<p>ಶಿವಮೊಗ್ಗ: ವಿಜ್ಞಾನ, ತಂತ್ರಜ್ಞಾನದ ಸಮರ್ಥ ಅಳವಡಿಕೆಯಿಂದ ಮಾತ್ರ ದೇಶದ ಬಹುಸಂಖ್ಯಾತ ಗ್ರಾಮೀಣ ಪ್ರದೇಶ ಜನರಿಗೆ ಗುಣಮಟ್ಟದ ಜೀವನ ಕಲ್ಪಿಸಲು ಸಾಧ್ಯ ಎಂದು ಬಾಹ್ಯಾಕಾಶ ವಿಜ್ಞಾನಿ ಡಾ.ಜಿ. ಮಾಧವನ್ ನಾಯರ್ ಪ್ರತಿಪಾದಿಸಿದರು.<br /> <br /> ಸಮೀಪದ ಜಾವಳ್ಳಿಯ ಜ್ಞಾನದೀಪ ವಿದ್ಯಾಸಂಸ್ಥೆ ಅರಬಿಂದೋ ಪಿಯು ಕಾಲೇಜಿನ ದಶಮಾನೋತ್ಸವ ವರ್ಷಾಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ದೇಶದ ಶೇ. 70ರಷ್ಟು ಜನ ಹಳ್ಳಿಯಲ್ಲಿ ಬದುಕುತ್ತಿದ್ದಾರೆ. ಅವರಿಗೆ ಗುಣಮಟ್ಟದ ಜೀವನ ಕಲ್ಪಿಸುವುದು ಇಂದಿನ ಬಹುದೊಡ್ಡ ಸವಾಲು. ಆರೋಗ್ಯ, ಶಿಕ್ಷಣ, ಮತ್ತಿತರ ಮೂಲಸೌಕರ್ಯ ಒದಗಿಸುವುದು ನಾಗರಿಕ ಸಮಾಜದ ಕರ್ತವ್ಯವಾಗಿದ್ದು, ಪಟ್ಟಣ ಪ್ರದೇಶಗಳಲ್ಲಿ ಸೃಷ್ಟಿಯಾಗುವ ಸಂಪತ್ತನ್ನು ಗ್ರಾಮೀಣ ಪ್ರದೇಶಕ್ಕೆ ಹಂಚಿಕೆ ಮಾಡಬೇಕು ಎಂದರು.<br /> <br /> ದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉತ್ಪಾದನೆ ದ್ವಿಗುಣಗೊಳಿಸುವ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡನೇ ಹಸಿರು ಕ್ರಾಂತಿಯ ಅಗತ್ಯವಿದೆ ಎಂದು ನಾಯರ್ ಪ್ರತಿಪಾದಿಸಿದರು.<br /> <br /> ಸಾಂಪ್ರದಾಯಿಕ ಇಂಧನ ಮೂಲಗಳು ಕೆಲವೇ ವರ್ಷಗಳಲ್ಲಿ ಬರಿದಾಗಲಿವೆ. ಇದಕ್ಕೆ ಪರ್ಯಾಯವಾದ ಅಣುಶಕ್ತಿ ಈಗ ದುಬಾರಿಯಾಗಿದೆ. ಇದನ್ನು ಕಡಿಮೆ ವೆಚ್ಚದಲ್ಲಿ ಉತ್ಪಾದಿಸುವ ಕೌಶಲ ಆವಿಷ್ಕಾರಗೊಳ್ಳಬೇಕು. ಅಲ್ಲದೇ, ಈ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಾದ ಸೌರಶಕ್ತಿ, ಗಾಳಿಯಂತ್ರ, ಜೈವಿಕ ಇಂಧನ ಬಳಕೆಗೆ ಜನ ಮುಂದಾಗಬೇಕು. ಇದರಲ್ಲೂ ಹೊಸ ಆವಿಷ್ಕಾರ, ಸಂಶೋಧನೆಗಳು ನಡೆದು ಜನರಿಗೆ ಈ ತಂತ್ರಜ್ಞಾನ ಸುಲಭವಾಗಿ ದೊರೆಯುವಂತಾಗಬೇಕು ಎಂದು ಸಲಹೆ ನೀಡಿದರು.<br /> <br /> ವಿಶ್ವದಲ್ಲಿ, ಭಾರತ ಆರ್ಥಿಕವಾಗಿ ಮೂರನೇ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳುತ್ತಿದೆ. ಈ ಹಂತದಲ್ಲಿ ದೇಶ ಕಟ್ಟುವ ದೊಡ್ಡ ಸವಾಲಿದೆ. ದೇಶವನ್ನು ನಡೆಸಿಕೊಂಡು ಹೋಗಲು, ದೇಶಕ್ಕೆ ನಾಯಕತ್ವ ನೀಡಲು ಉತ್ತಮ ಕೌಶಲವಿರುವ ಪ್ರತಿಭಾವಂತ ರಾಜಕಾರಣಿಗಳು ಇಂದು ದೇಶಕ್ಕೆ ಬೇಕಾಗಿದೆ ಎಂದು ಹೇಳಿದರು.