<p>ದಾವಣಗೆರೆ: ಆಯಾ ವಾರ್ಡ್ನಲ್ಲಿ ಸಂಗ್ರಹವಾದ ಕಂದಾಯವನ್ನು ಅದೇ ವಾರ್ಡ್ನ ಅಭಿವೃದ್ಧಿಗೆ ಬಳಸುವ ಕುರಿತು ಪಾಲಿಕೆ ಸಭೆಯಲ್ಲಿ ತೀರ್ಮಾನ ತೆಗೆದು ಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಸಲಹೆ ನೀಡಿದರು.<br /> <br /> ನಗರದ 36ನೇ ವಾರ್ಡ್ನಲ್ಲಿ ಶನಿವಾರ ಮುಖ್ಯಮಂತ್ರಿ ವಿಶೇಷ ಅನುದಾನ ಹಾಗೂ ಸ್ಥಳೀಯ ಪ್ರದೇಶಾ ಭಿವೃದ್ಧಿ ಯೋಜನೆ ಅಡಿ ನಿರ್ಮಿಸಿರುವ ವಾಣಿಜ್ಯ ಮಳಿಗೆ, ವಾರ್ಡ್ ಕಚೇರಿ ಹಾಗೂ ವ್ಯಾಯಾಮ ಶಾಲೆ ಉದ್ಘಾಟಿಸಿ, ಅವರು ಮಾತನಾಡಿದರು.<br /> <br /> ಜನರು ಕಂದಾಯ ಕಟ್ಟುವ ಹಣ ತಮ್ಮ ಬಡಾವಣೆಯ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂಬ ಬಗ್ಗೆ ಮನವರಿಕೆಯಾದರೆ, ಕಂದಾಯ ಕಟ್ಟಲು ಉತ್ಸಾಹ ತೋರುತ್ತಾರೆ. ವಸೂಲಾತಿಯ ಪ್ರಮಾಣ ಗಣನೀಯವಾಗಿ ಹೆಚ್ಚುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ನಗರದಲ್ಲಿ ಸುಮಾರು 20 ಸಾವಿರ ಮನೆ ಅಕ್ರಮವಾಗಿ ನಿರ್ಮಿಸಿದ್ದಾರೆ. ಕಂದಾಯ ಭೂಮಿಯನ್ನು ನಿವೇಶನಕ್ಕೆ ಪರಿವರ್ತಿಸಿಲ್ಲ. ಆದರೂ, ಎಲ್ಲ ವಾರ್ಡ್ಗಳಲ್ಲೂ ತಾರತಮ್ಯವಿಲ್ಲದೇ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಇನ್ನಾದರೂ ಜನರು ತಪ್ಪು ಮಾಡದೇ ಸರಿಯಾದ ರೀತಿಯಲ್ಲಿ ನಡೆದು ಪಾಲಿಕೆಯೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.<br /> <br /> ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ, ಪಾಲಿಕೆ ಸಾರ್ವಜನಿಕರಿಗೆ ಉಪಯುಕ್ತವಾಗುವ ಯೋಜನೆ ರೂಪಿಸಬೇಕು. ಸವಲತ್ತುಗಳು ಜನರಿಗೆ ತಲುಪುವಂತಾಗಬೇಕು ಎಂದು ಕಿವಿ ಮಾತು ಹೇಳಿದರು.<br /> <br /> ವಾರ್ಡ್ ಸದಸ್ಯ ಪಿ.ಎಸ್. ಜಯಣ್ಣ ಮಾತನಾಡಿ, ಹಿಂದೆ ವಾರ್ಡ್ನಲ್ಲಿ ಅಭಿವೃದ್ಧಿಯೇ ಆಗಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಿನ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆದ್ಯತೆ ನೀಡಲಾಗುವುದು ಎಂದರು.<br /> <br /> ಮೇಯರ್ ಎಂ.ಜಿ. ಬಕ್ಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ಲೋಕೇಶ್, ಮಾಜಿ ಮೇಯರ್ ಉಮಾ ಪ್ರಕಾಶ್, ಆಯಕ್ತ ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.<br /> ಆಯುಕ್ತ ಅನಾಥ!: ಪಾಲಿಕೆ ಕಾರ್ಯಕ್ರಮಗಳಲ್ಲಿ ಆಯಕ್ತರನ್ನು ವೇದಿಕೆಗೆ ಆಹ್ವಾನಿಸುವುದು ಸಂಪ್ರದಾಯ. ಆದರೆ, ಶನಿವಾರ ನಗರದ 36ನೇ ವಾರ್ಡ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯಕ್ತರು ಹಾಜರಿದ್ದರೂ, ಅವರನ್ನು ವೇದಿಕೆಗೆ ಕರೆಯಲಿಲ್ಲ. <br /> <br /> ಕಾರ್ಯಕ್ರಮ ಮುಗಿಯುವವರೆಗೂ ಆಯಕ್ತರು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ಆಡಳಿತ ಪಕ್ಷ ಹಾಗೂ ಆಯಕ್ತರ ನಡುವಿನ ಮುಸುಕಿನ ತಿಕ್ಕಾಟ ಇಲ್ಲೂ ಮುಂದುವರಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಆಯಾ ವಾರ್ಡ್ನಲ್ಲಿ ಸಂಗ್ರಹವಾದ ಕಂದಾಯವನ್ನು ಅದೇ ವಾರ್ಡ್ನ ಅಭಿವೃದ್ಧಿಗೆ ಬಳಸುವ ಕುರಿತು ಪಾಲಿಕೆ ಸಭೆಯಲ್ಲಿ ತೀರ್ಮಾನ ತೆಗೆದು ಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಸಲಹೆ ನೀಡಿದರು.