<p><strong>ಅರಸೀಕೆರೆ:</strong> ತಾಲ್ಲೂಕಿನ ಕಸಬಾ ಹೋಬಳಿ ಗುತ್ತಿನಕೆರೆ ರಂಗನಾಥಸ್ವಾಮಿ ಮಹಾ ರಥೋತ್ಸವ ಮಂಗಳವಾರ ಸಡಗರ ಸಂಭ್ರಮದಿಂದ ಜರುಗಿತು. ಸಹಸ್ರಾರು ಭಕ್ತರು ರಥ ಎಳೆಯುವ ಮೂಲಕ ಹರಕೆ ತೀರಿಸಿಕೊಂಡರು.<br /> <br /> ಗ್ರಾಮದ ರಂಗನಾಥ ಸ್ವಾಮಿ ಮಹಾ ರಥೋತ್ಸವ ಅಂಗವಾಗಿ ಜ14ರಿಂದ 19ರ ವರೆಗೆ ವಿವಿಧ ಧಾರ್ಮಿಕ ಕಾರ್ಯ ಕ್ರಮ ಆಯೋಜಿಸಲಾಗಿದ್ದು, ಮಂಗಳ ವಾರ ಬೆಳಿಗ್ಗೆಯಿಂದ ದೇವಾ ಲಯದಲ್ಲಿ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ಗಳು ಶಾಸ್ತ್ರೋಕ್ತವಾಗಿ ನಡೆದವು.<br /> <br /> ನಂತರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತವಾದ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಮಂಗಲ ಕರಡೇವು ವಾದ್ಯದೊಂದಿಗೆ ರಥ ಬೀದಿಯಲ್ಲಿ ಕರೆ ದೊಯ್ಯಲಾಯಿತು. ಬಳಿಕ ಸುತ್ತ- ಮುತ್ತಲ ಗ್ರಾಮಗಳಾದ ಹಾರನಹಳ್ಳಿ ಕೋಡಮ್ಮದೇವಿ, ಯಳವಾರೆ ಹುಚ್ಚಮ್ಮದೇವಿ ಸಮ್ಮುಖದಲ್ಲಿ ಉತ್ಸವ ರಥ ಪ್ರದಕ್ಷಿಣೆ ಮಾಡಿದ ನಂತರ ರಂಗನಾಥ ಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು.<br /> <br /> ಬಳಿಕ ರಥದ ಗಾಲಿಗೆ ಪೂಜೆ ಸಲ್ಲಿಸಿ ತೆಂಗಿನ ಕಾಯಿ ಒಡೆಯುತ್ತಿದ್ದಂತೆ ನೂರಾರು ಭಕ್ತರು ರಂಗನಾಥ ಸ್ವಾಮಿ ಉಘೇ, ಉಘೇ ಎಂದು ಜಯಘೋಷ ಹಾಕುತ್ತಾ ರಥವನ್ನು ಎಳೆದರು. <br /> <br /> ರಥ ಚಲಿಸುತ್ತಿದ್ದಂತೆ ನವ ನಧು-ವರರು ಹಾಗೂ ಯುವಕ ಯುವತಿಯರು ರಥದ ಕಲಶಕ್ಕೆ ಬಾಳೆಹಣ್ಣು, ಉತ್ತತ್ತಿ ತೂರಿ ಸಂಭ್ರಮಿಸಿದರು.<br /> <br /> ರಂಗನಾಥಸ್ವಾಮಿ ಜಾತ್ರೆಗೆ ಸುತ್ತ-ಮುತ್ತಲ ಹಳ್ಳಿಗಳ ಭಕ್ತರಲ್ಲದೆ ಹೊರ ಜಿಲ್ಲೆಗಳಿಂದಲೂ ಜನತೆ ಜಾತ್ರೆಯಲ್ಲಿ ಪಾಲ್ಗೊಂಡು ಅಲಂಕೃತ ಮೂರ್ತಿಯನ್ನು ಕಣ್ತುಂಬಿಕೊಂಡರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ತಾಲ್ಲೂಕಿನ ಕಸಬಾ ಹೋಬಳಿ ಗುತ್ತಿನಕೆರೆ ರಂಗನಾಥಸ್ವಾಮಿ ಮಹಾ ರಥೋತ್ಸವ ಮಂಗಳವಾರ ಸಡಗರ ಸಂಭ್ರಮದಿಂದ ಜರುಗಿತು. ಸಹಸ್ರಾರು ಭಕ್ತರು ರಥ ಎಳೆಯುವ ಮೂಲಕ ಹರಕೆ ತೀರಿಸಿಕೊಂಡರು.