<p>ಬೆಂಗಳೂರು: ಡಿಸ್ಕಸ್ ಥ್ರೋ ಸ್ಪರ್ಧಿ ಕರ್ನಾಟಕದ ವಿಕಾಸ್ ಗೌಡ ನವದೆಹಲಿಯಲ್ಲಿ ಮಂಗಳವಾರ ಪ್ರತಿಷ್ಠಿತ `ಅರ್ಜುನ~ ಪ್ರಶಸ್ತಿ ಸ್ವೀಕರಿಸಲಿದ್ದಾರೆ. <br /> <br /> ದಕ್ಷಿಣ ಕೊರಿಯಾದ ಡೇಗುವಿನಲ್ಲಿ ನಡೆದ 13ನೇ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ಗೆ ತೆರಳಿದ್ದ ಕಾರಣ ಆಗಸ್ಟ್ 29ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿರಲಿಲ್ಲ.<br /> ಈ ಸಂಬಂಧ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ನಾನೀಗ ನವದೆಹಲಿಗೆ ಆಗಮಿಸಿದ್ದೇನೆ. <br /> <br /> ಮಂಗಳವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಈ ಪ್ರತಿಷ್ಠಿತ ಪ್ರಶಸ್ತಿ ನನಗೆ ಬಂದಿರುವುದು ತುಂಬಾ ಖುಷಿ ಉಂಟು ಮಾಡಿದೆ~ ಎಂದರು.<br /> <br /> ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನಲ್ಲಿ ಫೈನಲ್ ಪ್ರವೇಶಿಸಿದ್ದ ವಿಕಾಸ್ ಏಳನೇ ಸ್ಥಾನ ಪಡೆದಿದ್ದರು. `ಇದಕ್ಕಿಂತ ಇನ್ನೂ ಉತ್ತಮ ಪ್ರದರ್ಶನ ನೀಡಬಹುದಿತ್ತು. ಆದರೆ ಅಲ್ಲಿನ ವಾತಾವರಣಕ್ಕೆ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮುಂದಿನ ಕೂಟಗಳಲ್ಲಿ ಇದಕ್ಕಿಂತ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ~ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಡಿಸ್ಕಸ್ ಥ್ರೋ ಸ್ಪರ್ಧಿ ಕರ್ನಾಟಕದ ವಿಕಾಸ್ ಗೌಡ ನವದೆಹಲಿಯಲ್ಲಿ ಮಂಗಳವಾರ ಪ್ರತಿಷ್ಠಿತ `ಅರ್ಜುನ~ ಪ್ರಶಸ್ತಿ ಸ್ವೀಕರಿಸಲಿದ್ದಾರೆ. <br /> <br /> ದಕ್ಷಿಣ ಕೊರಿಯಾದ ಡೇಗುವಿನಲ್ಲಿ ನಡೆದ 13ನೇ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ಗೆ ತೆರಳಿದ್ದ ಕಾರಣ ಆಗಸ್ಟ್ 29ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿರಲಿಲ್ಲ.<br /> ಈ ಸಂಬಂಧ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ನಾನೀಗ ನವದೆಹಲಿಗೆ ಆಗಮಿಸಿದ್ದೇನೆ. <br /> <br /> ಮಂಗಳವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಈ ಪ್ರತಿಷ್ಠಿತ ಪ್ರಶಸ್ತಿ ನನಗೆ ಬಂದಿರುವುದು ತುಂಬಾ ಖುಷಿ ಉಂಟು ಮಾಡಿದೆ~ ಎಂದರು.<br /> <br /> ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನಲ್ಲಿ ಫೈನಲ್ ಪ್ರವೇಶಿಸಿದ್ದ ವಿಕಾಸ್ ಏಳನೇ ಸ್ಥಾನ ಪಡೆದಿದ್ದರು. `ಇದಕ್ಕಿಂತ ಇನ್ನೂ ಉತ್ತಮ ಪ್ರದರ್ಶನ ನೀಡಬಹುದಿತ್ತು. ಆದರೆ ಅಲ್ಲಿನ ವಾತಾವರಣಕ್ಕೆ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮುಂದಿನ ಕೂಟಗಳಲ್ಲಿ ಇದಕ್ಕಿಂತ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ~ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>