<p>ನವದೆಹಲಿ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯನ್ನು ಒಟ್ಟು ಆಂತರಿಕ ಉತ್ಪನ್ನದ ಶೇ 4.6ಕ್ಕೆ ಮಿತಗೊಳಿಸುವ ಗುರಿ ತಲುಪುವಲ್ಲಿ ಸರ್ಕಾರ ವಿಫಲಗೊಳ್ಳುವ ಸಾಧ್ಯತೆಗಳಿವೆ ಎಂದು ಪ್ರಧಾನಿ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಸಿ. ರಂಗರಾಜನ್ ಅಭಿಪ್ರಾಯಪಟ್ಟಿದ್ದಾರೆ.<br /> <br /> ಆರ್ಥಿಕ ವೃದ್ಧಿ ದರವು ಸಾಧಾರಣ ಮಟ್ಟದಲ್ಲಿ ಇರುವುದರಿಂದ ವಿತ್ತೀಯ ಕೊರತೆಯನ್ನು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ 4.6ಕ್ಕೆ ಮಿತಿಗೊಳಿಸಲು ಸಾಧ್ಯವಾಗಲಾರದು ಎಂದರು. ಭಾರತದ ಆರ್ಥಿಕ ಸೇವೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.<br /> <br /> ಕೃಷಿ ವಲಯದ ವೃದ್ಧಿ ದರವು ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೂ, ಈ ವರ್ಷ ಅನೇಕ ಪ್ರತಿಕೂಲ ಕಾರಣಗಳಿಗೆ `ಜಿಡಿಪಿ~ ದರ ಶೇ 8ರ ಮಟ್ಟದಲ್ಲಿಯೇ ಇರಲಿದೆ. ಅಲ್ಪಾವಧಿಯಲ್ಲಿನ ಹಣದುಬ್ಬರ, ಹಣ ಪಾವತಿ ಸಮತೋಲನ ಮತ್ತು ವರಮಾನ ವೃದ್ಧಿ ಸವಾಲುಗಳು ಉದ್ದೇಶಿತ ಆರ್ಥಿಕ ಬೆಳವಣಿಗೆ ಸಾಧಿಸಲು ಅಡ್ಡಿಯಾಗಿವೆ ಎಂದು ವಿಶ್ಲೇಷಿಸಿದರು.<br /> <br /> ಹಣದುಬ್ಬರಕ್ಕೆ ಸರಕುಗಳ ಪೂರೈಕೆ ಸಮಸ್ಯೆ ಅಡಚಣೆಯಾಗಿದ್ದರೂ, ಇಲ್ಲಿ ಹಣಕಾಸು ಕ್ರಮಗಳೂ ಮಹತ್ವದ ಪಾತ್ರ ನಿರ್ವಹಿಸಲಿವೆ. ಹೀಗಾಗಿ ಬೆಲೆ ಏರಿಕೆ ಸಮಸ್ಯೆಗೆ ಕಡಿವಾಣ ವಿಧಿಸಲು ಹಣಕಾಸು ನೀತಿಯು ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ರಂಗರಾಜನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯನ್ನು ಒಟ್ಟು ಆಂತರಿಕ ಉತ್ಪನ್ನದ ಶೇ 4.6ಕ್ಕೆ ಮಿತಗೊಳಿಸುವ ಗುರಿ ತಲುಪುವಲ್ಲಿ ಸರ್ಕಾರ ವಿಫಲಗೊಳ್ಳುವ ಸಾಧ್ಯತೆಗಳಿವೆ ಎಂದು ಪ್ರಧಾನಿ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಸಿ. ರಂಗರಾಜನ್ ಅಭಿಪ್ರಾಯಪಟ್ಟಿದ್ದಾರೆ.<br /> <br /> ಆರ್ಥಿಕ ವೃದ್ಧಿ ದರವು ಸಾಧಾರಣ ಮಟ್ಟದಲ್ಲಿ ಇರುವುದರಿಂದ ವಿತ್ತೀಯ ಕೊರತೆಯನ್ನು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ 4.6ಕ್ಕೆ ಮಿತಿಗೊಳಿಸಲು ಸಾಧ್ಯವಾಗಲಾರದು ಎಂದರು. ಭಾರತದ ಆರ್ಥಿಕ ಸೇವೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.<br /> <br /> ಕೃಷಿ ವಲಯದ ವೃದ್ಧಿ ದರವು ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೂ, ಈ ವರ್ಷ ಅನೇಕ ಪ್ರತಿಕೂಲ ಕಾರಣಗಳಿಗೆ `ಜಿಡಿಪಿ~ ದರ ಶೇ 8ರ ಮಟ್ಟದಲ್ಲಿಯೇ ಇರಲಿದೆ. ಅಲ್ಪಾವಧಿಯಲ್ಲಿನ ಹಣದುಬ್ಬರ, ಹಣ ಪಾವತಿ ಸಮತೋಲನ ಮತ್ತು ವರಮಾನ ವೃದ್ಧಿ ಸವಾಲುಗಳು ಉದ್ದೇಶಿತ ಆರ್ಥಿಕ ಬೆಳವಣಿಗೆ ಸಾಧಿಸಲು ಅಡ್ಡಿಯಾಗಿವೆ ಎಂದು ವಿಶ್ಲೇಷಿಸಿದರು.<br /> <br /> ಹಣದುಬ್ಬರಕ್ಕೆ ಸರಕುಗಳ ಪೂರೈಕೆ ಸಮಸ್ಯೆ ಅಡಚಣೆಯಾಗಿದ್ದರೂ, ಇಲ್ಲಿ ಹಣಕಾಸು ಕ್ರಮಗಳೂ ಮಹತ್ವದ ಪಾತ್ರ ನಿರ್ವಹಿಸಲಿವೆ. ಹೀಗಾಗಿ ಬೆಲೆ ಏರಿಕೆ ಸಮಸ್ಯೆಗೆ ಕಡಿವಾಣ ವಿಧಿಸಲು ಹಣಕಾಸು ನೀತಿಯು ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ರಂಗರಾಜನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>