<p><strong>ಬೆಂಗಳೂರು:</strong> `ರಾಜ್ಯದಲ್ಲಿ ಬರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ವಿದೇಶ ಪ್ರವಾಸ ರದ್ದುಗೊಳಿಸಿದ್ದೇನೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು. <br /> <br /> ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಘಟಿಕೋತ್ಸವದಲ್ಲಿ ಪಾಲ್ಗೊಂಡ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, `ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಈಗ ವಿದೇಶಕ್ಕೆ ತೆರಳುವುದು ಸಮಂಜಸವಲ್ಲ ಎಂದು ತೀರ್ಮಾನಿಸಿ ಪ್ರವಾಸ ಕೈಬಿಡಲಾಗಿದೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸಮಾವೇಶದಲ್ಲಿ ಭಾಗವಹಿಸುವರು~ ಎಂದು ಸ್ಪಷ್ಟಪಡಿಸಿದರು. <br /> <br /> `ಪ್ರವಾಸ ಕೈಗೊಂಡರೆ ಅಪಾರ್ಥಕ್ಕೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ. ಬರಪೀಡಿತ ಪ್ರದೇಶಗಳಿಗೆ ತೆರಳಿದ ಸಚಿವರು ಮಧ್ಯಂತರ ವರದಿ ಸಲ್ಲಿಸಿದ್ದಾರೆ~ ಎಂದು ಅವರು ತಿಳಿಸಿದರು. <br /> <br /> `ನನಗೆ ಯಾರೂ ಸಲಹೆಗಾರರೂ ಇಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇನೆ. ಆತ್ಮಸಾಕ್ಷಿಯೇ ನನಗೆ ಸಲಹೆಗಾರ~ ಎಂದರು. <br /> <br /> `ರಾಜ್ಯಪಾಲರಿಗೆ ಎರಡು ರಾಜ್ಯದ ಹೊಣೆಗಾರಿಕೆ ಇದೆ. ಅನಿವಾರ್ಯ ಕಾರಣಗಳಿಂದ ರಾಜ್ಯಪಾಲರು ಘಟಿಕೋತ್ಸವದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಎಲ್ಲ ತುರ್ತು ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದೇನೆ. ರಾಜ್ಯಪಾಲರ ಗೈರುಹಾಜರಿಗೆ ಅಪಾರ್ಥ ಕಲ್ಪಿಸುವುದು ಬೇಡ. ಈ ಹಿಂದೆಯೂ ಮೈಸೂರು ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದೆ. ಗೌರವ ಡಾಕ್ಟರೇಟ್ ವಿವಾದದ ಕುರಿತು ತಮಗೇನು ಹೆಚ್ಚು ಮಾಹಿತಿ ಇಲ್ಲ~ ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯದಲ್ಲಿ ಬರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ವಿದೇಶ ಪ್ರವಾಸ ರದ್ದುಗೊಳಿಸಿದ್ದೇನೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು. <br /> <br /> ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಘಟಿಕೋತ್ಸವದಲ್ಲಿ ಪಾಲ್ಗೊಂಡ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, `ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಈಗ ವಿದೇಶಕ್ಕೆ ತೆರಳುವುದು ಸಮಂಜಸವಲ್ಲ ಎಂದು ತೀರ್ಮಾನಿಸಿ ಪ್ರವಾಸ ಕೈಬಿಡಲಾಗಿದೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸಮಾವೇಶದಲ್ಲಿ ಭಾಗವಹಿಸುವರು~ ಎಂದು ಸ್ಪಷ್ಟಪಡಿಸಿದರು. <br /> <br /> `ಪ್ರವಾಸ ಕೈಗೊಂಡರೆ ಅಪಾರ್ಥಕ್ಕೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ. ಬರಪೀಡಿತ ಪ್ರದೇಶಗಳಿಗೆ ತೆರಳಿದ ಸಚಿವರು ಮಧ್ಯಂತರ ವರದಿ ಸಲ್ಲಿಸಿದ್ದಾರೆ~ ಎಂದು ಅವರು ತಿಳಿಸಿದರು. <br /> <br /> `ನನಗೆ ಯಾರೂ ಸಲಹೆಗಾರರೂ ಇಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇನೆ. ಆತ್ಮಸಾಕ್ಷಿಯೇ ನನಗೆ ಸಲಹೆಗಾರ~ ಎಂದರು. <br /> <br /> `ರಾಜ್ಯಪಾಲರಿಗೆ ಎರಡು ರಾಜ್ಯದ ಹೊಣೆಗಾರಿಕೆ ಇದೆ. ಅನಿವಾರ್ಯ ಕಾರಣಗಳಿಂದ ರಾಜ್ಯಪಾಲರು ಘಟಿಕೋತ್ಸವದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಎಲ್ಲ ತುರ್ತು ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದೇನೆ. ರಾಜ್ಯಪಾಲರ ಗೈರುಹಾಜರಿಗೆ ಅಪಾರ್ಥ ಕಲ್ಪಿಸುವುದು ಬೇಡ. ಈ ಹಿಂದೆಯೂ ಮೈಸೂರು ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದೆ. ಗೌರವ ಡಾಕ್ಟರೇಟ್ ವಿವಾದದ ಕುರಿತು ತಮಗೇನು ಹೆಚ್ಚು ಮಾಹಿತಿ ಇಲ್ಲ~ ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>