<p>ಬೆಂಗಳೂರು: ಕರ್ನಾಟಕ ತಂಡದವರು ಇಲ್ಲಿ ನಡೆಯುತ್ತಿರುವ ‘ವಾಜಪೇಯಿ ಕಪ್’ 17ನೇ ಸೀನಿಯರ್ ದಕ್ಷಿಣ ವಲಯ ವಾಲಿಬಾಲ್ ಚಾಂಪಿಯನ್ಷಿಪ್ನಲ್ಲಿ ಗುರುವಾರ ಮಿಶ್ರಫಲ ಅನುಭವಿಸಿದರು. ಮಹಿಳೆಯರು ತಮಿಳುನಾಡು ತಂಡವನ್ನು ಮಣಿಸಿದರೆ, ಪುರುಷರ ಕೇರಳದ ಎದುರು ಸೋಲು ಅನುಭವಿಸಿದರು. <br /> <br /> ಮಹಾಲಕ್ಷ್ಮಿಪುರಂನ ಸ್ವಾಮಿ ವಿವೇಕಾನಂದ ಪಾರ್ಕ್ ಸ್ಪೋರ್ಟ್ಸ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಕರ್ನಾಟಕ ಮಹಿಳೆಯರು 25-16, 25-21, 25-17 ರಲ್ಲಿ ತಮಿಳುನಾಡು ತಂಡವನ್ನು ಸೋಲಿಸಿದರು. ಈ ಪಂದ್ಯ 55 ನಿಮಿಷಗಳ ಕಾಲ ನಡೆಯಿತು. <br /> <br /> ಇದೇ ವಿಭಾಗದ ಮತ್ತೊಂದು ಪಂದ್ಯದಲ್ಲಿ ಆಂಧ್ರ ಪ್ರದೇಶ 25-13, 25-13, 25-17 ರಲ್ಲಿ ಪುದುಚೇರಿ ತಂಡದ ವಿರುದ್ಧ ಜಯ ಸಾಧಿಸಿತು. <br /> <br /> ಆದರೆ ರಾಜ್ಯದ ಪುರುಷರಿಗೆ ನಿರಾಸೆ ಎದುರಾಯಿತು. ಕೇರಳ ತಂಡ 25-15, 25-23, 25-22 ರಲ್ಲಿ ಕರ್ನಾಟಕದ ವಿರುದ್ಧ ಜಯ ಸಾಧಿಸಿತು. ಒಂದು ಗಂಟೆಯ ಕಾಲ ನಡೆದ ಸೆಣಸಾಟದಲ್ಲಿ ಕರ್ನಾಟಕ ಎರಡು ಮತ್ತು ಮೂರನೇ ಸೆಟ್ನಲ್ಲಿ ಎದುರಾಳಿಗೆ ತಕ್ಕ ಪೈಪೋಟಿ ನೀಡಿತು. <br /> <br /> ಮತ್ತೊಂದು ಪಂದ್ಯದಲ್ಲಿ ಪುದುಚೇರಿ 15-25, 25-16, 25-19, 25-14 ರಲ್ಲಿ ಆಂಧ್ರ ಪ್ರದೇಶ ವಿರುದ್ಧ ಗೆಲುವು ಪಡೆಯಿತು.<br /> <br /> ಶುಕ್ರವಾರ ನಡೆಯುವ ಪಂದ್ಯಗಳಲ್ಲಿ ಕರ್ನಾಟಕ ಪುರುಷ ಮತ್ತು ಮಹಿಳಾ ತಂಡಗಳು ಕ್ರಮವಾಗಿ ಪುದುಚೇರಿ ಹಾಗೂ ಆಂಧ್ರ ಪ್ರದೇಶ ತಂಡಗಳ ಜೊತೆ ಹೋರಾಟ ನಡೆಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕರ್ನಾಟಕ ತಂಡದವರು ಇಲ್ಲಿ ನಡೆಯುತ್ತಿರುವ ‘ವಾಜಪೇಯಿ ಕಪ್’ 17ನೇ ಸೀನಿಯರ್ ದಕ್ಷಿಣ ವಲಯ ವಾಲಿಬಾಲ್ ಚಾಂಪಿಯನ್ಷಿಪ್ನಲ್ಲಿ ಗುರುವಾರ ಮಿಶ್ರಫಲ ಅನುಭವಿಸಿದರು. ಮಹಿಳೆಯರು ತಮಿಳುನಾಡು ತಂಡವನ್ನು ಮಣಿಸಿದರೆ, ಪುರುಷರ ಕೇರಳದ ಎದುರು ಸೋಲು ಅನುಭವಿಸಿದರು. <br /> <br /> ಮಹಾಲಕ್ಷ್ಮಿಪುರಂನ ಸ್ವಾಮಿ ವಿವೇಕಾನಂದ ಪಾರ್ಕ್ ಸ್ಪೋರ್ಟ್ಸ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಕರ್ನಾಟಕ ಮಹಿಳೆಯರು 25-16, 25-21, 25-17 ರಲ್ಲಿ ತಮಿಳುನಾಡು ತಂಡವನ್ನು ಸೋಲಿಸಿದರು. ಈ ಪಂದ್ಯ 55 ನಿಮಿಷಗಳ ಕಾಲ ನಡೆಯಿತು. <br /> <br /> ಇದೇ ವಿಭಾಗದ ಮತ್ತೊಂದು ಪಂದ್ಯದಲ್ಲಿ ಆಂಧ್ರ ಪ್ರದೇಶ 25-13, 25-13, 25-17 ರಲ್ಲಿ ಪುದುಚೇರಿ ತಂಡದ ವಿರುದ್ಧ ಜಯ ಸಾಧಿಸಿತು. <br /> <br /> ಆದರೆ ರಾಜ್ಯದ ಪುರುಷರಿಗೆ ನಿರಾಸೆ ಎದುರಾಯಿತು. ಕೇರಳ ತಂಡ 25-15, 25-23, 25-22 ರಲ್ಲಿ ಕರ್ನಾಟಕದ ವಿರುದ್ಧ ಜಯ ಸಾಧಿಸಿತು. ಒಂದು ಗಂಟೆಯ ಕಾಲ ನಡೆದ ಸೆಣಸಾಟದಲ್ಲಿ ಕರ್ನಾಟಕ ಎರಡು ಮತ್ತು ಮೂರನೇ ಸೆಟ್ನಲ್ಲಿ ಎದುರಾಳಿಗೆ ತಕ್ಕ ಪೈಪೋಟಿ ನೀಡಿತು. <br /> <br /> ಮತ್ತೊಂದು ಪಂದ್ಯದಲ್ಲಿ ಪುದುಚೇರಿ 15-25, 25-16, 25-19, 25-14 ರಲ್ಲಿ ಆಂಧ್ರ ಪ್ರದೇಶ ವಿರುದ್ಧ ಗೆಲುವು ಪಡೆಯಿತು.<br /> <br /> ಶುಕ್ರವಾರ ನಡೆಯುವ ಪಂದ್ಯಗಳಲ್ಲಿ ಕರ್ನಾಟಕ ಪುರುಷ ಮತ್ತು ಮಹಿಳಾ ತಂಡಗಳು ಕ್ರಮವಾಗಿ ಪುದುಚೇರಿ ಹಾಗೂ ಆಂಧ್ರ ಪ್ರದೇಶ ತಂಡಗಳ ಜೊತೆ ಹೋರಾಟ ನಡೆಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>