<p><strong>ನವದೆಹಲಿ:</strong> ದೆಹಲಿ ಹೈಕೋರ್ಟ್ ಆವರಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಖಚಿತ ಮಾಹಿತಿಯನ್ನು ಪಡೆಯಲು ತನಿಖಾ ಸಂಸ್ಥೆಗಳು ವಿಫಲವಾಗಿರುವ ಹಿನ್ನೆಲೆಯಲ್ಲಿ ವಿದೇಶಿ ಗುಪ್ತಚರ ಸಂಸ್ಥೆಗಳ ನೆರವು ಪಡೆಯಲಾಗುತ್ತಿದೆ.<br /> <br /> ಸೆ.7ರಂದು ನಡೆದ ಸ್ಫೋಟದಲ್ಲಿ 13 ಜನ ಮೃತಪಟ್ಟಿದ್ದರು. ಘಟನೆ ಕುರಿತು ಆಗ್ನೇಯ ಏಷ್ಯಾದ ವಿದೇಶಿ ಗುಪ್ತಚರ ಸಂಸ್ಥೆಗಳ ನೆರವು ಕೇಳಲಾಗಿದೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇದ್ದರೂ ವಿನಿಮಯ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.<br /> <br /> ಆರೋಪಿಗಳನ್ನು ಪತ್ತೆ ಹಚ್ಚುವ ಸಲುವಾಗಿ ವಿದೇಶಿ ಗುಪ್ತಚರ ಸಂಸ್ಥೆಗಳನ್ನು ಸಂಪರ್ಕಿಸಲಾಗಿದೆ. ತನ್ಮೂಲಕ ಸ್ಫೋಟದ ಸಂಚಿನ ರೂವಾರಿಗಳನ್ನು ಪತ್ತೆ ಮಾಡಲಾಗುವುದು ಎಂದು ಶುಕ್ರವಾರ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಹೇಳಿದ್ದರು.<br /> <br /> ಈಗ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಿನದ 24 ಗಂಟೆ ಕಾಲ ಕಾರ್ಯನಿರ್ವಹಿಸುತ್ತಿದ್ದು, ಸೂಕ್ತ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಕಾರ್ಯಮಗ್ನವಾಗಿದೆ. <br /> <br /> ಅದರ ಜತೆಗೆ ವಿಶ್ವದ ಇತರೇ ದೇಶಗಳ ಗುಪ್ತಚರ ಇಲಾಖೆಯ ನೆರವನ್ನೂ ಕೇಳಲಾಗಿದೆ. ವಿದೇಶಿ ಸಂಸ್ಥೆಗಳು ನೀಡುವ ಯಾವುದೇ ಮಾಹಿತಿಯನ್ನೂ ಗಂಭೀರವಾಗಿ ಪರಿಶೀಲಿಸಲಾಗುವುದು ಎಂದರು.<br /> ಇದುವರೆಗೆ ತನಿಖೆ ಸರಿ ದಿಕ್ಕಿನಲ್ಲಿಯೇ ನಡೆದಿದೆ. ಆದರೆ ಸಿಕ್ಕಿರುವ ಮಾಹಿತಿಯೇ ಅಂತಿಮ ಎಂದು ಪರಿಗಣಿಸುವಂತಿಲ್ಲ ಎಂದು ಸಚಿವರು ಹೇಳಿದ್ದರು.<br /> <br /> ದೇಶದ ಒಳಗಿನ ಶಕ್ತಿಗಳು ಗಡಿಯಾಚೆಗಿನ ನೆರವು ಪಡೆದು ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿವೆಯೇ ಎನ್ನುವ ಕುರಿತು ತನಿಖಾ ಸಂಸ್ಥೆಗಳು ವಿದೇಶಿ ಗುಪ್ತಚರ ಸಂಸ್ಥೆಗಳು, ಪ್ರಮುಖವಾಗಿ ಅಮೆರಿಕದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.