<p>ಶೃಂಗೇರಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಮಹೇಶಪ್ಪ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪಟ್ಟಣದ ಭಾರತೀಚೌಕದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಿದರು.<br /> <br /> ನಂತರ ತಾಲ್ಲೂಕು ಕಚೇರಿಗೆ ತೆರಳಿದ ವಿದ್ಯಾರ್ಥಿಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ರಂಜಿತ್, ವಿಟಿಯು ಕುಲಪತಿ ಡಾ.ಮಹೇಶಪ್ಪ ಅವರು ಕುಲಾಧಿಪತಿಗಳೂ ಆದ ರಾಜ್ಯಪಾಲರಿಗೆ ತಪ್ಪು ಮಾಹಿತಿಕೊಟ್ಟು ಆಯ್ಕೆ ಆಗಿರುವ ಕುರಿತಂತೆ ರಾಜ್ಯ ಹೈಕೋರ್ಟ್ ಇತ್ತೀಚಿಗೆ ಆದೇಶ ಕೊಟ್ಟಿದೆ.<br /> <br /> ರಾಜ್ಯಪಾಲರ ಸಂವಿಧಾನದತ್ತ ಅಧಿಕಾರದಲ್ಲಿ ಮಧ್ಯಪ್ರವೇಶಿಸಲು ಇಚ್ಛಿಸಿದ ನ್ಯಾಯಾಲಯ ಡಾ. ಮಹೇಶಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ನಿರ್ದೇಶಿಸಿದೆ. ಆದ ಕಾರಣ ನೈತಿಕ ಹೊಣೆ ಹೊತ್ತು ಡಾ. ಮಹೇಶಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.<br /> <br /> ಕೆಲವೇ ದಿನಗಳಲ್ಲಿ ಅವಧಿ ಮುಗಿಯಲಿರುವ ಮಹೇಶಪ್ಪ ಅವರಿಗೆ ತನಿಖೆ ಹೆಸರಿನಲ್ಲಿ ಇನ್ನೂ ಸ್ವಲ್ಪ ಸಮಯಾವಕಾಶ ಕೊಡುವ ಹುನ್ನಾರ ನಡೆದಿದ್ದು, ರಾಜ್ಯಪಾಲರೂ ಸಹ ಅವರ ಕುರಿತು ಮೃದುಧೋರಣೆ ತಳೆಯುತ್ತಿರುವುದು ಖಂಡನೀಯ.<br /> <br /> ವಿಶ್ವವಿದ್ಯಾಲಯದ ಕುಲಪತಿಯಂತಹ ಸ್ಥಾನದಲ್ಲಿ ಡಾ.ಮಹೇಶಪ್ಪ ಅವರಂತಹ ಕಳಂಕಿತ ವ್ಯಕ್ತಿಗಳಿರುವುದು ವಿ.ವಿ.ಯ ಪಾವಿತ್ರ್ಯ ಹಾಳು ಮಾಡುತ್ತದೆ. ಆರೋಪ ಸಾಬೀತಾಗಿರುವಾಗಲೂ ಅವರು ಅಧಿಕಾರದಲ್ಲಿ ಮುಂದುವರೆಯುವುದು ನಾಚಿಕೆಗೇಡಿನ ಸಂಗತಿ. ಆದ ಕಾರಣ ರಾಜ್ಯಪಾಲರು ಈ ಕೂಡಲೆ ಮಹೇಶಪ್ಪ ಅವರನ್ನು ವಜಾಗೊಳಿಸಿ ರಾಜ್ಯದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿದರು. <br /> ಪ್ರತಿಭಟನೆಯಲ್ಲಿ ದಿವೀರ್ಮಲ್ನಾಡ್, ಪ್ರಸನ್ನ, ಶ್ರೇಯಸ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶೃಂಗೇರಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಮಹೇಶಪ್ಪ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪಟ್ಟಣದ ಭಾರತೀಚೌಕದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಿದರು.<br /> <br /> ನಂತರ ತಾಲ್ಲೂಕು ಕಚೇರಿಗೆ ತೆರಳಿದ ವಿದ್ಯಾರ್ಥಿಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ರಂಜಿತ್, ವಿಟಿಯು ಕುಲಪತಿ ಡಾ.ಮಹೇಶಪ್ಪ ಅವರು ಕುಲಾಧಿಪತಿಗಳೂ ಆದ ರಾಜ್ಯಪಾಲರಿಗೆ ತಪ್ಪು ಮಾಹಿತಿಕೊಟ್ಟು ಆಯ್ಕೆ ಆಗಿರುವ ಕುರಿತಂತೆ ರಾಜ್ಯ ಹೈಕೋರ್ಟ್ ಇತ್ತೀಚಿಗೆ ಆದೇಶ ಕೊಟ್ಟಿದೆ.<br /> <br /> ರಾಜ್ಯಪಾಲರ ಸಂವಿಧಾನದತ್ತ ಅಧಿಕಾರದಲ್ಲಿ ಮಧ್ಯಪ್ರವೇಶಿಸಲು ಇಚ್ಛಿಸಿದ ನ್ಯಾಯಾಲಯ ಡಾ. ಮಹೇಶಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ನಿರ್ದೇಶಿಸಿದೆ. ಆದ ಕಾರಣ ನೈತಿಕ ಹೊಣೆ ಹೊತ್ತು ಡಾ. ಮಹೇಶಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.<br /> <br /> ಕೆಲವೇ ದಿನಗಳಲ್ಲಿ ಅವಧಿ ಮುಗಿಯಲಿರುವ ಮಹೇಶಪ್ಪ ಅವರಿಗೆ ತನಿಖೆ ಹೆಸರಿನಲ್ಲಿ ಇನ್ನೂ ಸ್ವಲ್ಪ ಸಮಯಾವಕಾಶ ಕೊಡುವ ಹುನ್ನಾರ ನಡೆದಿದ್ದು, ರಾಜ್ಯಪಾಲರೂ ಸಹ ಅವರ ಕುರಿತು ಮೃದುಧೋರಣೆ ತಳೆಯುತ್ತಿರುವುದು ಖಂಡನೀಯ.<br /> <br /> ವಿಶ್ವವಿದ್ಯಾಲಯದ ಕುಲಪತಿಯಂತಹ ಸ್ಥಾನದಲ್ಲಿ ಡಾ.ಮಹೇಶಪ್ಪ ಅವರಂತಹ ಕಳಂಕಿತ ವ್ಯಕ್ತಿಗಳಿರುವುದು ವಿ.ವಿ.ಯ ಪಾವಿತ್ರ್ಯ ಹಾಳು ಮಾಡುತ್ತದೆ. ಆರೋಪ ಸಾಬೀತಾಗಿರುವಾಗಲೂ ಅವರು ಅಧಿಕಾರದಲ್ಲಿ ಮುಂದುವರೆಯುವುದು ನಾಚಿಕೆಗೇಡಿನ ಸಂಗತಿ. ಆದ ಕಾರಣ ರಾಜ್ಯಪಾಲರು ಈ ಕೂಡಲೆ ಮಹೇಶಪ್ಪ ಅವರನ್ನು ವಜಾಗೊಳಿಸಿ ರಾಜ್ಯದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿದರು. <br /> ಪ್ರತಿಭಟನೆಯಲ್ಲಿ ದಿವೀರ್ಮಲ್ನಾಡ್, ಪ್ರಸನ್ನ, ಶ್ರೇಯಸ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>