<p><strong>ಬೆಂಗಳೂರು:</strong> `ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನ ಮತ್ತು ಧರ್ಮವು ಅನೇಕ ಗೊಂದಲಮಯ ವಾತಾವರಣವನ್ನು ಸೃಷ್ಟಿಸಿದೆ~ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಹೇಳಿದರು.<br /> <br /> ಬುಧವಾರ ನಗರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮತ್ತು ತುಮಕೂರು ವಿಶ್ವವಿದ್ಯಾಲಯವು ಪರಿಷತ್ನ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ `ವಿಜ್ಞಾನದ ತತ್ವಶಾಸ್ತ್ರ~ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, `ಐನ್ಸ್ಟೈನ್ ತತ್ವಶಾಸ್ತ್ರ ಮತ್ತು ನ್ಯೂಟನ್ನ ವಿಜ್ಞಾನದ ಆವಿಷ್ಕಾರದ ಬಗ್ಗೆ ಆಧುನಿಕ ದಿನದಲ್ಲಿ ಹೆಚ್ಚು ಪ್ರಭಾವ ಬೀರಿದೆ~ ಎಂದು ಹೇಳಿದರು. <br /> <br /> `ಧರ್ಮದ ವಿಚಾರದಿಂದ ಹೋದಾಗ ವೈಜ್ಞಾನಿಕ ಸತ್ಯ ಕಂಡು ಬರುವುದಿಲ್ಲ. ಕಂಡು ಬಂದರೂ ಅದನ್ನು ತಿರಸ್ಕರಿಸಬಹುದು. ಆದರೆ ಅದರಲ್ಲಿ ಈಗ ಸೂರ್ಯ ಹುಟ್ಟಿರುವುದೇ ಮನುಷ್ಯನಿಗೆ ಬೆಳಕು ನೀಡಲು, ಔಷಧಿಗಳು, ಪ್ರಾಣಿಗಳು, ಹುಟ್ಟಿರುವುದೇ ಮನುಷ್ಯನಿಗೆ ಸಹಾಯಕವಾಗಲಿ~ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ತುಮಕೂರು ರಾಮಕೃಷ್ಣ ಮಿಷನ್ನಿನ ವೀರೇಶಾನಂದ ಸ್ವಾಮೀಜಿ, ತುಮಕೂರು ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್. ಸಿ.ಶರ್ಮ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಎಂ.ಕಾವೇರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನ ಮತ್ತು ಧರ್ಮವು ಅನೇಕ ಗೊಂದಲಮಯ ವಾತಾವರಣವನ್ನು ಸೃಷ್ಟಿಸಿದೆ~ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಹೇಳಿದರು.<br /> <br /> ಬುಧವಾರ ನಗರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮತ್ತು ತುಮಕೂರು ವಿಶ್ವವಿದ್ಯಾಲಯವು ಪರಿಷತ್ನ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ `ವಿಜ್ಞಾನದ ತತ್ವಶಾಸ್ತ್ರ~ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, `ಐನ್ಸ್ಟೈನ್ ತತ್ವಶಾಸ್ತ್ರ ಮತ್ತು ನ್ಯೂಟನ್ನ ವಿಜ್ಞಾನದ ಆವಿಷ್ಕಾರದ ಬಗ್ಗೆ ಆಧುನಿಕ ದಿನದಲ್ಲಿ ಹೆಚ್ಚು ಪ್ರಭಾವ ಬೀರಿದೆ~ ಎಂದು ಹೇಳಿದರು. <br /> <br /> `ಧರ್ಮದ ವಿಚಾರದಿಂದ ಹೋದಾಗ ವೈಜ್ಞಾನಿಕ ಸತ್ಯ ಕಂಡು ಬರುವುದಿಲ್ಲ. ಕಂಡು ಬಂದರೂ ಅದನ್ನು ತಿರಸ್ಕರಿಸಬಹುದು. ಆದರೆ ಅದರಲ್ಲಿ ಈಗ ಸೂರ್ಯ ಹುಟ್ಟಿರುವುದೇ ಮನುಷ್ಯನಿಗೆ ಬೆಳಕು ನೀಡಲು, ಔಷಧಿಗಳು, ಪ್ರಾಣಿಗಳು, ಹುಟ್ಟಿರುವುದೇ ಮನುಷ್ಯನಿಗೆ ಸಹಾಯಕವಾಗಲಿ~ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ತುಮಕೂರು ರಾಮಕೃಷ್ಣ ಮಿಷನ್ನಿನ ವೀರೇಶಾನಂದ ಸ್ವಾಮೀಜಿ, ತುಮಕೂರು ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್. ಸಿ.ಶರ್ಮ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಎಂ.ಕಾವೇರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>