<br /> <br /> ಸ್ಫೋಟಕ್ಕೆ ಸಂಬಂಧಿಸಿದಂತೆ ಇ-ಮೇಲ್ ಕಳುಹಿಸಿ ಹೊಣೆ ಹೊತ್ತುಕೊಂಡ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿಚಾರಣೆ ಮುಂದುವರೆದಿದೆ.<br /> <br /> ನಾಲ್ಕು ಇ-ಮೇಲ್ಗಳು: ಘಟನೆ ನಡೆದ ನಂತರ ಇದುವರೆಗೆ ನಾಲ್ಕು ಇ-ಮೇಲ್ಗಳು ಸ್ಫೋಟಕ್ಕೆ ಹೊಣೆ ಹೊತ್ತುಕೊಂಡಿವೆ. ಈ ಎಲ್ಲಾ ಇ-ಮೇಲ್ಗಳ ಮೂಲಗಳನ್ನು ತನಿಖಾ ಸಂಸ್ಥೆಗಳು ಪತ್ತೆ ಹಚ್ಚಿವೆ.<br /> <br /> ಹುಜಿ ಭಯೋತ್ಪಾದನಾ ಸಂಸ್ಥೆ ಮೊದಲ ಇ-ಮೇಲ್ ಸಂದೇಶ ಕಳುಹಿಸಿ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು. ಎರಡು ಮತ್ತು ನಾಲ್ಕನೇ ಇ-ಮೇಲ್ಗಳನ್ನು ಇಂಡಿಯನ್ ಮುಜಾಹಿದ್ದೀನ್ (ಐಎಂ) ಸಂಘಟನೆಯವರು ಕಳುಹಿಸಿ ಹೊಣೆ ಹೊತ್ತುಕೊಂಡಿದ್ದರು.<br /> <br /> ಮೂರನೇ ಇ-ಮೇಲ್ ದೆಹಲಿ ಪೊಲೀಸರಿಗೆ ಬಂದಿದ್ದು, ಅಹಮದಾಬಾದ್ನಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಒಡ್ಡಲಾಗಿದೆ. ನಂತರ ಗುಜರಾತ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇ-ಮೇಲ್ ಕಳುಹಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀದಲ್ಲಿ ಇದುವರೆಗೆ ಏಳು ಜನರನ್ನು ವಶಕ್ಕೆ ಪಡೆದು ಪ್ರಶ್ನಿಸಲಾಗಿದೆ ಎಂದೂ ಮೂಲಗಳು ತಿಳಿಸಿವೆ.<br /> <br /> ಸೈಬರ್ ಕೆಫೆಯ ಇಬ್ಬರು ಮಾಲೀಕರು ಸೇರಿದಂತೆ ಮೂವರನ್ನು ಗುರುವಾರ ವಿಚಾರಣೆಗೆ ಒಳಪಡಿಸಲಾಗಿದೆ. ನಂತರ ಇನ್ನೂ ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ ಇಬ್ಬರು ಶರಣಾಗಿರುವ ಉಗ್ರರಾಗಿದ್ದಾರೆ.<br /> <br /> ವಿಚಾರಣೆಯನ್ನು ತೀವ್ರಗೊಳಿಸಿರುವ ಎನ್ಐಎ, ದಾಳಿಗೆ ಯಾವ ಭಯೋತ್ಪಾದಕ ಸಂಘಟನೆ ಕಾರಣ ಎನ್ನುವ ಕುರಿತು ಮಾಹಿತಿ ಕಲೆ ಹಾಕಲು ಇಪ್ಪತ್ತು ಜನರ ತಂಡವೊಂದನ್ನು ರಚಿಸಿದೆ.