<p><strong>ವಿಟ್ಲ:</strong> ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಶನ್ ವತಿಯಿಂದ ಮರಕ್ಕಿಣಿ, ಅಡ್ಯನಡ್ಕ, ಅಡ್ಕಸ್ಥಳ ಮದರಸ ವ್ಯಾಪ್ತಿಯ 1ರಿಂದ ಪಿಯುಸಿವರೆಗಿನ 153 ಬಡ ವಿದ್ಯಾರ್ಥಿಗಳಿಗೆ ರೂ 50 ಸಾವಿರ ಮೌಲ್ಯದ ಪುಸ್ತಕಗಳನ್ನು ಇತ್ತೀಚೆಗೆ ವಿತರಿಸಲಾಯಿತು.<br /> <br /> ಅಬುಧಾಬಿಯಯಲ್ಲಿರುವ ಮಾದುಮೂಲೆ ಅಬ್ದುಲ್ಲಾ ಅವರು ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸುಮಾರು 40 ಸಾವಿರ ರೂಪಾಯಿ ಹಣವನ್ನು ನೀಡಿದರು. ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 92 ಶೇಕಡಾ ಅಂಕ ಗಳಿಸಿದ ಮಹಮ್ಮದ್ ಶಾಖಿರ್ ಅವರನ್ನು ಸನ್ಮಾನಿಸಲಾಯಿತು.<br /> <br /> ಅಡ್ಯನಡ್ಕ ಮುದರಿಸ್ ತಾಜುದ್ಧೀನ್ ರೆಹಮಾನಿ ಕಾರ್ಯಕ್ರಮ ಉದ್ಘಾಟಿಸಿದರು. ಶೈಕ್ಷಣಿಕ ಮಾರ್ಗದರ್ಶಿ ಕಾರ್ಯಾಗಾರವನ್ನು ಮಂಗಳೂರು ಟ್ಯಾಲೆಂಟ್ ರಿಸರ್ಚ್ ಪೌಂಡೇಶನ್ನ ಸಲಹೆಗಾರ ಮಹಮ್ಮದ್ ರಫೀಕ್ ಮಾಸ್ಟರ್ ನಡೆಸಿಕೊಟ್ಟರು. ಈ ಸಂದರ್ಭ ಎಡ್ವೆನ್ಸ್ ಟ್ಯಾಲೆಂಟ್ ರಿಸರ್ಚ್ ಪೌಂಡೇಶನ್ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಕಣ್ಣೂರು, ಪುತ್ತೂರು ಸೇಂಟ್ ಫಿಲೋಮಿನಾ ಕಾಲೇಜಿನ ಪ್ರೊಫೆಸರ್ ಜುಬೈರ್ ಮಾಸ್ಟರ್, ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಶರೀಫ್ ಮೂಸಾ ಕುದ್ದುಪದವು ಇದ್ದರು.<br /> <br /> ಶಾಖಿರ್ ಕಿರಾಹತ್ ಪಠಿಸಿದರು. ಹನೀಫ್ ಹನೀಫಿ ಮರಕ್ಕಿಣಿ ದುಹಾ ಮಾಡಿದರು. ಅಬ್ದುಲ್ ಕರೀಂ ಕುದ್ದುಪದವು ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ:</strong> ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಶನ್ ವತಿಯಿಂದ ಮರಕ್ಕಿಣಿ, ಅಡ್ಯನಡ್ಕ, ಅಡ್ಕಸ್ಥಳ ಮದರಸ ವ್ಯಾಪ್ತಿಯ 1ರಿಂದ ಪಿಯುಸಿವರೆಗಿನ 153 ಬಡ ವಿದ್ಯಾರ್ಥಿಗಳಿಗೆ ರೂ 50 ಸಾವಿರ ಮೌಲ್ಯದ ಪುಸ್ತಕಗಳನ್ನು ಇತ್ತೀಚೆಗೆ ವಿತರಿಸಲಾಯಿತು.<br /> <br /> ಅಬುಧಾಬಿಯಯಲ್ಲಿರುವ ಮಾದುಮೂಲೆ ಅಬ್ದುಲ್ಲಾ ಅವರು ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸುಮಾರು 40 ಸಾವಿರ ರೂಪಾಯಿ ಹಣವನ್ನು ನೀಡಿದರು. ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 92 ಶೇಕಡಾ ಅಂಕ ಗಳಿಸಿದ ಮಹಮ್ಮದ್ ಶಾಖಿರ್ ಅವರನ್ನು ಸನ್ಮಾನಿಸಲಾಯಿತು.<br /> <br /> ಅಡ್ಯನಡ್ಕ ಮುದರಿಸ್ ತಾಜುದ್ಧೀನ್ ರೆಹಮಾನಿ ಕಾರ್ಯಕ್ರಮ ಉದ್ಘಾಟಿಸಿದರು. ಶೈಕ್ಷಣಿಕ ಮಾರ್ಗದರ್ಶಿ ಕಾರ್ಯಾಗಾರವನ್ನು ಮಂಗಳೂರು ಟ್ಯಾಲೆಂಟ್ ರಿಸರ್ಚ್ ಪೌಂಡೇಶನ್ನ ಸಲಹೆಗಾರ ಮಹಮ್ಮದ್ ರಫೀಕ್ ಮಾಸ್ಟರ್ ನಡೆಸಿಕೊಟ್ಟರು. ಈ ಸಂದರ್ಭ ಎಡ್ವೆನ್ಸ್ ಟ್ಯಾಲೆಂಟ್ ರಿಸರ್ಚ್ ಪೌಂಡೇಶನ್ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಕಣ್ಣೂರು, ಪುತ್ತೂರು ಸೇಂಟ್ ಫಿಲೋಮಿನಾ ಕಾಲೇಜಿನ ಪ್ರೊಫೆಸರ್ ಜುಬೈರ್ ಮಾಸ್ಟರ್, ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಶರೀಫ್ ಮೂಸಾ ಕುದ್ದುಪದವು ಇದ್ದರು.<br /> <br /> ಶಾಖಿರ್ ಕಿರಾಹತ್ ಪಠಿಸಿದರು. ಹನೀಫ್ ಹನೀಫಿ ಮರಕ್ಕಿಣಿ ದುಹಾ ಮಾಡಿದರು. ಅಬ್ದುಲ್ ಕರೀಂ ಕುದ್ದುಪದವು ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>