<p><strong>ಬೆಂಗಳೂರು</strong>: ‘ಕೆಲವು ವರ್ಷಗಳಲ್ಲಿ ಖಗೋಳವಿಜ್ಞಾನ ಕ್ಷೇತ್ರದಲ್ಲಿ ಭಾರತ ಅದ್ಭುತ ಸಾಧನೆ ಮಾಡಿದ್ದು, ಕೆಲವೇ ವರ್ಷಗಳಲ್ಲಿ ದೇಶದಲ್ಲಿ ಸೋಲಾರ್ ಟೆಲಿಸ್ಕೋಪ್ ನಿರ್ಮಾಣವಾಗಲಿದೆ’ ಎಂದು ಖಗೋಳವಿಜ್ಞಾನಿ ಪ್ರೊ.ಎಸ್.ಸಿರಾಜ್ ಹಸನ್ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ವಿಶ್ವೇಶ್ವರಯ್ಯ ಕೈಗಾರಿಕಾ ಹಾಗೂ ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಶನಿವಾರ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.<br /> <br /> ‘ದೇಶದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಯಾಗುತ್ತಿದೆ. ಈ ವಿಷಯಗಳ ಬಗ್ಗೆ ಜನರಿಗೆ ಅರಿವಿಲ್ಲ. ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಹೆಚ್ಚಬೇಕು’ ಎಂದರು.<br /> <br /> ಭಾರತೀಯ ಜೀವವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಡಾ.ಸತ್ಯಜಿತ್ ಮೇಯರ್ ಮಾತನಾಡಿ, ‘ದೇಶದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಆಗುತ್ತಿದೆ. ಸಣ್ಣ ಸಣ್ಣ ಸಂಶೋಧನೆಗಳು ದೊಡ್ಡ ಸಂಶೋಧನೆಗಳಿಗೆ ನಾಂದಿಯಾಗುತ್ತವೆ’ ಎಂದರು.<br /> <br /> ಮೇಳದಲ್ಲಿ 300 ವಿಜ್ಞಾನ ಮಾದರಿಗಳು ಪ್ರದರ್ಶನಗೊಂಡಿದ್ದವು. ಆಯಾ ರಾಜ್ಯಗಳ ಅತ್ಯುತ್ತಮ ಮಾದರಿಗಳಿಗೆ ಬಹುಮಾನ ನೀಡಲಾಯಿತು. ಉತ್ತರ ಕನ್ನಡದ ಬೆಳ್ಕಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ರೂಪಿಸಿದ ‘ತ್ಯಾಜ್ಯ ನೀರು ಮರುಬಳಕೆ’ ಮಾದರಿ ‘ರಾಜ್ಯದ ಅತ್ಯುತ್ತಮ ಮಾದರಿ ’ ಪ್ರಶಸ್ತಿ ಗಳಿಸಿತು.<br /> <br /> ವೈಯಕ್ತಿಕ ವಿಭಾಗದಲ್ಲಿ ಕೋಲಾರದ ಚಿನ್ಮಯ ವಿದ್ಯಾಲಯದ ಶ್ರಾವಣಿ, ಶಿಕ್ಷಕರ ವಿಭಾಗದಲ್ಲಿ ಖಾನಾಪುರ ತಾಲ್ಲೂಕಿನ ರಾಜೇಂದ್ರ ಭಂಡಾರಿ ಬಹುಮಾನ ಗಳಿಸಿದರು. ಹುಬ್ಬಳ್ಳಿಯ ಚೇತನ್ ಪಬ್ಲಿಕ್ ಶಾಲೆಯ ಕಿಶನ್ ಜಿ. ಅವರಿಗೆ ‘ಸರ್.ಎಂ. ವಿಶ್ವೇಶ್ವರಯ್ಯ ಅತ್ಯುತ್ತಮ ಮಾದರಿ’ ಪ್ರಶಸ್ತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೆಲವು ವರ್ಷಗಳಲ್ಲಿ ಖಗೋಳವಿಜ್ಞಾನ ಕ್ಷೇತ್ರದಲ್ಲಿ ಭಾರತ ಅದ್ಭುತ ಸಾಧನೆ ಮಾಡಿದ್ದು, ಕೆಲವೇ ವರ್ಷಗಳಲ್ಲಿ ದೇಶದಲ್ಲಿ ಸೋಲಾರ್ ಟೆಲಿಸ್ಕೋಪ್ ನಿರ್ಮಾಣವಾಗಲಿದೆ’ ಎಂದು ಖಗೋಳವಿಜ್ಞಾನಿ ಪ್ರೊ.ಎಸ್.ಸಿರಾಜ್ ಹಸನ್ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ವಿಶ್ವೇಶ್ವರಯ್ಯ ಕೈಗಾರಿಕಾ ಹಾಗೂ ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಶನಿವಾರ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.<br /> <br /> ‘ದೇಶದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಯಾಗುತ್ತಿದೆ. ಈ ವಿಷಯಗಳ ಬಗ್ಗೆ ಜನರಿಗೆ ಅರಿವಿಲ್ಲ. ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಹೆಚ್ಚಬೇಕು’ ಎಂದರು.<br /> <br /> ಭಾರತೀಯ ಜೀವವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಡಾ.ಸತ್ಯಜಿತ್ ಮೇಯರ್ ಮಾತನಾಡಿ, ‘ದೇಶದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಆಗುತ್ತಿದೆ. ಸಣ್ಣ ಸಣ್ಣ ಸಂಶೋಧನೆಗಳು ದೊಡ್ಡ ಸಂಶೋಧನೆಗಳಿಗೆ ನಾಂದಿಯಾಗುತ್ತವೆ’ ಎಂದರು.<br /> <br /> ಮೇಳದಲ್ಲಿ 300 ವಿಜ್ಞಾನ ಮಾದರಿಗಳು ಪ್ರದರ್ಶನಗೊಂಡಿದ್ದವು. ಆಯಾ ರಾಜ್ಯಗಳ ಅತ್ಯುತ್ತಮ ಮಾದರಿಗಳಿಗೆ ಬಹುಮಾನ ನೀಡಲಾಯಿತು. ಉತ್ತರ ಕನ್ನಡದ ಬೆಳ್ಕಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ರೂಪಿಸಿದ ‘ತ್ಯಾಜ್ಯ ನೀರು ಮರುಬಳಕೆ’ ಮಾದರಿ ‘ರಾಜ್ಯದ ಅತ್ಯುತ್ತಮ ಮಾದರಿ ’ ಪ್ರಶಸ್ತಿ ಗಳಿಸಿತು.<br /> <br /> ವೈಯಕ್ತಿಕ ವಿಭಾಗದಲ್ಲಿ ಕೋಲಾರದ ಚಿನ್ಮಯ ವಿದ್ಯಾಲಯದ ಶ್ರಾವಣಿ, ಶಿಕ್ಷಕರ ವಿಭಾಗದಲ್ಲಿ ಖಾನಾಪುರ ತಾಲ್ಲೂಕಿನ ರಾಜೇಂದ್ರ ಭಂಡಾರಿ ಬಹುಮಾನ ಗಳಿಸಿದರು. ಹುಬ್ಬಳ್ಳಿಯ ಚೇತನ್ ಪಬ್ಲಿಕ್ ಶಾಲೆಯ ಕಿಶನ್ ಜಿ. ಅವರಿಗೆ ‘ಸರ್.ಎಂ. ವಿಶ್ವೇಶ್ವರಯ್ಯ ಅತ್ಯುತ್ತಮ ಮಾದರಿ’ ಪ್ರಶಸ್ತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>