<br /> <br /> ಗ್ರಾಮದ ರಂಗನಾಥ ಸ್ವಾಮಿ ಮಹಾ ರಥೋತ್ಸವ ಅಂಗವಾಗಿ ಜ14ರಿಂದ 19ರ ವರೆಗೆ ವಿವಿಧ ಧಾರ್ಮಿಕ ಕಾರ್ಯ ಕ್ರಮ ಆಯೋಜಿಸಲಾಗಿದ್ದು, ಮಂಗಳ ವಾರ ಬೆಳಿಗ್ಗೆಯಿಂದ ದೇವಾ ಲಯದಲ್ಲಿ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ಗಳು ಶಾಸ್ತ್ರೋಕ್ತವಾಗಿ ನಡೆದವು.<br /> <br /> ನಂತರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತವಾದ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಮಂಗಲ ಕರಡೇವು ವಾದ್ಯದೊಂದಿಗೆ ರಥ ಬೀದಿಯಲ್ಲಿ ಕರೆ ದೊಯ್ಯಲಾಯಿತು. ಬಳಿಕ ಸುತ್ತ- ಮುತ್ತಲ ಗ್ರಾಮಗಳಾದ ಹಾರನಹಳ್ಳಿ ಕೋಡಮ್ಮದೇವಿ, ಯಳವಾರೆ ಹುಚ್ಚಮ್ಮದೇವಿ ಸಮ್ಮುಖದಲ್ಲಿ ಉತ್ಸವ ರಥ ಪ್ರದಕ್ಷಿಣೆ ಮಾಡಿದ ನಂತರ ರಂಗನಾಥ ಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು.<br /> <br /> ಬಳಿಕ ರಥದ ಗಾಲಿಗೆ ಪೂಜೆ ಸಲ್ಲಿಸಿ ತೆಂಗಿನ ಕಾಯಿ ಒಡೆಯುತ್ತಿದ್ದಂತೆ ನೂರಾರು ಭಕ್ತರು ರಂಗನಾಥ ಸ್ವಾಮಿ ಉಘೇ, ಉಘೇ ಎಂದು ಜಯಘೋಷ ಹಾಕುತ್ತಾ ರಥವನ್ನು ಎಳೆದರು. <br /> <br /> ರಥ ಚಲಿಸುತ್ತಿದ್ದಂತೆ ನವ ನಧು-ವರರು ಹಾಗೂ ಯುವಕ ಯುವತಿಯರು ರಥದ ಕಲಶಕ್ಕೆ ಬಾಳೆಹಣ್ಣು, ಉತ್ತತ್ತಿ ತೂರಿ ಸಂಭ್ರಮಿಸಿದರು.<br /> <br /> ರಂಗನಾಥಸ್ವಾಮಿ ಜಾತ್ರೆಗೆ ಸುತ್ತ-ಮುತ್ತಲ ಹಳ್ಳಿಗಳ ಭಕ್ತರಲ್ಲದೆ ಹೊರ ಜಿಲ್ಲೆಗಳಿಂದಲೂ ಜನತೆ ಜಾತ್ರೆಯಲ್ಲಿ ಪಾಲ್ಗೊಂಡು ಅಲಂಕೃತ ಮೂರ್ತಿಯನ್ನು ಕಣ್ತುಂಬಿಕೊಂಡರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>