<p><strong>ನವದೆಹಲಿ (ಐಎಎನ್ಎಸ್):</strong> ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್ಯು) ಪದಾಧಿಕಾರಿಗಳ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮೇಲುಗೈ ಸಾಧಿಸಿದೆ. ಈ ಗೆಲುವಿಗೆ ಅಣ್ಣಾ ಹಜಾರೆ ಅವರು ನಡೆಸಿದ ನಿರಶನ ಕಾರಣ ಎಂದು ಎಬಿವಿಪಿ ಹೇಳಿದೆ.<br /> <br /> ಆದರೆ, ಡಿಯುಎಸ್ಯು ಅಧ್ಯಕ್ಷ ಗಾದಿಯನ್ನು ಭಾರತೀಯ ವಿದ್ಯಾರ್ಥಿಗಳ ಒಕ್ಕೂಟ (ಎನ್ಎಸ್ಯುಐ) ತನ್ನ ಒಡಲಿಗೆ ಹಾಕಿಕೊಂಡಿದೆ. ರಾಜಧಾನಿಯ ಶೈಕ್ಷಣಿಕ ವಲಯದಲ್ಲಿ ಬಹು ಪ್ರಮುಖ ಚುನಾವಣೆಯಾದ ಡಿಯುಎಸ್ಯು ಉಪಾಧ್ಯಕ್ಷ ಸ್ಥಾನ ಸೇರಿದಂತೆ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಸ್ಥಾನವನ್ನು ಎಬಿವಿಪಿ ಗೆದ್ದುಕೊಂಡಿದೆ.<br /> <br /> <strong>ಕರಿ ಟೋಪಿ ಬದಲು ಗಾಂಧಿ ಟೋಪಿ</strong><br /> (<strong>ಭೋಪಾಲ್ ವರದಿ, ಪಿಟಿಐ): </strong>ಅಣ್ಣಾ ಹಜಾರೆ ಅವರ ನಿರಶನದ ನಂತರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರು ಕರಿ ಟೋಪಿ ಬದಲಿಗೆ ಗಾಂಧಿ ಟೋಪಿ ಧರಿಸತೊಡಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.<br /> <br /> `ಬಿಳಿಯ ಬಣ್ಣದ ಗಾಂಧಿ ಟೋಪಿ ಧರಿಸುತ್ತಿರುವುದರ ಜೊತೆಗೆ ನಾಗಪುರದಲ್ಲಿರುವ ಆರ್ಎಸ್ಎಸ್ ಮುಖ್ಯ ಕಚೇರಿಯ ಕಾರ್ಯಕರ್ತರು ಕೇಸರಿ ಬಣ್ಣದ ಬಾವುಟದ ಬದಲು ರಾಷ್ಟ್ರಧ್ವಜ ಹಿಡಿಯತೊಡಗಿದ್ದಾರೆ~ ಎಂದು ಅವರು ಸುದ್ದಿಗಾರರ ಬಳಿ ಶುಕ್ರವಾರ ವ್ಯಂಗ್ಯವಾಡಿದ್ದಾರೆ.<br /> <br /> ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ಕೈಗೊಳ್ಳಲು ನಿರ್ಧರಿಸಿರುವ ರಥಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಸಿಂಗ್, ಅಡ್ವಾಣಿ ಅವರು ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಲಿ ಎಂದಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್ಯು) ಪದಾಧಿಕಾರಿಗಳ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮೇಲುಗೈ ಸಾಧಿಸಿದೆ. ಈ ಗೆಲುವಿಗೆ ಅಣ್ಣಾ ಹಜಾರೆ ಅವರು ನಡೆಸಿದ ನಿರಶನ ಕಾರಣ ಎಂದು ಎಬಿವಿಪಿ ಹೇಳಿದೆ.<br /> <br /> ಆದರೆ, ಡಿಯುಎಸ್ಯು ಅಧ್ಯಕ್ಷ ಗಾದಿಯನ್ನು ಭಾರತೀಯ ವಿದ್ಯಾರ್ಥಿಗಳ ಒಕ್ಕೂಟ (ಎನ್ಎಸ್ಯುಐ) ತನ್ನ ಒಡಲಿಗೆ ಹಾಕಿಕೊಂಡಿದೆ. ರಾಜಧಾನಿಯ ಶೈಕ್ಷಣಿಕ ವಲಯದಲ್ಲಿ ಬಹು ಪ್ರಮುಖ ಚುನಾವಣೆಯಾದ ಡಿಯುಎಸ್ಯು ಉಪಾಧ್ಯಕ್ಷ ಸ್ಥಾನ ಸೇರಿದಂತೆ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಸ್ಥಾನವನ್ನು ಎಬಿವಿಪಿ ಗೆದ್ದುಕೊಂಡಿದೆ.<br /> <br /> <strong>ಕರಿ ಟೋಪಿ ