<p><strong>ಕನಕಪುರ: </strong>ವೈಜ್ಞಾನಿಕ ಪ್ರಗತಿಯಿಂದ ಮಾತ್ರ ಒಂದು ದೇಶ ಸಮಗ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ದೇಗುಲಮಠ ಮುಮ್ಮಡಿ ಮಹಾಲಿಂಗ ಸ್ವಾಮೀಜಿ ಇಲ್ಲಿ ಅಭಿಪ್ರಾಯಪಟ್ಟರು. <br /> ಪಟ್ಟಣದ ದೇಗುಲಮಠದ ನಿರ್ವಾಣಸ್ವಾಮಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ವಿಜ್ಞಾನ ಮೇಳದಲ್ಲಿ ಅವರು ಮಾತನಾಡಿದರು.<br /> </p>.<p>ಸುನಾಮಿ ಹಾಗೂ ಭೂಕಂಪಕ್ಕೆ ಸಿಲುಕಿದ ಜಪಾನ್ನ ಜನತೆ ತತ್ತರಿಸಿ ಹೋಗಿದ್ದಾರೆ. ಆದರೂ ಸಹ ಅವರು ಸಾಧಿಸಿರುವ ಅದ್ಬುತ ವೈಜ್ಞಾನಿಕ ಪ್ರಗತಿಯಿಂದಾಗಿ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ಮೆಟ್ಟಿನಿಲ್ಲುವ ಮನೋಭಾವ ಪ್ರದರ್ಶಿಸುತ್ತಿದ್ದಾರೆ ಎಂದು ತಿಳಿಸಿದರು. <br /> <br /> ಭಾರತ ವೈಜ್ಞಾನಿಕವಾಗಿ ಇನ್ನೂ ಪ್ರಗತಿ ಕಾಣಬೇಕಿದೆ. ಬಡತನ ನಿರ್ಮೂಲನೆ, ನಿರುದ್ಯೋಗ ಸಮಸ್ಯೆಯಂತಹ ಸಾಮಾಜಿಕ ಪಿಡುಗುಗಳು ದೂರವಾಗಿ ಸಮಾಜದಲ್ಲಿ ಸಮಾನತೆ ನಿರ್ಮಾಣವಾಗಬೇಕಿದೆ. ವೈಜ್ಞಾನಿಕವಾಗಿ ಮೇಲುಗೈ ಸಾಧಿಸಲು ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಿದೆ. ಈ ನಿಟ್ಟಿನಲ್ಲಿ ಇಂದು ನಡೆಯುತ್ತಿರುವ ವಿಜ್ಞಾನ ಮೇಳ ಪೂರಕವಾಗಿದೆ. <br /> <br /> ಎರಡು ದಿನ ನಡೆಯುವ ವಿಜ್ಞಾನ ಕಮ್ಮಟದಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ ಇಒ ಜೆ.ಜಿ.ನಾಯಕ್, ಬಿಇಒ ಎಚ್.ಶಿವರಾಮೇಗೌಡ, ತಹಶೀಲ್ದಾರ್ ಪ್ರಜ್ಞಾ, ಶಿಕ್ಷಣ ಸಂಯೋಜಕ ಶಿವರಾಜು, ಮುಖ್ಯ ಶಿಕ್ಷಕ ಸಿ.ಪುಟ್ಟಸ್ವಾಮಿ, ವೈ.ಎನ್.ಪರಮಶಿವಯ್ಯ, ವರದರಾಜು ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ವೈಜ್ಞಾನಿಕ ಪ್ರಗತಿಯಿಂದ ಮಾತ್ರ ಒಂದು ದೇಶ ಸಮಗ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ದೇಗುಲಮಠ ಮುಮ್ಮಡಿ ಮಹಾಲಿಂಗ ಸ್ವಾಮೀಜಿ ಇಲ್ಲಿ ಅಭಿಪ್ರಾಯಪಟ್ಟರು. <br /> ಪಟ್ಟಣದ ದೇಗುಲಮಠದ ನಿರ್ವಾಣಸ್ವಾಮಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ವಿಜ್ಞಾನ ಮೇಳದಲ್ಲಿ ಅವರು ಮಾತನಾಡಿದರು.<br /> </p>.<p>ಸುನಾಮಿ ಹಾಗೂ ಭೂಕಂಪಕ್ಕೆ ಸಿಲುಕಿದ ಜಪಾನ್ನ ಜನತೆ ತತ್ತರಿಸಿ ಹೋಗಿದ್ದಾರೆ. ಆದರೂ ಸಹ ಅವರು ಸಾಧಿಸಿರುವ ಅದ್ಬುತ ವೈಜ್ಞಾನಿಕ ಪ್ರಗತಿಯಿಂದಾಗಿ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ಮೆಟ್ಟಿನಿಲ್ಲುವ ಮನೋಭಾವ ಪ್ರದರ್ಶಿಸುತ್ತಿದ್ದಾರೆ ಎಂದು ತಿಳಿಸಿದರು. <br /> <br /> ಭಾರತ ವೈಜ್ಞಾನಿಕವಾಗಿ ಇನ್ನೂ ಪ್ರಗತಿ ಕಾಣಬೇಕಿದೆ. ಬಡತನ ನಿರ್ಮೂಲನೆ, ನಿರುದ್ಯೋಗ ಸಮಸ್ಯೆಯಂತಹ ಸಾಮಾಜಿಕ ಪಿಡುಗುಗಳು ದೂರವಾಗಿ ಸಮಾಜದಲ್ಲಿ ಸಮಾನತೆ ನಿರ್ಮಾಣವಾಗಬೇಕಿದೆ. ವೈಜ್ಞಾನಿಕವಾಗಿ ಮೇಲುಗೈ ಸಾಧಿಸಲು ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಿದೆ. ಈ ನಿಟ್ಟಿನಲ್ಲಿ ಇಂದು ನಡೆಯುತ್ತಿರುವ ವಿಜ್ಞಾನ ಮೇಳ ಪೂರಕವಾಗಿದೆ. <br /> <br /> ಎರಡು ದಿನ ನಡೆಯುವ ವಿಜ್ಞಾನ ಕಮ್ಮಟದಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ ಇಒ ಜೆ.ಜಿ.ನಾಯಕ್, ಬಿಇಒ ಎಚ್.ಶಿವರಾಮೇಗೌಡ, ತಹಶೀಲ್ದಾರ್ ಪ್ರಜ್ಞಾ, ಶಿಕ್ಷಣ ಸಂಯೋಜಕ ಶಿವರಾಜು, ಮುಖ್ಯ ಶಿಕ್ಷಕ ಸಿ.ಪುಟ್ಟಸ್ವಾಮಿ, ವೈ.ಎನ್.ಪರಮಶಿವಯ್ಯ, ವರದರಾಜು ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>