<p><strong>ಚಿತ್ರದುರ್ಗ: </strong>‘ವಿಪತ್ತು ನಿರ್ವಹಣೆಗೆ ಸಂಪನ್ಮೂಲ ಕ್ರೋಡೀಕರಣವಾಗಿದ್ದರೆ, ಪ್ರಕೃತಿ ವಿಕೋಪ ಅಥವಾ ಮಾನವ ನಿರ್ಮಿತ ವಿಕೋಪದಂತಹ ಘಟನೆಗಳು ಸಂಭವಿಸಿದಾಗ, ತಕ್ಷಣವೇ ಪರಿಹಾರ ಹುಡುಕಲು ಸಾಧ್ಯವಾಗುತ್ತದೆ’ ಎಂದು ಆಡಳಿತ ತರಬೇತಿ ಸಂಪನ್ಮೂಲ ವ್ಯಕ್ತಿ ವಿಶ್ವನಾಥ್ ಅಭಿಪ್ರಾಯಪಟ್ಟರು.<br /> <br /> ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ‘ಜಿಲ್ಲಾ ಸ್ವಯಂಚಾಲಿತ ವಿಕೋಪ ನಿರ್ವಹಣಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ‘ವಿಶ್ವದ ಶೇ ೫೦ರಷ್ಟು ಭೂ ಪ್ರದೇಶ ಪ್ರಾಕೃತಿಕವಾಗಿ ಭೂಕಂಪ, ಸುನಾಮಿ, ಬಿರುಗಾಳಿ, ಅತಿಯಾದ ಮಳೆಯಿಂದ ವಿಕೋಪಗಳಿಗೆ ತುತ್ತಾಗುತ್ತಿದೆ. ವಿಕೋಪಗಳಿಂದ ಅಪಾರ ಆಸ್ತಿ, ಪ್ರಾಣಹಾನಿ ಸಂಭವಿಸುತ್ತಿದೆ. ಇದರಿಂದ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿದೆ. ದೇಶದಲ್ಲಿ ವಿಕೋಪದ ನಂತರ ಪರಿಹಾರ ಕಾರ್ಯಕ್ಕಾಗಿ ಪ್ರತಿ ವರ್ಷ ಸರಾಸರಿ ₨ ೨೫ ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ.<br /> <br /> ಇಂಥ ನಷ್ಟ ತಡೆಗಟ್ಟಲು ಸರ್ಕಾರ ೨೦೦೫ ರಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಚಿಸಿದೆ. ಎಲ್ಲಾ ರಾಜ್ಯಗಳಲ್ಲೂ ವಿಪತ್ತು ನಿರ್ವಹಣಾ ಸಮಿತಿಗಳನ್ನು ಆರಂಭಿಸಲಾಗಿದು, ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.<br /> ‘ಪ್ರಕೃತಿ ಅಥವಾ ಮಾನವ ನಿರ್ಮಿತ ವಿಕೋಪ ಘಟನೆಗಳನ್ನು ಸಮರ್ಥವಾಗಿ ನಿಭಾಯಿಸು ವುದಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಕೆಲಸವನ್ನು ಆಡಳಿತ ತರಬೇತಿ ಸಂಸ್ಥೆ ವತಿಯಿಂದ ಕೈಗೊಳ್ಳಲಾಗುತ್ತಿದೆ. ಈಗಾಗಲೇ ೧೫ ಜಿಲ್ಲೆಗಳಲ್ಲಿ ಇಂಥ ಕಾರ್ಯಾಗಾರಗಳನ್ನು ನಡೆಸಲಾಗಿದೆ’ ಎಂದು ತಿಳಿಸಿದರು.<br /> <br /> ಜಿಲ್ಲಾ ಮಟ್ಟದಲ್ಲಿಯೂ ಕೂಡ ಜಿಲ್ಲಾ ಪ್ರಕೃತಿವಿಕೋಪ ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿರುತ್ತದೆ. ಚಿತ್ರದುರ್ಗ<br /> ಜಿಲ್ಲೆಯಲ್ಲಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಯೋಜನೆ ಸಿದ್ದವಾಗಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಮಾತನಾಡಿ, ‘ಮುಂಜಾಗ್ರತಾ ಕ್ರಮಗಳಿಂದ ಪ್ರಕೃತಿ ವಿಕೋಪ ಅಥವಾ ಮಾನವ ನಿರ್ಮಿತ ವಿಕೋಪ ಘಟನೆಗಳು ನಿಯಂತ್ರಸಬಹುದು.