<br /> <br /> ಸಿಸಿಟಿವಿ ದಾಖಲೆ ನೀಡುವಂತೆ ದೆಹಲಿಯ 700 ಹೋಟೆಲ್ಗಳನ್ನು ಕೇಳಲಾಗಿದ್ದು, ಇದರಿಂದ ಮಹತ್ವದ ಮಾಹಿತಿ ಲಭ್ಯವಾಗುವ ಸಾಧ್ಯತೆಗಳು ಇವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಹೈಕೋರ್ಟ್ ಆವರಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಖಚಿತ ಮಾಹಿತಿಯನ್ನು ಪಡೆಯಲು ತನಿಖಾ ಸಂಸ್ಥೆಗಳು ವಿಫಲವಾಗಿರುವ ಹಿನ್ನೆಲೆಯಲ್ಲಿ ವಿದೇಶಿ ಗುಪ್ತಚರ ಸಂಸ್ಥೆಗಳ ನೆರವು ಪಡೆಯಲಾಗುತ್ತಿದೆ.<br /> <br /> ಸೆ.7ರಂದು ನಡೆದ ಸ್ಫೋಟದಲ್ಲಿ 13 ಜನ ಮೃತಪಟ್ಟಿದ್ದರು. ಘಟನೆ ಕುರಿತು ಆಗ್ನೇಯ ಏಷ್ಯಾದ ವಿದೇಶಿ ಗುಪ್ತಚರ ಸಂಸ್ಥೆಗಳ ನೆರವು ಕೇಳಲಾಗಿದೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇದ್ದರೂ ವಿನಿಮಯ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.<br /> <br /> ಆರೋಪಿಗಳನ್ನು ಪತ್ತೆ ಹಚ್ಚುವ ಸಲುವಾಗಿ ವಿದೇಶಿ ಗುಪ್ತಚರ ಸಂಸ್ಥೆಗಳನ್ನು ಸಂಪರ್ಕಿಸಲಾಗಿದೆ. ತನ್ಮೂಲಕ ಸ್ಫೋಟದ ಸಂಚಿನ ರೂವಾರಿಗಳನ್ನು ಪತ್ತೆ ಮಾಡಲಾಗುವುದು ಎಂದು ಶುಕ್ರವಾರ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಹೇಳಿದ್ದರು.<br /> <br /> ಈಗ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಿನದ 24 ಗಂಟೆ ಕಾಲ ಕಾರ್ಯನಿರ್ವಹಿಸುತ್ತಿದ್ದು, ಸೂಕ್ತ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಕಾರ್ಯಮಗ್ನವಾಗಿದೆ. <br /> <br /> ಅದರ ಜತೆಗೆ ವಿಶ್ವದ ಇತರೇ ದೇಶಗಳ ಗುಪ್ತಚರ ಇಲಾಖೆಯ ನೆರವನ್ನೂ ಕೇಳಲಾಗಿದೆ. ವಿದೇಶಿ ಸಂಸ್ಥೆಗಳು ನೀಡುವ ಯಾವುದೇ ಮಾಹಿತಿಯನ್ನೂ ಗಂಭೀರವಾಗಿ ಪರಿಶೀಲಿಸಲಾಗುವುದು ಎಂದರು.<br /> ಇದುವರೆಗೆ ತನಿಖೆ ಸರಿ ದಿಕ್ಕಿನಲ್ಲಿಯೇ ನಡೆದಿದೆ. ಆದರೆ ಸಿಕ್ಕಿರುವ ಮಾಹಿತಿಯೇ ಅಂತಿಮ ಎಂದು ಪರಿಗಣಿಸುವಂತಿಲ್ಲ ಎಂದು ಸಚಿವರು ಹೇಳಿದ್ದರು.<br /> <br /> ದೇಶದ ಒಳಗಿನ ಶಕ್ತಿಗಳು ಗಡಿಯಾಚೆಗಿನ ನೆರವು ಪಡೆದು ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿವೆಯೇ ಎನ್ನುವ ಕುರಿತು ತನಿಖಾ ಸಂಸ್ಥೆಗಳು ವಿದೇಶಿ ಗುಪ್ತಚರ ಸಂಸ್ಥೆಗಳು, ಪ್ರಮುಖವಾಗಿ ಅಮೆರಿಕದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.