<p>ನವದೆಹಲಿ (ಪಿಟಿಐ): ಔಪಚಾರಿಕ ಪ್ರಕರಣ ದಾಖಲು ಮಾಡಿದ ಬಳಿಕ ವಿದೇಶೀ ಬ್ಯಾಂಕ್ ಗಳಲ್ಲಿ ಕಪ್ಪು ಹಣ ಇರಿಸಿದವರ ಹೆಸರುಗಳನ್ನು ಬಹಿರಂಗ ಪಡಿಸುವುದಾಗಿ ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್ ಗೆ ಭರವಸೆ ನೀಡಿತು.<br /> <br /> ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ನೇತೃತ್ವದ ಪೀಠದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣಿಯಂ ಅವರು ~ವಿದೇಶೀ ಬ್ಯಾಂಕ್ ಗಳಲ್ಲಿ ಕಪ್ಪುಹಣ ಇರಿಸಿದ ಆರೋಪಕ್ಕೆ ಒಳಗಾದವರಿಗೆ ಸರ್ಕಾರವು ಷೋಕಾಸ್ ನೋಟಿಸ್ ಜಾರಿ ಮಾಡಿದೆ. ಒಮ್ಮೆ ಅವರ ವಿರುದ್ಧ ಪ್ರಕರಣ ದಾಖಲಾದ ಬಳಿಕ ಅವರ ಹೆಸರುಗಳನ್ನು ಬಹಿರಂಗ ಪಡಿಸಲಾಗುವುದು~ ಎಂದು ಹೇಳಿದರು.<br /> <br /> ವಿದೇಶೀ ಬ್ಯಾಂಕ್ ಗಳಲ್ಲಿ ಕಪ್ಪು ಹಣ ಇರಿಸಿದ ಆರೋಪಕ್ಕೆ ಗುರಿಯಾಗಿರುವ ಪುಣೆ ಮೂಲದ ಉದ್ಯಮಿ ಹಸನ್ ಅಲಿ ಖಾನ್ ರಾಷ್ಟ್ರ ಬಿಟ್ಟು ತೆರಳದಂತೆ ಖಾತರಿ ನೀಡಬೇಕು ಎಂದು ಪೀಠವು ಸರ್ಕಾರಕ್ಕೆ ಸೂಚಿಸಿತು.<br /> <br /> ~ಹಸನ್ ಭಾರತದಲ್ಲೇ ಇದ್ದಾನೆ. ಸರ್ಕಾರ ಆತನ ವಿರುದ್ಧ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸುಬ್ರಮಣಿಯಂ ಹೇಳಿದಾಗ, ~ಆತ ವಿಚಾರಣೆಗೆ ಲಭ್ಯನಿರುವಂತೆ ನೋಡಿಕೊಳ್ಳುವುದು ನಿಮ್ಮ ಕರ್ತವ್ಯ~ ಎಂದು ನ್ಯಾಯಾಲಯವು ಅವರಿಗೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಔಪಚಾರಿಕ ಪ್ರಕರಣ ದಾಖಲು ಮಾಡಿದ ಬಳಿಕ ವಿದೇಶೀ ಬ್ಯಾಂಕ್ ಗಳಲ್ಲಿ ಕಪ್ಪು ಹಣ ಇರಿಸಿದವರ ಹೆಸರುಗಳನ್ನು ಬಹಿರಂಗ ಪಡಿಸುವುದಾಗಿ ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್ ಗೆ ಭರವಸೆ ನೀಡಿತು.<br /> <br /> ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ನೇತೃತ್ವದ ಪೀಠದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣಿಯಂ ಅವರು ~ವಿದೇಶೀ ಬ್ಯಾಂಕ್ ಗಳಲ್ಲಿ ಕಪ್ಪುಹಣ ಇರಿಸಿದ ಆರೋಪಕ್ಕೆ ಒಳಗಾದವರಿಗೆ ಸರ್ಕಾರವು ಷೋಕಾಸ್ ನೋಟಿಸ್ ಜಾರಿ ಮಾಡಿದೆ. ಒಮ್ಮೆ ಅವರ ವಿರುದ್ಧ ಪ್ರಕರಣ ದಾಖಲಾದ ಬಳಿಕ ಅವರ ಹೆಸರುಗಳನ್ನು ಬಹಿರಂಗ ಪಡಿಸಲಾಗುವುದು~ ಎಂದು ಹೇಳಿದರು.<br /> <br /> ವಿದೇಶೀ ಬ್ಯಾಂಕ್ ಗಳಲ್ಲಿ ಕಪ್ಪು ಹಣ ಇರಿಸಿದ ಆರೋಪಕ್ಕೆ ಗುರಿಯಾಗಿರುವ ಪುಣೆ ಮೂಲದ ಉದ್ಯಮಿ ಹಸನ್ ಅಲಿ ಖಾನ್ ರಾಷ್ಟ್ರ ಬಿಟ್ಟು ತೆರಳದಂತೆ ಖಾತರಿ ನೀಡಬೇಕು ಎಂದು ಪೀಠವು ಸರ್ಕಾರಕ್ಕೆ ಸೂಚಿಸಿತು.<br /> <br /> ~ಹಸನ್ ಭಾರತದಲ್ಲೇ ಇದ್ದಾನೆ. ಸರ್ಕಾರ ಆತನ ವಿರುದ್ಧ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸುಬ್ರಮಣಿಯಂ ಹೇಳಿದಾಗ, ~ಆತ ವಿಚಾರಣೆಗೆ ಲಭ್ಯನಿರುವಂತೆ ನೋಡಿಕೊಳ್ಳುವುದು ನಿಮ್ಮ ಕರ್ತವ್ಯ~ ಎಂದು ನ್ಯಾಯಾಲಯವು ಅವರಿಗೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>