<p>ಚಾಮರಾಜನಗರ: `ಪ್ರಸ್ತುತ ದೇಶದ ರಾಜಕೀಯ ವ್ಯವಸ್ಥೆ ಹದಗೆಟ್ಟಿದ್ದು, ಇದನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು~ ಎಂದು ಡಯಟ್ನ ನಿವೃತ್ತ ಪ್ರಾಂಶುಪಾಲ ಎಸ್.ಜೆ. ಸತ್ಯನಾರಾಯಣ ಸಲಹೆ ನೀಡಿದರು. <br /> <br /> ನಗರದ ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲ ಯದಲ್ಲಿ ಈಚೆಗೆ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ದೇಶದ ಅಭಿವೃದ್ಧಿಗೆ ಯುವಜನರು ಮುಂದಾಗಬೇಕು. ಹೀಗಾಗಿ, ಉತ್ತಮ ಪ್ರಜೆಗಳನ್ನು ರೂಪಿಸುವುದು ಶಿಕ್ಷಕರ ಜವಾಬ್ದಾರಿ. ಅದೃಷ್ಟದ ಮೇಲೆ ನಂಬಿಕೆ ಇಟ್ಟುಕೊಳ್ಳಬಾರದು. ಸ್ವಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಶಿಕ್ಷಕರು ಬೋಧನೆ ಮಾಡಬೇಕಿದೆ ಎಂದರು. <br /> <br /> ಡಾ.ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಅವರ ಆದರ್ಶಗಳ ಪಾಲನೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮುಂದಾಗಬೇಕು. ಯುವಜನರೇ ದೇಶದ ಸಂಪತ್ತು. ಹೀಗಾಗಿ, ವಿದ್ಯಾರ್ಥಿಗಳಿಗೆ ನೈತಿಕತೆಯ ಶಿಕ್ಷಣ ನೀಡುವುದು ಶಿಕ್ಷಕರ ಹೊಣೆ ಎಂದು ನುಡಿದರು. <br /> <br /> ವಿದ್ಯಾರ್ಥಿಗಳ ಬದುಕಿಗೆ ಗುರುವೇ ದಾರಿದೀಪ. ಸಮಾಜದಲ್ಲಿ ಶಿಕ್ಷಕನಿಗೆ ದೇವರಿಗಿಂತಲೂ ಮೀಗಿಲಾದ ಸ್ಥಾನ ಸಿಕ್ಕಿದೆ. ಶಿಕ್ಷಕ ವೃತ್ತಿ ಶ್ರೇಷ್ಠವಾದುದು. ಇದನ್ನು ಅರಿತು ಮುನ್ನಡೆಯಬೇಕಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು. <br /> <br /> ದೇಶದಲ್ಲಿ ಭ್ರಷ್ಟಾಚಾರ ಬೇರುಬಿಟ್ಟಿದೆ. ಇದರ ನಿರ್ಮೂಲನೆಗೆ ಯುವಜನರು ಪಣ ತೊಡಬೇಕು. ವಿದ್ಯಾರ್ಥಿಗಳು ಪರಿವರ್ತನಾಶೀಲ ಗುಣ ಬೆಳೆಸಿಕೊಳ್ಳಬೇಕು. ಇದಕ್ಕೆ ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. <br /> <br /> ಇದೇ ಸಂದರ್ಭದಲ್ಲಿ ಎಸ್.ಜೆ. ಸತ್ಯನಾರಾಯಣ ಹಾಗೂ ನಿವೃತ್ತ ಶಿಕ್ಷಕ ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಪ್ರೊ.ಎಂ. ಬಸವರಾಜು ಅಧ್ಯಕ್ಷತೆವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: `ಪ್ರಸ್ತುತ ದೇಶದ ರಾಜಕೀಯ ವ್ಯವಸ್ಥೆ ಹದಗೆಟ್ಟಿದ್ದು, ಇದನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು~ ಎಂದು ಡಯಟ್ನ ನಿವೃತ್ತ ಪ್ರಾಂಶುಪಾಲ ಎಸ್.ಜೆ. ಸತ್ಯನಾರಾಯಣ ಸಲಹೆ ನೀಡಿದರು. <br /> <br /> ನಗರದ ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲ ಯದಲ್ಲಿ ಈಚೆಗೆ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ದೇಶದ ಅಭಿವೃದ್ಧಿಗೆ ಯುವಜನರು ಮುಂದಾಗಬೇಕು. ಹೀಗಾಗಿ, ಉತ್ತಮ ಪ್ರಜೆಗಳನ್ನು ರೂಪಿಸುವುದು ಶಿಕ್ಷಕರ ಜವಾಬ್ದಾರಿ. ಅದೃಷ್ಟದ ಮೇಲೆ ನಂಬಿಕೆ ಇಟ್ಟುಕೊಳ್ಳಬಾರದು. ಸ್ವಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಶಿಕ್ಷಕರು ಬೋಧನೆ ಮಾಡಬೇಕಿದೆ ಎಂದರು. <br /> <br /> ಡಾ.ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಅವರ ಆದರ್ಶಗಳ ಪಾಲನೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮುಂದಾಗಬೇಕು. ಯುವಜನರೇ ದೇಶದ ಸಂಪತ್ತು. ಹೀಗಾಗಿ, ವಿದ್ಯಾರ್ಥಿಗಳಿಗೆ ನೈತಿಕತೆಯ ಶಿಕ್ಷಣ ನೀಡುವುದು ಶಿಕ್ಷಕರ ಹೊಣೆ ಎಂದು ನುಡಿದರು. <br /> <br /> ವಿದ್ಯಾರ್ಥಿಗಳ ಬದುಕಿಗೆ ಗುರುವೇ ದಾರಿದೀಪ. ಸಮಾಜದಲ್ಲಿ ಶಿಕ್ಷಕನಿಗೆ ದೇವರಿಗಿಂತಲೂ ಮೀಗಿಲಾದ ಸ್ಥಾನ ಸಿಕ್ಕಿದೆ. ಶಿಕ್ಷಕ ವೃತ್ತಿ ಶ್ರೇಷ್ಠವಾದುದು. ಇದನ್ನು ಅರಿತು ಮುನ್ನಡೆಯಬೇಕಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು. <br /> <br /> ದೇಶದಲ್ಲಿ ಭ್ರಷ್ಟಾಚಾರ ಬೇರುಬಿಟ್ಟಿದೆ. ಇದರ ನಿರ್ಮೂಲನೆಗೆ ಯುವಜನರು ಪಣ ತೊಡಬೇಕು. ವಿದ್ಯಾರ್ಥಿಗಳು ಪರಿವರ್ತನಾಶೀಲ ಗುಣ ಬೆಳೆಸಿಕೊಳ್ಳಬೇಕು. ಇದಕ್ಕೆ ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. <br /> <br /> ಇದೇ ಸಂದರ್ಭದಲ್ಲಿ ಎಸ್.ಜೆ. ಸತ್ಯನಾರಾಯಣ ಹಾಗೂ ನಿವೃತ್ತ ಶಿಕ್ಷಕ ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಪ್ರೊ.ಎಂ. ಬಸವರಾಜು ಅಧ್ಯಕ್ಷತೆವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>