<p>ಸೇಂಟ್ ಲೂಸಿಯ (ಪಿಟಿಐ): ಪಾಕಿಸ್ತಾನ ವಿರುದ್ಧ ತವರು ನೆಲದಲ್ಲಿ ನಡೆಯುವ ಕ್ರಿಕೆಟ್ ಸರಣಿಗೆ ತಂಡದಲ್ಲಿ ಸ್ಥಾನ ಲಭಿಸದ ಕಾರಣ ಐಪಿಎಲ್ನಲ್ಲಿ ಆಡಲು ಮುಂದಾಗಿದ್ದೇನೆ ಎಂದು ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೇಳಿದ್ದಾರೆ. <br /> <br /> ಅದೇ ರೀತಿ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ (ಡಬ್ಲ್ಯುಐಸಿಬಿ) ತೋರುತ್ತಿರುವ ಮಲತಾಯಿ ಧೋರಣೆಯಿಂದ ನನಗೆ ಈ ನಿರ್ಧಾರ ಕೈಗೊಳ್ಳದೆ ಬೇರೆ ಮಾರ್ಗವಿರಲಿಲ್ಲ ಎಂದಿದ್ದಾರೆ. ಈ ಮೂಲಕ ಅವರು ಡಬ್ಲ್ಯುಐಸಿಬಿಗೆ ತಿರುಗೇಟು ನೀಡಿದ್ದಾರೆ.<br /> <br /> ಗೇಲ್ ಅವರು ಪಾಕ್ ವಿರುದ್ಧದ ಸರಣಿಯಿಂದ ಹಿಂದೆ ಸರಿದು ಐಪಿಎಲ್ ಸೇರಿದ್ದಕ್ಕೆ ವಿಂಡೀಸ್ ಮಂಡಳಿ ಅತೃಪ್ತಿ ವ್ಯಕ್ತಪಡಿಸಿತ್ತು. ಈ ಆಕ್ರಮಣಕಾರಿ ಬ್ಯಾಟ್ಸ್ಮನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಲಿದ್ದಾರೆ.<br /> <br /> ‘ಅನಿವಾರ್ಯವಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಡಬ್ಲ್ಯುಐಸಿಬಿ ನನ್ನನ್ನು ಒಳಗೊಂಡಂತೆ ಕೆಲವು ಆಟಗಾರರನ್ನು ಕಡೆಗಣಿಸುತ್ತಿದೆ’ ಎಂದು ಗೇಲ್ ಮಂಡಳಿ ವಿರುದ್ಧ ತಮ್ಮ ಅತೃಪ್ತಿ ತೋಡಿಕೊಂಡರು. <br /> ‘ವಿಶ್ವಕಪ್ ಟೂರ್ನಿಯ ವೇಳೆ ಗಾಯಗೊಂಡಿದ್ದ ನಾನು ಚಿಕಿತ್ಸೆಗಾಗಿ ಇಂಗ್ಲೆಂಡ್ಗೆ ತೆರಳಿದ್ದೆ. ಆದರೆ ಆ ವೆಚ್ಚವನ್ನು ನಾನೇ ಭರಿಸಿದ್ದೆ. ಮಂಡಳಿ ಯಾವುದೆ ನೆರವು ನೀಡಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೇಂಟ್ ಲೂಸಿಯ (ಪಿಟಿಐ): ಪಾಕಿಸ್ತಾನ ವಿರುದ್ಧ ತವರು ನೆಲದಲ್ಲಿ ನಡೆಯುವ ಕ್ರಿಕೆಟ್ ಸರಣಿಗೆ ತಂಡದಲ್ಲಿ ಸ್ಥಾನ ಲಭಿಸದ ಕಾರಣ ಐಪಿಎಲ್ನಲ್ಲಿ ಆಡಲು ಮುಂದಾಗಿದ್ದೇನೆ ಎಂದು ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೇಳಿದ್ದಾರೆ. <br /> <br /> ಅದೇ ರೀತಿ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ (ಡಬ್ಲ್ಯುಐಸಿಬಿ) ತೋರುತ್ತಿರುವ ಮಲತಾಯಿ ಧೋರಣೆಯಿಂದ ನನಗೆ ಈ ನಿರ್ಧಾರ ಕೈಗೊಳ್ಳದೆ ಬೇರೆ ಮಾರ್ಗವಿರಲಿಲ್ಲ ಎಂದಿದ್ದಾರೆ. ಈ ಮೂಲಕ ಅವರು ಡಬ್ಲ್ಯುಐಸಿಬಿಗೆ ತಿರುಗೇಟು ನೀಡಿದ್ದಾರೆ.<br /> <br /> ಗೇಲ್ ಅವರು ಪಾಕ್ ವಿರುದ್ಧದ ಸರಣಿಯಿಂದ ಹಿಂದೆ ಸರಿದು ಐಪಿಎಲ್ ಸೇರಿದ್ದಕ್ಕೆ ವಿಂಡೀಸ್ ಮಂಡಳಿ ಅತೃಪ್ತಿ ವ್ಯಕ್ತಪಡಿಸಿತ್ತು. ಈ ಆಕ್ರಮಣಕಾರಿ ಬ್ಯಾಟ್ಸ್ಮನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಲಿದ್ದಾರೆ.<br /> <br /> ‘ಅನಿವಾರ್ಯವಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಡಬ್ಲ್ಯುಐಸಿಬಿ ನನ್ನನ್ನು ಒಳಗೊಂಡಂತೆ ಕೆಲವು ಆಟಗಾರರನ್ನು ಕಡೆಗಣಿಸುತ್ತಿದೆ’ ಎಂದು ಗೇಲ್ ಮಂಡಳಿ ವಿರುದ್ಧ ತಮ್ಮ ಅತೃಪ್ತಿ ತೋಡಿಕೊಂಡರು. <br /> ‘ವಿಶ್ವಕಪ್ ಟೂರ್ನಿಯ ವೇಳೆ ಗಾಯಗೊಂಡಿದ್ದ ನಾನು ಚಿಕಿತ್ಸೆಗಾಗಿ ಇಂಗ್ಲೆಂಡ್ಗೆ ತೆರಳಿದ್ದೆ. ಆದರೆ ಆ ವೆಚ್ಚವನ್ನು ನಾನೇ ಭರಿಸಿದ್ದೆ. ಮಂಡಳಿ ಯಾವುದೆ ನೆರವು ನೀಡಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>