<br /> <br /> ಸ್ಫೋಟಕ್ಕೆ ಸಂಬಂಧಿಸಿದಂತೆ ಇ-ಮೇಲ್ ಕಳುಹಿಸಿ ಹೊಣೆ ಹೊತ್ತುಕೊಂಡ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿಚಾರಣೆ ಮುಂದುವರೆದಿದೆ.<br /> <br /> ನಾಲ್ಕು ಇ-ಮೇಲ್ಗಳು: ಘಟನೆ ನಡೆದ ನಂತರ ಇದುವರೆಗೆ ನಾಲ್ಕು ಇ-ಮೇಲ್ಗಳು ಸ್ಫೋಟಕ್ಕೆ ಹೊಣೆ ಹೊತ್ತುಕೊಂಡಿವೆ. ಈ ಎಲ್ಲಾ ಇ-ಮೇಲ್ಗಳ ಮೂಲಗಳನ್ನು ತನಿಖಾ ಸಂಸ್ಥೆಗಳು ಪತ್ತೆ ಹಚ್ಚಿವೆ.<br /> <br /> ಹುಜಿ ಭಯೋತ್ಪಾದನಾ ಸಂಸ್ಥೆ ಮೊದಲ ಇ-ಮೇಲ್ ಸಂದೇಶ ಕಳುಹಿಸಿ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು. ಎರಡು ಮತ್ತು ನಾಲ್ಕನೇ ಇ-ಮೇಲ್ಗಳನ್ನು ಇಂಡಿಯನ್ ಮುಜಾಹಿದ್ದೀನ್ (ಐಎಂ) ಸಂಘಟನೆಯವರು ಕಳುಹಿಸಿ ಹೊಣೆ ಹೊತ್ತುಕೊಂಡಿದ್ದರು.<br /> <br /> ಮೂರನೇ ಇ-ಮೇಲ್ ದೆಹಲಿ ಪೊಲೀಸರಿಗೆ ಬಂದಿದ್ದು, ಅಹಮದಾಬಾದ್ನಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಒಡ್ಡಲಾಗಿದೆ. ನಂತರ ಗುಜರಾತ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇ-ಮೇಲ್ ಕಳುಹಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀದಲ್ಲಿ ಇದುವರೆಗೆ ಏಳು ಜನರನ್ನು ವಶಕ್ಕೆ ಪಡೆದು ಪ್ರಶ್ನಿಸಲಾಗಿದೆ ಎಂದೂ ಮೂಲಗಳು ತಿಳಿಸಿವೆ.<br /> <br /> ಸೈಬರ್ ಕೆಫೆಯ ಇಬ್ಬರು ಮಾಲೀಕರು ಸೇರಿದಂತೆ ಮೂವರನ್ನು ಗುರುವಾರ ವಿಚಾರಣೆಗೆ ಒಳಪಡಿಸಲಾಗಿದೆ. ನಂತರ ಇನ್ನೂ ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ ಇಬ್ಬರು ಶರಣಾಗಿರುವ ಉಗ್ರರಾಗಿದ್ದಾರೆ.<br /> <br /> ವಿಚಾರಣೆಯನ್ನು ತೀವ್ರಗೊಳಿಸಿರುವ ಎನ್ಐಎ, ದಾಳಿಗೆ ಯಾವ ಭಯೋತ್ಪಾದಕ ಸಂಘಟನೆ ಕಾರಣ ಎನ್ನುವ ಕುರಿತು ಮಾಹಿತಿ ಕಲೆ ಹಾಕಲು ಇಪ್ಪತ್ತು ಜನರ ತಂಡವೊಂದನ್ನು ರಚಿಸಿದೆ.<br /> <br /> ಸಿಸಿಟಿವಿ ದಾಖಲೆ ನೀಡುವಂತೆ ದೆಹಲಿಯ 700 ಹೋಟೆಲ್ಗಳನ್ನು ಕೇಳಲಾಗಿದ್ದು, ಇದರಿಂದ ಮಹತ್ವದ ಮಾಹಿತಿ ಲಭ್ಯವಾಗುವ ಸಾಧ್ಯತೆಗಳು ಇವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>