<p> <strong>ನವದೆಹಲಿ, (ಪಿಟಿಐ):</strong> ಕಳೆದ 2008ರಲ್ಲಿ ಲೋಕಸಭೆಯಲ್ಲಿ ವಿಶ್ವಾಸಮತ ಯಾಚಿಸುವ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರಾಗಲಿ, ಸರ್ಕಾರವಾಗಲಿ ಯಾವುದೇ ಬಗೆಯ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿಲ್ಲವೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ಹೇಳಿದ್ದಾರೆ. </p>.<p>ಆ ಸಂದರ್ಭದಲ್ಲಿ ಯಾವುದೇ ಬಗೆಯ ಭ್ರಷ್ಟಾಚಾರ ನಡೆದಿಲ್ಲ. ಈ ಕುರಿತ ವಿಕಲೀಕ್ಸ್ ಆರೋಪಗಳು ~ಸಮರ್ಥನೀಯವಲ್ಲ~ ಜೊತೆಗೆ ~ಕಪೋಲಕಲ್ಪಿತ~ ಎಂದು ಅವರು ಆರೋಪಗಳನ್ನು ತಳ್ಳಿಹಾಕಿದರು.</p>.<p>ಸಂಸತ್ತಿನ ಎರಡೂ ಸದನಗಳಲ್ಲಿ ಶುಕ್ರವಾರ ಮಧ್ಯಾಹ್ನ ಹೇಳಿಕೆ ನೀಡಿದ ಪ್ರಧಾನಿ, ~ಇದು ಹಳೆಯ ಆರೋಪ, ಅದರ ಕುರಿತು ಚರ್ಚೆಗಳು ನಡೆದಿವೆ. ಕೊನೆಗೆ ಜನರೂ ಆರೋಪಗಳನ್ನು ತಿರಸ್ಕರಿಸಿದ್ದಾರೆ~ ಎನ್ನುತ್ತಾ ಅವರು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದರು.</p>.<p>~ವಿಶ್ವಾಸಮತ ಯಾಚನೆಯ ವೇಳೆ ಮತ ಗಳಿಸಲು ಸಂಸದರಿಗೆ ಹಣ ನೀಡಲಾಗಿದೆ ಎಂಬ ವಿಕಿಲೀಕ್ಸ್ ಆರೋಪಗಳನ್ನು ಸರ್ಕಾರ ಸಾರಾಸಗಟಾಗಿ ವಿರೋಧಿಸುವುದಾಗಿ~ ದೃಢವಾದ ದ್ವನಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸ್ಪಷ್ಟಪಡಿಸಿದರು,</p>.<p>ಪ್ರಧಾನಿಯ ಹೇಳಿಕೆಯ ನಂತರ ಎರಡೂ ಸದನಗಳಲ್ಲಿ ವಿರೋಧ ಪಕ್ಷದ ಸದಸ್ಯರು ಕೆಲವು ವಿವರಣೆ ಪಡೆಯಲು ಮುಂದಾದಾಗ ಅವರಿಗೆ ಅವಕಾಶ ನಿರಾಕರಿಸಲಾಯಿತು. ಆಗ ಸ್ವಲ್ಪ ಸಮಯ ಗದ್ದಲವೂ ನಡೆಯಿತು. ಅಲ್ಪಾವಧಿಗೆ ಸದನಗಳನ್ನು ಮುಂದೂಡಿದ ಪ್ರಸಂಗವೂ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ನವದೆಹಲಿ, (ಪಿಟಿಐ):</strong> ಕಳೆದ 2008ರಲ್ಲಿ ಲೋಕಸಭೆಯಲ್ಲಿ ವಿಶ್ವಾಸಮತ ಯಾಚಿಸುವ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರಾಗಲಿ, ಸರ್ಕಾರವಾಗಲಿ ಯಾವುದೇ ಬಗೆಯ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿಲ್ಲವೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ಹೇಳಿದ್ದಾರೆ. </p>.<p>ಆ ಸಂದರ್ಭದಲ್ಲಿ ಯಾವುದೇ ಬಗೆಯ ಭ್ರಷ್ಟಾಚಾರ ನಡೆದಿಲ್ಲ. ಈ ಕುರಿತ ವಿಕಲೀಕ್ಸ್ ಆರೋಪಗಳು ~ಸಮರ್ಥನೀಯವಲ್ಲ~ ಜೊತೆಗೆ ~ಕಪೋಲಕಲ್ಪಿತ~ ಎಂದು ಅವರು ಆರೋಪಗಳನ್ನು ತಳ್ಳಿಹಾಕಿದರು.</p>.<p>ಸಂಸತ್ತಿನ ಎರಡೂ ಸದನಗಳಲ್ಲಿ ಶುಕ್ರವಾರ ಮಧ್ಯಾಹ್ನ ಹೇಳಿಕೆ ನೀಡಿದ ಪ್ರಧಾನಿ, ~ಇದು ಹಳೆಯ ಆರೋಪ, ಅದರ ಕುರಿತು ಚರ್ಚೆಗಳು ನಡೆದಿವೆ. ಕೊನೆಗೆ ಜನರೂ ಆರೋಪಗಳನ್ನು ತಿರಸ್ಕರಿಸಿದ್ದಾರೆ~ ಎನ್ನುತ್ತಾ ಅವರು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದರು.</p>.<p>~ವಿಶ್ವಾಸಮತ ಯಾಚನೆಯ ವೇಳೆ ಮತ ಗಳಿಸಲು ಸಂಸದರಿಗೆ ಹಣ ನೀಡಲಾಗಿದೆ ಎಂಬ ವಿಕಿಲೀಕ್ಸ್ ಆರೋಪಗಳನ್ನು ಸರ್ಕಾರ ಸಾರಾಸಗಟಾಗಿ ವಿರೋಧಿಸುವುದಾಗಿ~ ದೃಢವಾದ ದ್ವನಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸ್ಪಷ್ಟಪಡಿಸಿದರು,</p>.<p>ಪ್ರಧಾನಿಯ ಹೇಳಿಕೆಯ ನಂತರ ಎರಡೂ ಸದನಗಳಲ್ಲಿ ವಿರೋಧ ಪಕ್ಷದ ಸದಸ್ಯರು ಕೆಲವು ವಿವರಣೆ ಪಡೆಯಲು ಮುಂದಾದಾಗ ಅವರಿಗೆ ಅವಕಾಶ ನಿರಾಕರಿಸಲಾಯಿತು. ಆಗ ಸ್ವಲ್ಪ ಸಮಯ ಗದ್ದಲವೂ ನಡೆಯಿತು. ಅಲ್ಪಾವಧಿಗೆ ಸದನಗಳನ್ನು ಮುಂದೂಡಿದ ಪ್ರಸಂಗವೂ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>