<br /> <br /> ಇಂಥ ಘಟನೆಗಳು ಜರುಗಿದ ಕೂಡಲೇ ಈ ಬಗ್ಗೆ ಪ್ರಾಥಮಿಕ ಮಾಹಿತಿ ಪಡೆದು ಕಾಲಮಿತಿಯಲ್ಲಿ ಪರಿಹಾರೋಪಾದಿ ಕಾರ್ಯವನ್ನು ಕೈಗೊಳ್ಳಲು ಸನ್ನದ್ಧರಾಗಬೇಕು’ ಎಂದು ಸಲಹೆ ನೀಡಿದರು. ಡೆಂಗೆಯಂತಹ ಮಾರಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಿದರೆ ಪ್ರಾಣಹಾನಿ ತಪ್ಪಿಸಬಹುದಾಗಿದೆ. ಈ ಬಗ್ಗೆ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಸಂಪನ್ಮೂಲ ಕ್ರೋಡೀಕರಿಸಿ ಕ್ರಮ ಕೈಗೊಳ್ಳಬೇಕು ಎಂದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವೈ.ಎಸ್.ರವಿಕುಮಾರ್ ಮಾತನಾಡಿ, ‘ಪ್ರಕೃತಿ ವಿಕೋಪ ಪರಿಹಾರ ಕೈಗೊಳ್ಳಲು ಕೌಶಲಯುತ ಸಂಪನ್ಮೂಲ ರೂಪಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿದ್ಧತೆ ಕೈಗೊಳ್ಳಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.<br /> ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿ ಮಂಜುಶ್ರೀ ಮಾತನಾಡಿ, ‘ಸಣ್ಣ ವಿಕೋಪ ಘಟನೆಗಳು ಇದ್ದರೂ ತ್ವರಿತವಾಗಿ ಕಾರ್ಯ ನಿರ್ವಹಿಸಬೇಕು. ಜಿಲ್ಲಾಮಟ್ಟದಲ್ಲಿ ಪ್ರಕೃತಿ ವಿಕೋಪ ಪರಿಹಾರ ಯೋಜನೆ ಸಿದ್ಧಪಡಿಸಿ ಕೊಳ್ಳಬೇಕು’ ಎಂದರು.<br /> ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲೆ ಎಸ್.ವಿ.ಸವಿತಾ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ವಿಪತ್ತು ನಿರ್ವಹಣೆಗೆ ಸಂಪನ್ಮೂಲ ಕ್ರೋಡೀಕರಣವಾಗಿದ್ದರೆ, ಪ್ರಕೃತಿ ವಿಕೋಪ ಅಥವಾ ಮಾನವ ನಿರ್ಮಿತ ವಿಕೋಪದಂತಹ ಘಟನೆಗಳು ಸಂಭವಿಸಿದಾಗ, ತಕ್ಷಣವೇ ಪರಿಹಾರ ಹುಡುಕಲು ಸಾಧ್ಯವಾಗುತ್ತದೆ’ ಎಂದು ಆಡಳಿತ ತರಬೇತಿ ಸಂಪನ್ಮೂಲ ವ್ಯಕ್ತಿ ವಿಶ್ವನಾಥ್ ಅಭಿಪ್ರಾಯಪಟ್ಟರು.<br /> <br /> ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ‘ಜಿಲ್ಲಾ ಸ್ವಯಂಚಾಲಿತ ವಿಕೋಪ ನಿರ್ವಹಣಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ‘ವಿಶ್ವದ ಶೇ ೫೦ರಷ್ಟು ಭೂ ಪ್ರದೇಶ ಪ್ರಾಕೃತಿಕವಾಗಿ ಭೂಕಂಪ, ಸುನಾಮಿ, ಬಿರುಗಾಳಿ, ಅತಿಯಾದ ಮಳೆಯಿಂದ ವಿಕೋಪಗಳಿಗೆ ತುತ್ತಾಗುತ್ತಿದೆ. ವಿಕೋಪಗಳಿಂದ ಅಪಾರ ಆಸ್ತಿ, ಪ್ರಾಣಹಾನಿ ಸಂಭವಿಸುತ್ತಿದೆ. ಇದರಿಂದ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿದೆ. ದೇಶದಲ್ಲಿ ವಿಕೋಪದ ನಂತರ ಪರಿಹಾರ ಕಾರ್ಯಕ್ಕಾಗಿ ಪ್ರತಿ ವರ್ಷ ಸರಾಸರಿ ₨ ೨೫ ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ.<br /> <br /> ಇಂಥ ನಷ್ಟ ತಡೆಗಟ್ಟಲು ಸರ್ಕಾರ ೨೦೦೫ ರಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಚಿಸಿದೆ. ಎಲ್ಲಾ ರಾಜ್ಯಗಳಲ್ಲೂ ವಿಪತ್ತು ನಿರ್ವಹಣಾ ಸಮಿತಿಗಳನ್ನು ಆರಂಭಿಸಲಾಗಿದು, ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.