<p><strong>ಮರಿಯಮ್ಮನಹಳ್ಳಿ (ಬಳ್ಳಾರಿ): </strong>ಕರ್ನಾಟಕದ ಬಾಲಕಿಯರ ತಂಡ ತಂಡ ಶ್ರೀ ವಿನಾಯಕ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 14ವರ್ಷದೊಳಗಿನ ಶಾಲಾಮಕ್ಕಳ 57ನೇ ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಬುಧವಾರ 25-18, 25-20 ರಿಂದ ಪಶ್ಚಿಮ ಬಂಗಾಳ ತಂಡವನ್ನು ಪರಾಭವಗೊಳಿಸುವ ಮೂಲಕ ಕ್ವಾರ್ಟರ್ಫೈನಲ್ಗೆ ಲಗ್ಗೆ ಇಟ್ಟಿತು.<br /> <br /> ತೀವ್ರ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕಿ ಪವಿತ್ರ, ನಿರ್ಮಲ, ವೀಣಾ, ಪ್ರತಿಭಾ, ವಾಣಿ ಉತ್ತಮ ಪ್ರದರ್ಶನ ತೋರುವ ಮೂಲಕ ಪಶ್ಚಿಮ ಬಂಗಾಳದ ಬಾಲಕಿಯರಿಗೆ ಚೇತರಿಸಿಕೊಳ್ಳಲು ಅವಕಾಶ ನೀಡದೆ ತಂಡದ ಗೆಲುವಿನಲ್ಲಿ ಮಹ್ವದ ಪಾತ್ರ ನಿರ್ವಹಿಸಿದರು. <br /> <br /> ಬಾಲಕರ ವಿಭಾಗದ ಪಂದ್ಯದಲ್ಲಿ ಕರ್ನಾಟಕ ತಂಡ 19-25, 17-25 ರಿಂದ ದೆಹಲಿ ತಂಡದ ಎದುರು ಪರಾಭವಗೊಂಡಿತು. ಬಾಲಕರ ವಿಭಾಗದ ಇತರ ಪಂದ್ಯಗಳಲ್ಲಿ ಉತ್ತರಾಖಂಡ 25-17, 25-12ರಿಂದ ರಾಜಸ್ತಾನ ತಂಡದ ಮೇಲೂ; ಮಣಿಪುರ ತಂಡ 25-17, 25-16ರಿಂದ ದೆಹಲಿ ತಂಡದ ವಿರುದ್ಧವೂ; ರಾಜಾಸ್ತಾನ 25-12, 25-09ರಿಂದ ವಿದ್ಯಾಭಾರತಿ ತಂಡದ ಮೇಲೂ ಜಯ ಪಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ (ಬಳ್ಳಾರಿ): </strong>ಕರ್ನಾಟಕದ ಬಾಲಕಿಯರ ತಂಡ ತಂಡ ಶ್ರೀ ವಿನಾಯಕ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 14ವರ್ಷದೊಳಗಿನ ಶಾಲಾಮಕ್ಕಳ 57ನೇ ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಬುಧವಾರ 25-18, 25-20 ರಿಂದ ಪಶ್ಚಿಮ ಬಂಗಾಳ ತಂಡವನ್ನು ಪರಾಭವಗೊಳಿಸುವ ಮೂಲಕ ಕ್ವಾರ್ಟರ್ಫೈನಲ್ಗೆ ಲಗ್ಗೆ ಇಟ್ಟಿತು.<br /> <br /> ತೀವ್ರ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕಿ ಪವಿತ್ರ, ನಿರ್ಮಲ, ವೀಣಾ, ಪ್ರತಿಭಾ, ವಾಣಿ ಉತ್ತಮ ಪ್ರದರ್ಶನ ತೋರುವ ಮೂಲಕ ಪಶ್ಚಿಮ ಬಂಗಾಳದ ಬಾಲಕಿಯರಿಗೆ ಚೇತರಿಸಿಕೊಳ್ಳಲು ಅವಕಾಶ ನೀಡದೆ ತಂಡದ ಗೆಲುವಿನಲ್ಲಿ ಮಹ್ವದ ಪಾತ್ರ ನಿರ್ವಹಿಸಿದರು. <br /> <br /> ಬಾಲಕರ ವಿಭಾಗದ ಪಂದ್ಯದಲ್ಲಿ ಕರ್ನಾಟಕ ತಂಡ 19-25, 17-25 ರಿಂದ ದೆಹಲಿ ತಂಡದ ಎದುರು ಪರಾಭವಗೊಂಡಿತು. ಬಾಲಕರ ವಿಭಾಗದ ಇತರ ಪಂದ್ಯಗಳಲ್ಲಿ ಉತ್ತರಾಖಂಡ 25-17, 25-12ರಿಂದ ರಾಜಸ್ತಾನ ತಂಡದ ಮೇಲೂ; ಮಣಿಪುರ ತಂಡ 25-17, 25-16ರಿಂದ ದೆಹಲಿ ತಂಡದ ವಿರುದ್ಧವೂ; ರಾಜಾಸ್ತಾನ 25-12, 25-09ರಿಂದ ವಿದ್ಯಾಭಾರತಿ ತಂಡದ ಮೇಲೂ ಜಯ ಪಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>