<p><strong>ನವದೆಹಲಿ (ಪಿಟಿಐ):</strong> ವಿದೇಶಿ ಹಣದ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, 30 ಸರ್ಕಾರೇತರ ಸಂಸ್ಥೆಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. <br /> <br /> ಇನ್ನೂ 70 ಸೇವಾ ಸಂಸ್ಥೆಗಳು ವಿದೇಶಗಳಿಂದ ದೇಣಿಗೆ ಸ್ವೀಕರಿಸದಂತೆ ನಿರ್ಬಂಧಿಸಿದೆ. 35 ಸೇವಾ ಸಂಸ್ಥೆಗಳಿಗೆ ಅನುದಾನ ಸ್ವೀಕರಿಸುವ ಮುನ್ನ ಸರ್ಕಾರದ ಅನುಮತಿ ಪಡೆಯುವಂತೆ ಸೂಚಿಸಿದೆ.</p>.<p>ಗೃಹ ಖಾತೆ ರಾಜ್ಯ ಸಚಿವ ಎಂ. ರಾಮಚಂದ್ರನ್ ಲೋಕಸಭೆಯಲ್ಲಿ ಮಂಗಳವಾರ ಈ ವಿಚಾರ ತಿಳಿಸಿದರು.<br /> ಅಭಿವೃದ್ಧಿ ಕಾರ್ಯಗಳಿಗಾಗಿ ವಿದೇಶಗಳಿಂದ ಬರುವ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ 24 ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲಾಗಿದೆ. ಇಂತಹ 7 ಪ್ರಕರಣಗಳ ತನಿಖೆಯನ್ನು ಆಯಾ ರಾಜ್ಯಗಳ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಸಚಿವರು ಹೇಳಿದರು.<br /> <br /> ಕೂಡಂಕುಳಂ ಪರಮಾಣು ಸ್ಥಾವರ ಯೋಜನೆಗೆ ವ್ಯಕ್ತವಾಗುತ್ತಿರುವ ಪ್ರತಿಭಟನೆಗಳನ್ನು ಆಯೋಜಿಸಲು ವಿದೇಶಿ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಳೆದ ವಾರವಷ್ಟೇ ರಾಮಚಂದ್ರನ್ ಹೇಳಿಕೆ ನೀಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ವಿದೇಶಿ ಹಣದ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, 30 ಸರ್ಕಾರೇತರ ಸಂಸ್ಥೆಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. <br /> <br /> ಇನ್ನೂ 70 ಸೇವಾ ಸಂಸ್ಥೆಗಳು ವಿದೇಶಗಳಿಂದ ದೇಣಿಗೆ ಸ್ವೀಕರಿಸದಂತೆ ನಿರ್ಬಂಧಿಸಿದೆ. 35 ಸೇವಾ ಸಂಸ್ಥೆಗಳಿಗೆ ಅನುದಾನ ಸ್ವೀಕರಿಸುವ ಮುನ್ನ ಸರ್ಕಾರದ ಅನುಮತಿ ಪಡೆಯುವಂತೆ ಸೂಚಿಸಿದೆ.</p>.<p>ಗೃಹ ಖಾತೆ ರಾಜ್ಯ ಸಚಿವ ಎಂ. ರಾಮಚಂದ್ರನ್ ಲೋಕಸಭೆಯಲ್ಲಿ ಮಂಗಳವಾರ ಈ ವಿಚಾರ ತಿಳಿಸಿದರು.<br /> ಅಭಿವೃದ್ಧಿ ಕಾರ್ಯಗಳಿಗಾಗಿ ವಿದೇಶಗಳಿಂದ ಬರುವ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ 24 ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲಾಗಿದೆ. ಇಂತಹ 7 ಪ್ರಕರಣಗಳ ತನಿಖೆಯನ್ನು ಆಯಾ ರಾಜ್ಯಗಳ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಸಚಿವರು ಹೇಳಿದರು.<br /> <br /> ಕೂಡಂಕುಳಂ ಪರಮಾಣು ಸ್ಥಾವರ ಯೋಜನೆಗೆ ವ್ಯಕ್ತವಾಗುತ್ತಿರುವ ಪ್ರತಿಭಟನೆಗಳನ್ನು ಆಯೋಜಿಸಲು ವಿದೇಶಿ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಳೆದ ವಾರವಷ್ಟೇ ರಾಮಚಂದ್ರನ್ ಹೇಳಿಕೆ ನೀಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>