<p><strong>ಕೂಡ್ಲಿಗಿ:</strong> ತಾಲ್ಲೂಕಿನ ಅಮ್ಮನಕೇರಿಯ ಬಸವೇಶ್ವರ ರಥೋತ್ಸವವು ಬುಧವಾರ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತರು ಜಯಘೋಷಗಳೊಂದಿಗೆ ರಥವನ್ನು ಮುನ್ನಡೆಸಿದರು.<br /> <br /> ಬಸವೇಶ್ವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ರಥಕ್ಕೆ ಪ್ರದಕ್ಷಿಣೆ ಹಾಕಿಸಲಾಯಿತು. ನಂತರ ಸ್ವಾಮಿಯ ಪಟವನ್ನು ಹರಾಜು ಹಾಕಲಾಯಿತು. ಮರಬನಹಳ್ಳಿ ಕೋಟ್ರೇಶ್ ದೇವರ ಪಟವನ್ನು ೫೫,೫೦೧ ರೂಪಾಯಿಗೆ ಪಡೆದರು.<br /> <br /> ವಿವಿಧ ವಾದ್ಯಗಳೊಂದಿಗೆ, ನಂದಿಕೋಲಿನೊಂದಿಗೆ ಸ್ವಾಮಿಯ ರಥವನ್ನು ಸಂಜೆ ೬ಕ್ಕೆ ಸರಿಯಾಗಿ ಭಕ್ತಾದಿಗಳು ಉತ್ಸಾಹದಿಂದ ಮುನ್ನಡೆಸಿದರು. ಸಾವಿರಾರು ಭಕ್ತರು ಒಕ್ಕೊರಲಿನಿಂದ ಜಯಘೋಷ ಮಾಡಿದರು. ಭಕ್ತರು ಬಾಳೆಹಣ್ಣುಗಳನ್ನು ರಥಕ್ಕೆ ತೂರಿ ಸಂಭ್ರಮಿಸಿದರು.<br /> <br /> ಪಾದಗಟ್ಟೆಗೆ ತಲುಪಿದ ನಂತರ ರಥವನ್ನು ಮರಳಿ ಮುನ್ನಡೆಸಲಾಯಿತು. ರಥೋತ್ಸವಕ್ಕೆ ತಾಲ್ಲೂಕಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.ಕೂಡ್ಲಿಗಿ ಠಾಣೆಯ ಪಿಎಸ್ಐ ಕೃಷ್ಣ ನಾಯ್ಕ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ತಾಲ್ಲೂಕಿನ ಅಮ್ಮನಕೇರಿಯ ಬಸವೇಶ್ವರ ರಥೋತ್ಸವವು ಬುಧವಾರ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತರು ಜಯಘೋಷಗಳೊಂದಿಗೆ ರಥವನ್ನು ಮುನ್ನಡೆಸಿದರು.<br /> <br /> ಬಸವೇಶ್ವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ರಥಕ್ಕೆ ಪ್ರದಕ್ಷಿಣೆ ಹಾಕಿಸಲಾಯಿತು. ನಂತರ ಸ್ವಾಮಿಯ ಪಟವನ್ನು ಹರಾಜು ಹಾಕಲಾಯಿತು. ಮರಬನಹಳ್ಳಿ ಕೋಟ್ರೇಶ್ ದೇವರ ಪಟವನ್ನು ೫೫,೫೦೧ ರೂಪಾಯಿಗೆ ಪಡೆದರು.<br /> <br /> ವಿವಿಧ ವಾದ್ಯಗಳೊಂದಿಗೆ, ನಂದಿಕೋಲಿನೊಂದಿಗೆ ಸ್ವಾಮಿಯ ರಥವನ್ನು ಸಂಜೆ ೬ಕ್ಕೆ ಸರಿಯಾಗಿ ಭಕ್ತಾದಿಗಳು ಉತ್ಸಾಹದಿಂದ ಮುನ್ನಡೆಸಿದರು. ಸಾವಿರಾರು ಭಕ್ತರು ಒಕ್ಕೊರಲಿನಿಂದ ಜಯಘೋಷ ಮಾಡಿದರು. ಭಕ್ತರು ಬಾಳೆಹಣ್ಣುಗಳನ್ನು ರಥಕ್ಕೆ ತೂರಿ ಸಂಭ್ರಮಿಸಿದರು.<br /> <br /> ಪಾದಗಟ್ಟೆಗೆ ತಲುಪಿದ ನಂತರ ರಥವನ್ನು ಮರಳಿ ಮುನ್ನಡೆಸಲಾಯಿತು. ರಥೋತ್ಸವಕ್ಕೆ ತಾಲ್ಲೂಕಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.ಕೂಡ್ಲಿಗಿ ಠಾಣೆಯ ಪಿಎಸ್ಐ ಕೃಷ್ಣ ನಾಯ್ಕ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>