<br /> <br /> `ಇಂದು ನಾನೇನು ಆಗಿದ್ದೇನೆ ಅದಕ್ಕೆ ನನ್ನ ಗುರು ಡಾ.ಕಲಾಂ ಕಾರಣ. ಅವರ ಜತೆ 20 ವರ್ಷ ಕೆಲಸ ಮಾಡಿದ್ದೇನೆ. ಅವರಿಂದ ಬಹಳಷ್ಟು ಕಲಿತಿದ್ದೇನೆ. ಅವರ ದೂರದೃಷ್ಟಿ, ಬದ್ಧತೆ, ಕಠಿಣ ಶ್ರಮ ಪ್ರಶ್ನಾತೀತ. ಯಾರಿಗಾದರೂ ಈ ಮೂರು ಗುಣಗಳಿದ್ದರೆ ಅವರು ಖಂಡಿತಾ ತಮ್ಮ ಗುರಿಗಳನ್ನು ಸಾಧಿಸುತ್ತಾರೆ~ ಎಂದರು.<br /> <br /> ಸಮಾರಂಭದಲ್ಲಿ ಡಾ.ಜಿ.ಮಾಧವನ್ ನಾಯರ್ ಹಾಗೂ ಅರಬಿಂದೋ ಪಿಯು ಕಾಲೇಜಿನ ಸಂಸ್ಥಾಪಕ ಪ್ರಾಂಶುಪಾಲ ಕೆ.ವಿ. ರಘುನಾಥ ಅವರನ್ನು ಸನ್ಮಾನಿಸಲಾಯಿತು.<br /> <br /> ಸಮಾರಂಭದಲ್ಲಿ ಸಂಸ್ಥೆ ಖಜಾಂಚಿ ಡಾ.ಕೆ.ಆರ್.ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಕಾರ್ಯದರ್ಶಿ ವಿ. ದೇವೇಂದ್ರ ಸ್ವಾಗತಿಸಿದರು. ಪ್ರಾಂಶುಪಾಲ ಕೆ. ನಾಗರಾಜ್ ಪ್ರಾಸ್ತಾವಿಕ ಮಾತನಾಡಿದರು. ಸಂಸ್ಥೆ ಉಪಾಧ್ಯಕ್ಷ ಟಿ. ಪ್ರಕಾಶ್ ಉಪಸ್ಥಿತರಿದ್ದರು. ಎಸ್. ಎಂ. ಜೋಸೆಫ್ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ವಿಜ್ಞಾನ, ತಂತ್ರಜ್ಞಾನದ ಸಮರ್ಥ ಅಳವಡಿಕೆಯಿಂದ ಮಾತ್ರ ದೇಶದ ಬಹುಸಂಖ್ಯಾತ ಗ್ರಾಮೀಣ ಪ್ರದೇಶ ಜನರಿಗೆ ಗುಣಮಟ್ಟದ ಜೀವನ ಕಲ್ಪಿಸಲು ಸಾಧ್ಯ ಎಂದು ಬಾಹ್ಯಾಕಾಶ ವಿಜ್ಞಾನಿ ಡಾ.ಜಿ. ಮಾಧವನ್ ನಾಯರ್ ಪ್ರತಿಪಾದಿಸಿದರು.<br /> <br /> ಸಮೀಪದ ಜಾವಳ್ಳಿಯ ಜ್ಞಾನದೀಪ ವಿದ್ಯಾಸಂಸ್ಥೆ ಅರಬಿಂದೋ ಪಿಯು ಕಾಲೇಜಿನ ದಶಮಾನೋತ್ಸವ ವರ್ಷಾಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ದೇಶದ ಶೇ. 70ರಷ್ಟು ಜನ ಹಳ್ಳಿಯಲ್ಲಿ ಬದುಕುತ್ತಿದ್ದಾರೆ. ಅವರಿಗೆ ಗುಣಮಟ್ಟದ ಜೀವನ ಕಲ್ಪಿಸುವುದು ಇಂದಿನ ಬಹುದೊಡ್ಡ ಸವಾಲು. ಆರೋಗ್ಯ, ಶಿಕ್ಷಣ, ಮತ್ತಿತರ ಮೂಲಸೌಕರ್ಯ ಒದಗಿಸುವುದು ನಾಗರಿಕ ಸಮಾಜದ ಕರ್ತವ್ಯವಾಗಿದ್ದು, ಪಟ್ಟಣ ಪ್ರದೇಶಗಳಲ್ಲಿ ಸೃಷ್ಟಿಯಾಗುವ ಸಂಪತ್ತನ್ನು ಗ್ರಾಮೀಣ ಪ್ರದೇಶಕ್ಕೆ ಹಂಚಿಕೆ ಮಾಡಬೇಕು ಎಂದರು.<br /> <br /> ದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉತ್ಪಾದನೆ ದ್ವಿಗುಣಗೊಳಿಸುವ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡನೇ ಹಸಿರು ಕ್ರಾಂತಿಯ ಅಗತ್ಯವಿದೆ ಎಂದು ನಾಯರ್ ಪ್ರತಿಪಾದಿಸಿದರು.