<p><strong>ಬೆಂಗಳೂರು:</strong> ಕರ್ತವ್ಯ ನಿರತ ಎಂಜಿನಿಯರ್ ಮತ್ತು ವಾಲ್ವ್ಮನ್ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಲಮಂಡಳಿ ಎಂಜಿನಿಯರ್ಗಳು ಕೆಂಪೇಗೌಡ ರಸ್ತೆಯಲ್ಲಿರುವ ಮುಖ್ಯ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. <br /> <br /> `ಎಂಜಿನಿಯರ್ ಎ. ನಾಗರಾಜ್ ಮತ್ತು ವಾಲ್ವ್ಮನ್ ಮುದ್ದಯ್ಯ ಅವರು ವಿಶ್ವೇಶ್ವರಪುರ ಸೇವಾ ಠಾಣೆ ವ್ಯಾಪ್ತಿಯ ಭವಾನಿನಗರದಲ್ಲಿ ಮಾ.7ರಂದು ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ~ ಎಂದು ಜಲಮಂಡಳಿ ಎಂಜಿನಿಯರ್ಗಳ ಸಂಘದ ಅಧ್ಯಕ್ಷ ಎಸ್.ಎಂ. ಬಸವರಾಜು ಹೇಳಿದರು.<br /> <br /> `ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಹಲ್ಲೆ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು~ ಎಂದು ಅವರು ಒತ್ತಾಯಿಸಿದರು. <br /> ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಪ್ರತಿಭಟನೆ ನಡೆಸಿದ ಸಿಬ್ಬಂದಿ ಕಪ್ಪು ಬಟ್ಟೆ ಧರಿಸಿ ಕೆಲಸ ಮಾಡಿದರು. ಜಲಮಂಡಳಿ ಅಧ್ಯಕ್ಷ ಗೌರವ್ ಗುಪ್ತಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ತವ್ಯ ನಿರತ ಎಂಜಿನಿಯರ್ ಮತ್ತು ವಾಲ್ವ್ಮನ್ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಲಮಂಡಳಿ ಎಂಜಿನಿಯರ್ಗಳು ಕೆಂಪೇಗೌಡ ರಸ್ತೆಯಲ್ಲಿರುವ ಮುಖ್ಯ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. <br /> <br /> `ಎಂಜಿನಿಯರ್ ಎ. ನಾಗರಾಜ್ ಮತ್ತು ವಾಲ್ವ್ಮನ್ ಮುದ್ದಯ್ಯ ಅವರು ವಿಶ್ವೇಶ್ವರಪುರ ಸೇವಾ ಠಾಣೆ ವ್ಯಾಪ್ತಿಯ ಭವಾನಿನಗರದಲ್ಲಿ ಮಾ.7ರಂದು ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ~ ಎಂದು ಜಲಮಂಡಳಿ ಎಂಜಿನಿಯರ್ಗಳ ಸಂಘದ ಅಧ್ಯಕ್ಷ ಎಸ್.ಎಂ. ಬಸವರಾಜು ಹೇಳಿದರು.<br /> <br /> `ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಹಲ್ಲೆ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು~ ಎಂದು ಅವರು ಒತ್ತಾಯಿಸಿದರು. <br /> ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಪ್ರತಿಭಟನೆ ನಡೆಸಿದ ಸಿಬ್ಬಂದಿ ಕಪ್ಪು ಬಟ್ಟೆ ಧರಿಸಿ ಕೆಲಸ ಮಾಡಿದರು. ಜಲಮಂಡಳಿ ಅಧ್ಯಕ್ಷ ಗೌರವ್ ಗುಪ್ತಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>