<p><strong>ಮಡಿಕೇರಿ:</strong> ಮಡಿಕೇರಿಯಲ್ಲಿ ನಡೆಯುತ್ತಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ವಿಜಾಪುರ ಜಿಲ್ಲೆಯಿಂದ ಆಗಮಿಸಿದ ಯುವಕನೊಬ್ಬನ ಎಸ್ಸೆಸ್ಸೆಲ್ಸಿ ಮೂಲ ಅಂಕಪಟ್ಟಿಯನ್ನು ಪೊಲೀಸ್ ಪೇದೆಯೊಬ್ಬರು ಹರಿದು ಹಾಕಿದ ಘಟನೆ ಮಂಗಳವಾರ ಸಂಜೆ ನಡೆದಿದೆ.<br /> <br /> ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸೇನಾ ನೇಮಕಾತಿಯಲ್ಲಿ ಭಾಗವಹಿಸಲು ವಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಸಿದ್ಧನಾಥ ಊರಿನ ಯುವಕ ಯಮನಪ್ಪ ಸುಣಗಾರ ಆಗಮಿಸಿದ್ದರು. <br /> <br /> ದೈಹಿಕ ಪರೀಕ್ಷೆ ನೀಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತಿ ಪೊಲೀಸ್ ಪೇದೆಯೊಬ್ಬರೊಂದಿಗೆ ಮಾತಿಗೆ ಮಾತು ಬೆಳೆದು, ಆ ಪೇದೆ ಇವರ ಎಸ್ಸೆಸ್ಸೆಲ್ಸಿ ಮೂಲ ಅಂಕಪಟ್ಟಿಯನ್ನೇ ಹರಿದು ಹಾಕಿದರು ಎನ್ನಲಾಗಿದೆ.<br /> <br /> ಈ ಸಂಬಂಧ ಯಮನಪ್ಪ ಸುಣಗಾರ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಘಟನೆ ಕುರಿತು ಪ್ರಜಾವಾಣಿಯೊಂದಿಗೆ ಮಾತನಾಡಿದ ಡಿವೈಎಪಿ ಜೆ.ಡಿ.ಪ್ರಕಾಶ್ ದೂರನ್ನು ಸ್ವೀಕರಿಸಲಾಗಿದೆ, ಪ್ರಕರಣ ಕುರಿತು ತನಿಖೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ಬೆಳಿಗ್ಗೆ ವರದಿ ನೀಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಮಡಿಕೇರಿಯಲ್ಲಿ ನಡೆಯುತ್ತಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ವಿಜಾಪುರ ಜಿಲ್ಲೆಯಿಂದ ಆಗಮಿಸಿದ ಯುವಕನೊಬ್ಬನ ಎಸ್ಸೆಸ್ಸೆಲ್ಸಿ ಮೂಲ ಅಂಕಪಟ್ಟಿಯನ್ನು ಪೊಲೀಸ್ ಪೇದೆಯೊಬ್ಬರು ಹರಿದು ಹಾಕಿದ ಘಟನೆ ಮಂಗಳವಾರ ಸಂಜೆ ನಡೆದಿದೆ.<br /> <br /> ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸೇನಾ ನೇಮಕಾತಿಯಲ್ಲಿ ಭಾಗವಹಿಸಲು ವಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಸಿದ್ಧನಾಥ ಊರಿನ ಯುವಕ ಯಮನಪ್ಪ ಸುಣಗಾರ ಆಗಮಿಸಿದ್ದರು. <br /> <br /> ದೈಹಿಕ ಪರೀಕ್ಷೆ ನೀಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತಿ ಪೊಲೀಸ್ ಪೇದೆಯೊಬ್ಬರೊಂದಿಗೆ ಮಾತಿಗೆ ಮಾತು ಬೆಳೆದು, ಆ ಪೇದೆ ಇವರ ಎಸ್ಸೆಸ್ಸೆಲ್ಸಿ ಮೂಲ ಅಂಕಪಟ್ಟಿಯನ್ನೇ ಹರಿದು ಹಾಕಿದರು ಎನ್ನಲಾಗಿದೆ.<br /> <br /> ಈ ಸಂಬಂಧ ಯಮನಪ್ಪ ಸುಣಗಾರ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಘಟನೆ ಕುರಿತು ಪ್ರಜಾವಾಣಿಯೊಂದಿಗೆ ಮಾತನಾಡಿದ ಡಿವೈಎಪಿ ಜೆ.ಡಿ.ಪ್ರಕಾಶ್ ದೂರನ್ನು ಸ್ವೀಕರಿಸಲಾಗಿದೆ, ಪ್ರಕರಣ ಕುರಿತು ತನಿಖೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ಬೆಳಿಗ್ಗೆ ವರದಿ ನೀಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>