<p><strong>ವಿಟ್ಲ: </strong>ಇಲ್ಲಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ನೂತನ ಕಟ್ಟಡ ನಿರ್ಮಾಣಕ್ಕೆ ಒತ್ತಾಯಿಸಿ ಎಬಿವಿಪಿ ವಿಟ್ಲ ತಾಲ್ಲೂಕು ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.<br /> <br /> ಎಬಿವಿಪಿ ಜಿಲ್ಲಾ ಸಂಚಾಲಕ ನವೀನ್ ರಾಜ್ ಬೆದ್ರೋಡಿ ಮಾತನಾಡಿ ವಿಟ್ಲದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ 4 ಎಕರೆ ನಿವೇಶನ ಮಂಜೂರಾಗಿದ್ದು, ನೂತನ ಐ.ಟಿ.ಐ ಕಟ್ಟಡಕ್ಕೆ ಐಆರ್ಡಿಪಿ ನಬಾರ್ಡ್ ಯೋಜನೆಯಡಿ ಮೂರು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಆದರೆ ಇದು ಗ್ರಾಮೀಣ ಪ್ರದೇಶಕ್ಕೆ ಸೀಮಿತವಾಗಿದ್ದರಿಂದ ಅದು ಉಡುಪಿ, ಮತ್ತು ಮಂಗಳೂರಿಗೆ ವರ್ಗಾವಣೆವಾಗಿದೆ. ಹೀಗಾಗಿ ಇಲ್ಲಿಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.<br /> <br /> ಬಳಿಕ ಪ್ರತಿಭಟನಾಕಾರರು ವಿಟ್ಲದ ನಾಡಕಚೇರಿಗೆ ತೆರಳಿ ಉಪ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.<br /> <br /> ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವಿ ಮಾಣಿಲ, ನಗರ ಕಾರ್ಯದರ್ಶಿ ಯತೀಶ್ ಎಚ್., ವಿನಯ ಆಲಂಗಾರು, ಕಾಲೇಜು ಪ್ರಮುಖ್ ರಾಜೇಶ್ ಆಚಾರ್ಯ, ಕಾರ್ಯದರ್ಶಿ ಕಿರಣ್ರಾಜ್ ಎಂ..ಸಿ, ನಾಗೇಶ್, ದಿವ್ಯ, ಪುಷ್ಪ ದೀಪಿಕಾ, ಗುಲಾಬಿ, ಅಶೋಕ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ: </strong>ಇಲ್ಲಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ನೂತನ ಕಟ್ಟಡ ನಿರ್ಮಾಣಕ್ಕೆ ಒತ್ತಾಯಿಸಿ ಎಬಿವಿಪಿ ವಿಟ್ಲ ತಾಲ್ಲೂಕು ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.<br /> <br /> ಎಬಿವಿಪಿ ಜಿಲ್ಲಾ ಸಂಚಾಲಕ ನವೀನ್ ರಾಜ್ ಬೆದ್ರೋಡಿ ಮಾತನಾಡಿ ವಿಟ್ಲದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ 4 ಎಕರೆ ನಿವೇಶನ ಮಂಜೂರಾಗಿದ್ದು, ನೂತನ ಐ.ಟಿ.ಐ ಕಟ್ಟಡಕ್ಕೆ ಐಆರ್ಡಿಪಿ ನಬಾರ್ಡ್ ಯೋಜನೆಯಡಿ ಮೂರು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಆದರೆ ಇದು ಗ್ರಾಮೀಣ ಪ್ರದೇಶಕ್ಕೆ ಸೀಮಿತವಾಗಿದ್ದರಿಂದ ಅದು ಉಡುಪಿ, ಮತ್ತು ಮಂಗಳೂರಿಗೆ ವರ್ಗಾವಣೆವಾಗಿದೆ. ಹೀಗಾಗಿ ಇಲ್ಲಿಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.<br /> <br /> ಬಳಿಕ ಪ್ರತಿಭಟನಾಕಾರರು ವಿಟ್ಲದ ನಾಡಕಚೇರಿಗೆ ತೆರಳಿ ಉಪ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.<br /> <br /> ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವಿ ಮಾಣಿಲ, ನಗರ ಕಾರ್ಯದರ್ಶಿ ಯತೀಶ್ ಎಚ್., ವಿನಯ ಆಲಂಗಾರು, ಕಾಲೇಜು ಪ್ರಮುಖ್ ರಾಜೇಶ್ ಆಚಾರ್ಯ, ಕಾರ್ಯದರ್ಶಿ ಕಿರಣ್ರಾಜ್ ಎಂ..ಸಿ, ನಾಗೇಶ್, ದಿವ್ಯ, ಪುಷ್ಪ ದೀಪಿಕಾ, ಗುಲಾಬಿ, ಅಶೋಕ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>