<br /> <br /> ಸಾಂಪ್ರದಾಯಿಕ ಇಂಧನ ಮೂಲಗಳು ಕೆಲವೇ ವರ್ಷಗಳಲ್ಲಿ ಬರಿದಾಗಲಿವೆ. ಇದಕ್ಕೆ ಪರ್ಯಾಯವಾದ ಅಣುಶಕ್ತಿ ಈಗ ದುಬಾರಿಯಾಗಿದೆ. ಇದನ್ನು ಕಡಿಮೆ ವೆಚ್ಚದಲ್ಲಿ ಉತ್ಪಾದಿಸುವ ಕೌಶಲ ಆವಿಷ್ಕಾರಗೊಳ್ಳಬೇಕು. ಅಲ್ಲದೇ, ಈ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಾದ ಸೌರಶಕ್ತಿ, ಗಾಳಿಯಂತ್ರ, ಜೈವಿಕ ಇಂಧನ ಬಳಕೆಗೆ ಜನ ಮುಂದಾಗಬೇಕು. ಇದರಲ್ಲೂ ಹೊಸ ಆವಿಷ್ಕಾರ, ಸಂಶೋಧನೆಗಳು ನಡೆದು ಜನರಿಗೆ ಈ ತಂತ್ರಜ್ಞಾನ ಸುಲಭವಾಗಿ ದೊರೆಯುವಂತಾಗಬೇಕು ಎಂದು ಸಲಹೆ ನೀಡಿದರು.<br /> <br /> ವಿಶ್ವದಲ್ಲಿ, ಭಾರತ ಆರ್ಥಿಕವಾಗಿ ಮೂರನೇ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳುತ್ತಿದೆ. ಈ ಹಂತದಲ್ಲಿ ದೇಶ ಕಟ್ಟುವ ದೊಡ್ಡ ಸವಾಲಿದೆ. ದೇಶವನ್ನು ನಡೆಸಿಕೊಂಡು ಹೋಗಲು, ದೇಶಕ್ಕೆ ನಾಯಕತ್ವ ನೀಡಲು ಉತ್ತಮ ಕೌಶಲವಿರುವ ಪ್ರತಿಭಾವಂತ ರಾಜಕಾರಣಿಗಳು ಇಂದು ದೇಶಕ್ಕೆ ಬೇಕಾಗಿದೆ ಎಂದು ಹೇಳಿದರು.<br /> <br /> `ಇಂದು ನಾನೇನು ಆಗಿದ್ದೇನೆ ಅದಕ್ಕೆ ನನ್ನ ಗುರು ಡಾ.ಕಲಾಂ ಕಾರಣ. ಅವರ ಜತೆ 20 ವರ್ಷ ಕೆಲಸ ಮಾಡಿದ್ದೇನೆ. ಅವರಿಂದ ಬಹಳಷ್ಟು ಕಲಿತಿದ್ದೇನೆ. ಅವರ ದೂರದೃಷ್ಟಿ, ಬದ್ಧತೆ, ಕಠಿಣ ಶ್ರಮ ಪ್ರಶ್ನಾತೀತ. ಯಾರಿಗಾದರೂ ಈ ಮೂರು ಗುಣಗಳಿದ್ದರೆ ಅವರು ಖಂಡಿತಾ ತಮ್ಮ ಗುರಿಗಳನ್ನು ಸಾಧಿಸುತ್ತಾರೆ~ ಎಂದರು.<br /> <br /> ಸಮಾರಂಭದಲ್ಲಿ ಡಾ.ಜಿ.ಮಾಧವನ್ ನಾಯರ್ ಹಾಗೂ ಅರಬಿಂದೋ ಪಿಯು ಕಾಲೇಜಿನ ಸಂಸ್ಥಾಪಕ ಪ್ರಾಂಶುಪಾಲ ಕೆ.ವಿ. ರಘುನಾಥ ಅವರನ್ನು ಸನ್ಮಾನಿಸಲಾಯಿತು.<br /> <br /> ಸಮಾರಂಭದಲ್ಲಿ ಸಂಸ್ಥೆ ಖಜಾಂಚಿ ಡಾ.ಕೆ.ಆರ್.ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಕಾರ್ಯದರ್ಶಿ ವಿ. ದೇವೇಂದ್ರ ಸ್ವಾಗತಿಸಿದರು. ಪ್ರಾಂಶುಪಾಲ ಕೆ. ನಾಗರಾಜ್ ಪ್ರಾಸ್ತಾವಿಕ ಮಾತನಾಡಿದರು. ಸಂಸ್ಥೆ ಉಪಾಧ್ಯಕ್ಷ ಟಿ. ಪ್ರಕಾಶ್ ಉಪಸ್ಥಿತರಿದ್ದರು. ಎಸ್. ಎಂ. ಜೋಸೆಫ್ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>