<p><strong>ಮರಿಯಮ್ಮನಹಳ್ಳಿ;</strong> ಈಜಿಪ್ತ್ ಸೇರಿದಂತೆ ಹಲವಾರು ನಾಗರಿಕತೆಯ ಬಗ್ಗೆ ಸರಿಯಾದ ಮಾಹಿತಿ ಇದೆ. ಆದರೆ ವಿಜಯನಗರ ಸಾಮ್ರಾಜ್ಯದ ಬಗ್ಗೆ ಪರಿಪೂರ್ಣವಾದ ಮಾಹಿತಿ ಇಲ್ಲ. ಹೀಗಾಗಿ ವಿಜಯನಗರ ಇತಿಹಾಸದ ವಿಷಯದಲ್ಲಿ ನಾವು ಗೊಂದಲದಲ್ಲಿ ಸಿಲುಕಿದ್ದೇವೆ ಎಂದು ಹೊಸಪೇಟೆ ವಿಜಯನಗರ ಕಾಲೇಜಿನ ಉಪನ್ಯಾಸಕ ಡಾ.ಎಚ್.ಎಂ. ಚಂದ್ರಶೇಖರಶಾಸ್ತ್ರಿ ಅಭಿಪ್ರಾಯಪಟ್ಟರು.<br /> <br /> ಇಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನ ಹೊಸಪೇಟೆ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ದಿ.ಕಾಕುಬಾಳು ಮಠದ ಜಂಭಯ್ಯ ಪಾರ್ವತಮ್ಮ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.<br /> <br /> ‘ಹಂಪಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಧಾರ್ಮಿಕವಾಗಿ ಗತ ವೈಭವ ಮೆರೆದಿದೆ. ಈ ಇತಿಹಾಸವನ್ನು ನಾವು ಹುಡುಕುತ್ತಿದ್ದೇವೆ. ಮೊದಲು ನಮ್ಮ ಸಂಸ್ಕೃತಿ, ಇತಿಹಾಸವನ್ನು ನಾವು ಅರಿತುಕೊಳ್ಳಬೇಕಾಗಿದೆ’ ಎಂದು ಅವರು ಹೇಳಿದರು.<br /> <br /> ನಮ್ಮ ದೇಶದಲ್ಲಿನ ಎಷ್ಟೋ ಶಾಸನಗಳು ಕಣ್ಮರೆಯಾಗಿವೆ. ಉಳಿದಿರುವ ಶಾಸನಗಳನ್ನಾದರೂ ವಿದ್ಯಾರ್ಥಿಗಳು ಸಂರಕ್ಷಿಸುವ ಕೆಲಸ ಮಾಡಬೇಕು. ಕೈಗಾರೀಕರಣದಿಂದಾಗಿ ಗ್ರಾಮಗಳು ಮಾಯವಾಗುತ್ತಿವೆ. ಅಲ್ಲಿನ ಸಂಸ್ಕೃತಿ, ಬದುಕು, ಭಾಷೆಗೂ ಗಂಡಾಂತರ ಎದುರಾಗುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.<br /> <br /> ಗೋವಿಂದ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳಸಿಕೊಳ್ಳುವುದರ ಮೂಲಕ, ನಮ್ಮ ಭಾಷೆ, ಸಂಸ್ಕೃತಿಯನ್ನು ಆಳವಾಗಿ ಅರಿತುಕೊಳ್ಳಬೇಕು ಎಂದರು. <br /> <br /> ಎಸ್ಡಿಎಂಸಿ ಉಪಾಧ್ಯಕ್ಷ ಎಂ. ಬದರೀನಾಥ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಟಿ.ಎನ್. ಸುಜಾತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಕೆ.ಲಕ್ಷ್ಮಣ ಅಧ್ಯಕ್ಷತೆ ವಹಿಸಿದ್ದರು.<br /> <br /> ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರಾಣೇಶ್ ಕುಲಕರ್ಣಿ, ರೇವಣಸಿದ್ದಪ್ಪ, ಕೆ.