<br /> <br /> ನಗರದ 36ನೇ ವಾರ್ಡ್ನಲ್ಲಿ ಶನಿವಾರ ಮುಖ್ಯಮಂತ್ರಿ ವಿಶೇಷ ಅನುದಾನ ಹಾಗೂ ಸ್ಥಳೀಯ ಪ್ರದೇಶಾ ಭಿವೃದ್ಧಿ ಯೋಜನೆ ಅಡಿ ನಿರ್ಮಿಸಿರುವ ವಾಣಿಜ್ಯ ಮಳಿಗೆ, ವಾರ್ಡ್ ಕಚೇರಿ ಹಾಗೂ ವ್ಯಾಯಾಮ ಶಾಲೆ ಉದ್ಘಾಟಿಸಿ, ಅವರು ಮಾತನಾಡಿದರು.<br /> <br /> ಜನರು ಕಂದಾಯ ಕಟ್ಟುವ ಹಣ ತಮ್ಮ ಬಡಾವಣೆಯ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂಬ ಬಗ್ಗೆ ಮನವರಿಕೆಯಾದರೆ, ಕಂದಾಯ ಕಟ್ಟಲು ಉತ್ಸಾಹ ತೋರುತ್ತಾರೆ. ವಸೂಲಾತಿಯ ಪ್ರಮಾಣ ಗಣನೀಯವಾಗಿ ಹೆಚ್ಚುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ನಗರದಲ್ಲಿ ಸುಮಾರು 20 ಸಾವಿರ ಮನೆ ಅಕ್ರಮವಾಗಿ ನಿರ್ಮಿಸಿದ್ದಾರೆ. ಕಂದಾಯ ಭೂಮಿಯನ್ನು ನಿವೇಶನಕ್ಕೆ ಪರಿವರ್ತಿಸಿಲ್ಲ. ಆದರೂ, ಎಲ್ಲ ವಾರ್ಡ್ಗಳಲ್ಲೂ ತಾರತಮ್ಯವಿಲ್ಲದೇ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಇನ್ನಾದರೂ ಜನರು ತಪ್ಪು ಮಾಡದೇ ಸರಿಯಾದ ರೀತಿಯಲ್ಲಿ ನಡೆದು ಪಾಲಿಕೆಯೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.<br /> <br /> ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ, ಪಾಲಿಕೆ ಸಾರ್ವಜನಿಕರಿಗೆ ಉಪಯುಕ್ತವಾಗುವ ಯೋಜನೆ ರೂಪಿಸಬೇಕು. ಸವಲತ್ತುಗಳು ಜನರಿಗೆ ತಲುಪುವಂತಾಗಬೇಕು ಎಂದು ಕಿವಿ ಮಾತು ಹೇಳಿದರು.<br /> <br /> ವಾರ್ಡ್ ಸದಸ್ಯ ಪಿ.ಎಸ್. ಜಯಣ್ಣ ಮಾತನಾಡಿ, ಹಿಂದೆ ವಾರ್ಡ್ನಲ್ಲಿ ಅಭಿವೃದ್ಧಿಯೇ ಆಗಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಿನ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆದ್ಯತೆ ನೀಡಲಾಗುವುದು ಎಂದರು.<br /> <br /> ಮೇಯರ್ ಎಂ.ಜಿ. ಬಕ್ಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ಲೋಕೇಶ್, ಮಾಜಿ ಮೇಯರ್ ಉಮಾ ಪ್ರಕಾಶ್, ಆಯಕ್ತ ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.<br /> ಆಯುಕ್ತ ಅನಾಥ!: ಪಾಲಿಕೆ ಕಾರ್ಯಕ್ರಮಗಳಲ್ಲಿ ಆಯಕ್ತರನ್ನು ವೇದಿಕೆಗೆ ಆಹ್ವಾನಿಸುವುದು ಸಂಪ್ರದಾಯ. ಆದರೆ, ಶನಿವಾರ ನಗರದ 36ನೇ ವಾರ್ಡ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯಕ್ತರು ಹಾಜರಿದ್ದರೂ, ಅವರನ್ನು ವೇದಿಕೆಗೆ ಕರೆಯಲಿಲ್ಲ. <br /> <br /> ಕಾರ್ಯಕ್ರಮ ಮುಗಿಯುವವರೆಗೂ ಆಯಕ್ತರು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ಆಡಳಿತ ಪಕ್ಷ ಹಾಗೂ ಆಯಕ್ತರ ನಡುವಿನ ಮುಸುಕಿನ ತಿಕ್ಕಾಟ ಇಲ್ಲೂ ಮುಂದುವರಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>