ‘ಹಿಂದೂಗಳ ಪವಿತ್ರ ನಗರವಾದ ವಾರಾಣಸಿಯಿಂದಲೇ ಮೋದಿ ವಿರುದ್ಧ ಸ್ಪರ್ಧಿಸುವ ಸವಾಲು ಸ್ವೀಕರಿಸುವೆ’ ಎಂದರು. ಪಕ್ಷದ ಚಿಹ್ನೆಯಾದ ಪೊರಕೆಯೊಂದಿಗೆ ಜಮಾಯಿಸಿದ್ದ ನೂರಾರು ಕಾರ್ಯಕರ್ತರು ಹರ್ಷೋದ್ಗಾರಗಳ ಮೂಲಕ ಇದಕ್ಕೆ ಸಮ್ಮತಿ ನೀಡಿದರು.<br /> <br /> ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ದಿಗ್ವಿಜಯ್ ಸಿಂಗ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಮೋದಿ ಸ್ಪರ್ಧಿಸಿರುವ ಇನ್ನೊಂದು ಕ್ಷೇತ್ರವಾದ ಗುಜರಾತ್ನ ವಡೋದರಾದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.<br /> <br /> <strong>ಮೋದಿ, ರಾಹುಲ್ ವಿರುದ್ಧ ವಾಗ್ದಾಳಿ</strong>: ‘ಪ್ರಧಾನಿಯಾಗುವ ಹಪಾಹಪಿಯಲ್ಲಿ ಮೋದಿ ಕಳಂಕಿತ ರಾಜಕಾರಣಿಗಳ ಜತೆ ಸಖ್ಯ ಮಾಡಿಕೊಂಡಿದ್ದಾರೆ. ಅವರು ಕಾರ್ಪೊರೇಟ್ ಕ್ಷೇತ್ರದ ಏಜೆಂಟರು. ಗುಜರಾತ್ ಅಭಿವೃದ್ಧಿ ಕುರಿತ ವ್ಯಾಖ್ಯಾನಗಳೆಲ್ಲ ಕಟ್ಟುಕಥೆಯಾಗಿವೆ’ ಎಂದು ಕೇಜ್ರಿವಾಲ್ ವಾರಾಣಸಿಯಲ್ಲಿ ಮೂದಲಿಸಿದರು.<br /> <br /> ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರತ್ತಲೂ ಮಾತಿನ ಬಾಣ ಪ್ರಯೋಗಿಸಿದ ಅವರು, ‘ಕಾಂಗ್ರೆಸ್ ಚಕ್ರವರ್ತಿ ಕೂಡ ಮೋದಿ ಅವರಿಗಿಂತ ಭಿನ್ನವಾಗಿಲ್ಲ. ಇವರಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳು’ ಎಂದು ಲೇವಡಿ ಮಾಡಿದರು.<br /> <br /> ‘ಕಾಂಗ್ರೆಸ್ ಮಂದಿ ತಮ್ಮ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಹೀಗಿರುವಾಗ ಈ ಎರಡೂ ಪಕ್ಷಗಳ ಮಧ್ಯೆ ಯಾವ ವ್ಯತ್ಯಾಸವೂ ಕಾಣದು. ಯುಪಿಎ ಹತ್ತು ವರ್ಷಗಳ ಆಡಳಿತಕ್ಕೆ ಜನ ರೋಸಿ ಹೋಗಿದ್ದಾರೆ. ಈ ಬಾರಿ ಯುಪಿಎ ಹಾಗೂ ಎನ್ಡಿಎ ಮೈತ್ರಿಕೂಟಗಳಿಗೆ ಮಣ್ಣುಮುಕ್ಕಿಸಬೇಕು. ದೇಶದಲ್ಲಿ ಹೊಸ ರೀತಿಯ ರಾಜಕೀಯಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಕರೆ ನೀಡಿದರು.<br /> <br /> ‘ನನ್ನ ಸಹೋದ್ಯೋಗಿ ಕುಮಾರ್ ವಿಶ್ವಾಸ್ ಅವರು ಉತ್ತರಪ್ರದೇಶದ ಅಮೇಠಿಯಿಂದ ರಾಹುಲ್ ಗಾಂಧಿ ವಿರುದ್ಧ ಸೆಣಸುತ್ತಿದ್ದಾರೆ. ನಾನು ವಾರಾಣಸಿಯಿಂದ ಮೋದಿ ವಿರುದ್ಧ ಅಖಾಡಕ್ಕೆ ಇಳಿಯುತ್ತಿದ್ದೇನೆ. ರಾಹುಲ್ ಹಾಗೂ ಮೋದಿ ಸೋತಲ್ಲಿ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಲಿದೆ’ ಎಂದು ವಿಶ್ಲೇಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>