<br /> ‘ಪ್ರಕೃತಿ ಅಥವಾ ಮಾನವ ನಿರ್ಮಿತ ವಿಕೋಪ ಘಟನೆಗಳನ್ನು ಸಮರ್ಥವಾಗಿ ನಿಭಾಯಿಸು ವುದಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಕೆಲಸವನ್ನು ಆಡಳಿತ ತರಬೇತಿ ಸಂಸ್ಥೆ ವತಿಯಿಂದ ಕೈಗೊಳ್ಳಲಾಗುತ್ತಿದೆ. ಈಗಾಗಲೇ ೧೫ ಜಿಲ್ಲೆಗಳಲ್ಲಿ ಇಂಥ ಕಾರ್ಯಾಗಾರಗಳನ್ನು ನಡೆಸಲಾಗಿದೆ’ ಎಂದು ತಿಳಿಸಿದರು.<br /> <br /> ಜಿಲ್ಲಾ ಮಟ್ಟದಲ್ಲಿಯೂ ಕೂಡ ಜಿಲ್ಲಾ ಪ್ರಕೃತಿವಿಕೋಪ ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿರುತ್ತದೆ. ಚಿತ್ರದುರ್ಗ<br /> ಜಿಲ್ಲೆಯಲ್ಲಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಯೋಜನೆ ಸಿದ್ದವಾಗಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಮಾತನಾಡಿ, ‘ಮುಂಜಾಗ್ರತಾ ಕ್ರಮಗಳಿಂದ ಪ್ರಕೃತಿ ವಿಕೋಪ ಅಥವಾ ಮಾನವ ನಿರ್ಮಿತ ವಿಕೋಪ ಘಟನೆಗಳು ನಿಯಂತ್ರಸಬಹುದು.<br /> <br /> ಇಂಥ ಘಟನೆಗಳು ಜರುಗಿದ ಕೂಡಲೇ ಈ ಬಗ್ಗೆ ಪ್ರಾಥಮಿಕ ಮಾಹಿತಿ ಪಡೆದು ಕಾಲಮಿತಿಯಲ್ಲಿ ಪರಿಹಾರೋಪಾದಿ ಕಾರ್ಯವನ್ನು ಕೈಗೊಳ್ಳಲು ಸನ್ನದ್ಧರಾಗಬೇಕು’ ಎಂದು ಸಲಹೆ ನೀಡಿದರು. ಡೆಂಗೆಯಂತಹ ಮಾರಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಿದರೆ ಪ್ರಾಣಹಾನಿ ತಪ್ಪಿಸಬಹುದಾಗಿದೆ. ಈ ಬಗ್ಗೆ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಸಂಪನ್ಮೂಲ ಕ್ರೋಡೀಕರಿಸಿ ಕ್ರಮ ಕೈಗೊಳ್ಳಬೇಕು ಎಂದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವೈ.ಎಸ್.ರವಿಕುಮಾರ್ ಮಾತನಾಡಿ, ‘ಪ್ರಕೃತಿ ವಿಕೋಪ ಪರಿಹಾರ ಕೈಗೊಳ್ಳಲು ಕೌಶಲಯುತ ಸಂಪನ್ಮೂಲ ರೂಪಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿದ್ಧತೆ ಕೈಗೊಳ್ಳಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.<br /> ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿ ಮಂಜುಶ್ರೀ ಮಾತನಾಡಿ, ‘ಸಣ್ಣ ವಿಕೋಪ ಘಟನೆಗಳು ಇದ್ದರೂ ತ್ವರಿತವಾಗಿ ಕಾರ್ಯ ನಿರ್ವಹಿಸಬೇಕು. ಜಿಲ್ಲಾಮಟ್ಟದಲ್ಲಿ ಪ್ರಕೃತಿ ವಿಕೋಪ ಪರಿಹಾರ ಯೋಜನೆ ಸಿದ್ಧಪಡಿಸಿ ಕೊಳ್ಳಬೇಕು’ ಎಂದರು.<br /> ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲೆ ಎಸ್.ವಿ.ಸವಿತಾ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>