ಎಂ. ಸುರೇಶ, ಉಪ ತಹಸೀಲ್ದಾರ ನಾಗರಾಜ ಉಪಸ್ಥಿತರಿದ್ದರು. ಉಪನ್ಯಾಸಕ ತಿಪ್ಪೇರುದ್ರಪ್ಪ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ;</strong> ಈಜಿಪ್ತ್ ಸೇರಿದಂತೆ ಹಲವಾರು ನಾಗರಿಕತೆಯ ಬಗ್ಗೆ ಸರಿಯಾದ ಮಾಹಿತಿ ಇದೆ. ಆದರೆ ವಿಜಯನಗರ ಸಾಮ್ರಾಜ್ಯದ ಬಗ್ಗೆ ಪರಿಪೂರ್ಣವಾದ ಮಾಹಿತಿ ಇಲ್ಲ. ಹೀಗಾಗಿ ವಿಜಯನಗರ ಇತಿಹಾಸದ ವಿಷಯದಲ್ಲಿ ನಾವು ಗೊಂದಲದಲ್ಲಿ ಸಿಲುಕಿದ್ದೇವೆ ಎಂದು ಹೊಸಪೇಟೆ ವಿಜಯನಗರ ಕಾಲೇಜಿನ ಉಪನ್ಯಾಸಕ ಡಾ.ಎಚ್.ಎಂ. ಚಂದ್ರಶೇಖರಶಾಸ್ತ್ರಿ ಅಭಿಪ್ರಾಯಪಟ್ಟರು.<br /> <br /> ಇಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನ ಹೊಸಪೇಟೆ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ದಿ.ಕಾಕುಬಾಳು ಮಠದ ಜಂಭಯ್ಯ ಪಾರ್ವತಮ್ಮ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.<br /> <br /> ‘ಹಂಪಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಧಾರ್ಮಿಕವಾಗಿ ಗತ ವೈಭವ ಮೆರೆದಿದೆ. ಈ ಇತಿಹಾಸವನ್ನು ನಾವು ಹುಡುಕುತ್ತಿದ್ದೇವೆ. ಮೊದಲು ನಮ್ಮ ಸಂಸ್ಕೃತಿ, ಇತಿಹಾಸವನ್ನು ನಾವು ಅರಿತುಕೊಳ್ಳಬೇಕಾಗಿದೆ’ ಎಂದು ಅವರು ಹೇಳಿದರು.<br /> <br /> ನಮ್ಮ ದೇಶದಲ್ಲಿನ ಎಷ್ಟೋ ಶಾಸನಗಳು ಕಣ್ಮರೆಯಾಗಿವೆ. ಉಳಿದಿರುವ ಶಾಸನಗಳನ್ನಾದರೂ ವಿದ್ಯಾರ್ಥಿಗಳು ಸಂರಕ್ಷಿಸುವ ಕೆಲಸ ಮಾಡಬೇಕು. ಕೈಗಾರೀಕರಣದಿಂದಾಗಿ ಗ್ರಾಮಗಳು ಮಾಯವಾಗುತ್ತಿವೆ. ಅಲ್ಲಿನ ಸಂಸ್ಕೃತಿ, ಬದುಕು, ಭಾಷೆಗೂ ಗಂಡಾಂತರ ಎದುರಾಗುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.<br /> <br /> ಗೋವಿಂದ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳಸಿಕೊಳ್ಳುವುದರ ಮೂಲಕ, ನಮ್ಮ ಭಾಷೆ, ಸಂಸ್ಕೃತಿಯನ್ನು ಆಳವಾಗಿ ಅರಿತುಕೊಳ್ಳಬೇಕು ಎಂದರು. <br /> <br /> ಎಸ್ಡಿಎಂಸಿ ಉಪಾಧ್ಯಕ್ಷ ಎಂ. ಬದರೀನಾಥ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಟಿ.ಎನ್. ಸುಜಾತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಕೆ.ಲಕ್ಷ್ಮಣ ಅಧ್ಯಕ್ಷತೆ ವಹಿಸಿದ್ದರು.<br /> <br /> ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರಾಣೇಶ್ ಕುಲಕರ್ಣಿ, ರೇವಣಸಿದ್ದಪ್ಪ, ಕೆ.ಎಂ. ಸುರೇಶ, ಉಪ ತಹಸೀಲ್ದಾರ ನಾಗರಾಜ ಉಪಸ್ಥಿತರಿದ್ದರು. ಉಪನ್ಯಾಸಕ ತಿಪ್ಪೇರುದ್ರಪ್ಪ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>