<p><strong>ನವಲಗುಂದ:</strong> ಪವಾಡ ಪುರುಷ ಅಜಾತ ನಾಗಲಿಂಗ ಸ್ವಾಮಿಗಳ 132ನೇ ಆರಾಧನಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.<br /> <br /> ಬೆಳಿಗ್ಗೆ ಸಮಾಧಿಗೆ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ಸಹಸ್ರಾರು ಭಕ್ತರ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಮಧ್ಯಾಹ್ನ ನಡೆದ ಮಾದಲಿ ಪೂಜೆಯಲ್ಲಿ ಪಾಲ್ಗೊಂಡ ಭಕ್ತರು ಮಹಾಪ್ರಸಾದ ಸ್ವಿಕರಿಸಿ ಧನ್ಯರಾದರು.<br /> <br /> ಸಂಜೆ ನಡೆದ 237ನೇ ನಾಗಲಿಂಗಾನುಭವಗೋಷ್ಠಿಯಲ್ಲಿ ಮಠದ ವೆಬ್ಸೈಟ್ಗೆ ಚಾಲನೆ ನೀಡಲಾಯಿತು.<br /> <br /> ನಾಗಲಿಂಗಸ್ವಾಮಿ ಮಠದ ಪೀಠಾಧೀಶರಾದ ವೀರೇಂದ್ರಸ್ವಾಮೀಜಿ, ಅಡ್ನೂರ ದಾಸೋಹಮಠದ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಹುಣಸ್ಯಾಳ ಸಿದ್ದಲಿಂಗ ಕೈವಲ್ಯಾಶ್ರಮದ ನಿಜಗುಣದೇವರು, ಹೊಳೆ ಆಲೂರು ಯಚ್ಚರಸ್ವಾಮಿ ಮಠದ ಯಚ್ಚರೇಶ್ವರ ಸ್ವಾಮೀಜಿ, ನರಗುಂದ ಪತ್ರಿವನ ಮಠದ ಬಸಯ್ಯಸ್ವಾಮೀಜಿ ಸಾನಿಧ್ಯ ವಹಿಸಿದ್ದರು.<br /> <br /> ವರ್ತಕರ ಸಂಘದ ಅಧ್ಯಕ್ಷ ಆರ್.ಎನ್.ಧಾರವಾಡ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ನಾಗಲಿಂಗಸ್ವಾಮಿ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಎಂ.ಎನ್.ಬಡಿಗೇರ ವರದಿ ವಾಚಿಸಿದರು. <br /> <br /> ನಿವೃತ್ತ ಶಿಕ್ಷಕ ಐ.ಎಂ.ಮನ್ವಾಚಾರ್ ಅವರಿಗೆ ನಾಗಲಿಂಗಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ಪವಾಡ ಪುರುಷ ಅಜಾತ ನಾಗಲಿಂಗ ಸ್ವಾಮಿಗಳ 132ನೇ ಆರಾಧನಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.<br /> <br /> ಬೆಳಿಗ್ಗೆ ಸಮಾಧಿಗೆ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ಸಹಸ್ರಾರು ಭಕ್ತರ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಮಧ್ಯಾಹ್ನ ನಡೆದ ಮಾದಲಿ ಪೂಜೆಯಲ್ಲಿ ಪಾಲ್ಗೊಂಡ ಭಕ್ತರು ಮಹಾಪ್ರಸಾದ ಸ್ವಿಕರಿಸಿ ಧನ್ಯರಾದರು.<br /> <br /> ಸಂಜೆ ನಡೆದ 237ನೇ ನಾಗಲಿಂಗಾನುಭವಗೋಷ್ಠಿಯಲ್ಲಿ ಮಠದ ವೆಬ್ಸೈಟ್ಗೆ ಚಾಲನೆ ನೀಡಲಾಯಿತು.<br /> <br /> ನಾಗಲಿಂಗಸ್ವಾಮಿ ಮಠದ ಪೀಠಾಧೀಶರಾದ ವೀರೇಂದ್ರಸ್ವಾಮೀಜಿ, ಅಡ್ನೂರ ದಾಸೋಹಮಠದ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಹುಣಸ್ಯಾಳ ಸಿದ್ದಲಿಂಗ ಕೈವಲ್ಯಾಶ್ರಮದ ನಿಜಗುಣದೇವರು, ಹೊಳೆ ಆಲೂರು ಯಚ್ಚರಸ್ವಾಮಿ ಮಠದ ಯಚ್ಚರೇಶ್ವರ ಸ್ವಾಮೀಜಿ, ನರಗುಂದ ಪತ್ರಿವನ ಮಠದ ಬಸಯ್ಯಸ್ವಾಮೀಜಿ ಸಾನಿಧ್ಯ ವಹಿಸಿದ್ದರು.<br /> <br /> ವರ್ತಕರ ಸಂಘದ ಅಧ್ಯಕ್ಷ ಆರ್.ಎನ್.ಧಾರವಾಡ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ನಾಗಲಿಂಗಸ್ವಾಮಿ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಎಂ.ಎನ್.ಬಡಿಗೇರ ವರದಿ ವಾಚಿಸಿದರು. <br /> <br /> ನಿವೃತ್ತ ಶಿಕ್ಷಕ ಐ.ಎಂ.ಮನ್ವಾಚಾರ್ ಅವರಿಗೆ ನಾಗಲಿಂಗಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>