<p><strong>ವಿಜಯಪುರ:</strong> ಇಲ್ಲಿನ ಗುರಪ್ಪಸ್ವಾಮಿ ಮಠದ ಓಂಕಾರೇಶ್ವರಸ್ವಾಮಿಯವರ ಕಲ್ಲುಗಾಲಿ ರಥೋತ್ಸವ ಮಂಗಳವಾರ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಭಕ್ತರ ಜಯಘೋಷದ ನಡುವೆ ರಥೋತ್ಸವ ಜಿ.ಎಂ. ವೃತ್ತ ತಲುಪಿತು. ಸಂಜೆಯವರೆಗೂ ಜಿ.ಎಂ. ವೃತ್ತದಲ್ಲಿ ಭಕ್ತರು ಪೂಜೆ ಸಲ್ಲಿಸಿದರು. <br /> </p>.<p>ನಂತರ ರಥವನ್ನು ಎಳೆದು ದೂಳೋತ್ಸವ ಹಮ್ಮಿಕೊಳ್ಳಲಾಗಿತ್ತು. ರಥೋತ್ಸವ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಸುಪ್ರಭಾತ ಸೇವೆ, ಅಭಿಷೇಕ, ವಿಶೇಷ ಅಲಂಕಾರಗಳು ನೆರವೇರಿದವು.ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ರಥೋತ್ಸವದ ನೇತೃತ್ವವಹಿಸಿದ್ದರು, ಓಂಕಾರೇಶ್ವರಸ್ವಾಮಿ ಒಕ್ಕಲಿಗರ ಟ್ರಸ್ಟ್ ಪದಾಧಿಕಾರಿಗಳು, ಪುರಸಭಾ ಸದಸ್ಯರು ಪಾಲ್ಗೊಂಡಿದ್ದರು.</p>.<p><strong> ಗಿರಿಜಾ ಕಲ್ಯಾಣೋತ್ಸವ:</strong> ಜಾತ್ರಾ ಅಂಗವಾಗಿ ನಡೆದ ಗಿರಿಜಾ ಕಲ್ಯಾಣೋತ್ಸವವು ಅಸಂಖ್ಯಾತ ಭಕ್ತರ ಕಣ್ಮನ ತುಂಬಿಸಿತು. ಸಾಂಪ್ರದಾಯದಂತೆ ಸುಗಂಧ ದ್ರವ್ಯಗಳನ್ನು ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ತಂದು ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ಹಾರ ಬದಲಾಯಿಸಿ ಕಲ್ಯಾಣೋತ್ಸವ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಇಲ್ಲಿನ ಗುರಪ್ಪಸ್ವಾಮಿ ಮಠದ ಓಂಕಾರೇಶ್ವರಸ್ವಾಮಿಯವರ ಕಲ್ಲುಗಾಲಿ ರಥೋತ್ಸವ ಮಂಗಳವಾರ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಭಕ್ತರ ಜಯಘೋಷದ ನಡುವೆ ರಥೋತ್ಸವ ಜಿ.ಎಂ. ವೃತ್ತ ತಲುಪಿತು. ಸಂಜೆಯವರೆಗೂ ಜಿ.ಎಂ. ವೃತ್ತದಲ್ಲಿ ಭಕ್ತರು ಪೂಜೆ ಸಲ್ಲಿಸಿದರು. <br /> </p>.<p>ನಂತರ ರಥವನ್ನು ಎಳೆದು ದೂಳೋತ್ಸವ ಹಮ್ಮಿಕೊಳ್ಳಲಾಗಿತ್ತು. ರಥೋತ್ಸವ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಸುಪ್ರಭಾತ ಸೇವೆ, ಅಭಿಷೇಕ, ವಿಶೇಷ ಅಲಂಕಾರಗಳು ನೆರವೇರಿದವು.ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ರಥೋತ್ಸವದ ನೇತೃತ್ವವಹಿಸಿದ್ದರು, ಓಂಕಾರೇಶ್ವರಸ್ವಾಮಿ ಒಕ್ಕಲಿಗರ ಟ್ರಸ್ಟ್ ಪದಾಧಿಕಾರಿಗಳು, ಪುರಸಭಾ ಸದಸ್ಯರು ಪಾಲ್ಗೊಂಡಿದ್ದರು.</p>.<p><strong> ಗಿರಿಜಾ ಕಲ್ಯಾಣೋತ್ಸವ:</strong> ಜಾತ್ರಾ ಅಂಗವಾಗಿ ನಡೆದ ಗಿರಿಜಾ ಕಲ್ಯಾಣೋತ್ಸವವು ಅಸಂಖ್ಯಾತ ಭಕ್ತರ ಕಣ್ಮನ ತುಂಬಿಸಿತು. ಸಾಂಪ್ರದಾಯದಂತೆ ಸುಗಂಧ ದ್ರವ್ಯಗಳನ್ನು ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ತಂದು ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ಹಾರ ಬದಲಾಯಿಸಿ ಕಲ್ಯಾಣೋತ್ಸವ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>