<p><strong>ಬೆಂಗಳೂರು:</strong> ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನ ಪಟ್ಟಾಭಿಷೇಕವಾಗಿ 500 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ‘ವಿಜಯನಗರ ಥೀಮ್ ಪಾರ್ಕ್’ಗೆ 2011-12ರ ಬಜೆಟ್ನಲ್ಲಿ 100 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.<br /> <br /> ಇದಲ್ಲದೆ ಹಂಪಿ ನಗರದ ಅಭಿವೃದ್ಧಿಗಾಗಿ ರೂ. 10 ಕೋಟಿ ನೀಡುವ ಭರವಸೆ ಬಜೆಟ್ನಲ್ಲಿದೆ. ಹೊಸ ಮೂಲಸೌಕರ್ಯ ಕಾಮಗಾರಿಗಳನ್ನು ಆರಂಭಿಸಲು ಈ ವರ್ಷದ ಬಜೆಟ್ನಲ್ಲಿ 50 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.ಈ ವರ್ಷ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಬಜೆಟ್ನಲ್ಲಿ 250 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದೆ.<br /> <br /> ಇದಲ್ಲದೆ, 2010-11ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯ ಜೋಗಿಮಟ್ಟಿಯಲ್ಲಿ ಪರಿಸರ ಪ್ರವಾಸೋದ್ಯಮ ಯೋಜನೆ, ಧಾರವಾಡದ ಸಾಧನಕೇರಿಯ ಸೌಂದರ್ಯ ವರ್ಧನೆ, ಮಲ್ಪೆ, ಮರವಂತೆ, ಸೇಂಟ್ ಮೇರಿ ದ್ವೀಪ ಮತ್ತು ಗೋಕರ್ಣಗಳಲ್ಲಿ ಪ್ರವಾಸೋದ್ಯಮ ಸೌಕರ್ಯ ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ ಎಂದು ಬಜೆಟ್ನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನ ಪಟ್ಟಾಭಿಷೇಕವಾಗಿ 500 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ‘ವಿಜಯನಗರ ಥೀಮ್ ಪಾರ್ಕ್’ಗೆ 2011-12ರ ಬಜೆಟ್ನಲ್ಲಿ 100 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.<br /> <br /> ಇದಲ್ಲದೆ ಹಂಪಿ ನಗರದ ಅಭಿವೃದ್ಧಿಗಾಗಿ ರೂ. 10 ಕೋಟಿ ನೀಡುವ ಭರವಸೆ ಬಜೆಟ್ನಲ್ಲಿದೆ. ಹೊಸ ಮೂಲಸೌಕರ್ಯ ಕಾಮಗಾರಿಗಳನ್ನು ಆರಂಭಿಸಲು ಈ ವರ್ಷದ ಬಜೆಟ್ನಲ್ಲಿ 50 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.ಈ ವರ್ಷ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಬಜೆಟ್ನಲ್ಲಿ 250 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದೆ.<br /> <br /> ಇದಲ್ಲದೆ, 2010-11ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯ ಜೋಗಿಮಟ್ಟಿಯಲ್ಲಿ ಪರಿಸರ ಪ್ರವಾಸೋದ್ಯಮ ಯೋಜನೆ, ಧಾರವಾಡದ ಸಾಧನಕೇರಿಯ ಸೌಂದರ್ಯ ವರ್ಧನೆ, ಮಲ್ಪೆ, ಮರವಂತೆ, ಸೇಂಟ್ ಮೇರಿ ದ್ವೀಪ ಮತ್ತು ಗೋಕರ್ಣಗಳಲ್ಲಿ ಪ್ರವಾಸೋದ್ಯಮ ಸೌಕರ್ಯ ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ ಎಂದು ಬಜೆಟ್ನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>