<p><strong>ಬೆಂಗಳೂರು (ಪಿಟಿಐ):</strong> ತಮ್ಮ ಉದ್ದೇಶಿತ ವಿದೇಶ ಪ್ರವಾಸದಿಂದ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ತಮ್ಮ ವಿದೇಶ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.<br /> <br /> ತಮ್ಮ ಈ ನಿರ್ಧಾರವನ್ನು ಅವರು ಬೆಂಗಳೂರು ವಿಶ್ವವಿದ್ಯಾನಿಲಯದ 47ನೇ ಘಟಿಕೋತ್ಸವ ಸಮಾರಂಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ತಾವು ಯಾರೊಬ್ಬರ ಒತ್ತಡಕ್ಕೆ ಮಣಿದು ವಿದೇಶ ಪ್ರವಾಸದಿಂದ ಹಿಂದೆ ಸರಿಯುತ್ತಿಲ್ಲ. ತಮ್ಮ ಒಳದನಿಯನ್ನು ಕೇಳಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.<br /> <br /> ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ಮುಖ್ಯಮಂತ್ರಿ ಅವರು ಇದೇ ತಿಂಗಳ 16 ರಂದು ವಿದೇಶಗಳಿಗೆ ಪ್ರವಾಸ ಹೊರಡಲು ತೀರ್ಮಾನಿಸಿದ್ದರು.<br /> <br /> ಇದು ವಿರೋಧ ಪಕ್ಷಗಳು ಮಾತ್ರವಲ್ಲ ಸ್ವತ: ತಮ್ಮ ಪಕ್ಷದವರೇ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದಲೂ ಟೀಕೆಗೆ ಗುರಿಯಾಗಿತ್ತು. ಬುಧವಾರವಷ್ಟೆ ಅವರು ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ವಿದೇಶ ಪ್ರವಾಸಕ್ಕೆ ತೆರಳಬಾರದೆಂದು ಸಲಹೆ ನೀಡಿದ್ದರು.<br /> <br /> ಈ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಲು ಮುಖ್ಯಮಂತ್ರಿ ಅವರು ನಿರಾಕರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಪಿಟಿಐ):</strong> ತಮ್ಮ ಉದ್ದೇಶಿತ ವಿದೇಶ ಪ್ರವಾಸದಿಂದ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ತಮ್ಮ ವಿದೇಶ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.<br /> <br /> ತಮ್ಮ ಈ ನಿರ್ಧಾರವನ್ನು ಅವರು ಬೆಂಗಳೂರು ವಿಶ್ವವಿದ್ಯಾನಿಲಯದ 47ನೇ ಘಟಿಕೋತ್ಸವ ಸಮಾರಂಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ತಾವು ಯಾರೊಬ್ಬರ ಒತ್ತಡಕ್ಕೆ ಮಣಿದು ವಿದೇಶ ಪ್ರವಾಸದಿಂದ ಹಿಂದೆ ಸರಿಯುತ್ತಿಲ್ಲ. ತಮ್ಮ ಒಳದನಿಯನ್ನು ಕೇಳಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.<br /> <br /> ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ಮುಖ್ಯಮಂತ್ರಿ ಅವರು ಇದೇ ತಿಂಗಳ 16 ರಂದು ವಿದೇಶಗಳಿಗೆ ಪ್ರವಾಸ ಹೊರಡಲು ತೀರ್ಮಾನಿಸಿದ್ದರು.<br /> <br /> ಇದು ವಿರೋಧ ಪಕ್ಷಗಳು ಮಾತ್ರವಲ್ಲ ಸ್ವತ: ತಮ್ಮ ಪಕ್ಷದವರೇ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದಲೂ ಟೀಕೆಗೆ ಗುರಿಯಾಗಿತ್ತು. ಬುಧವಾರವಷ್ಟೆ ಅವರು ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ವಿದೇಶ ಪ್ರವಾಸಕ್ಕೆ ತೆರಳಬಾರದೆಂದು ಸಲಹೆ ನೀಡಿದ್ದರು.<br /> <br /> ಈ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಲು ಮುಖ್ಯಮಂತ್ರಿ ಅವರು ನಿರಾಕರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>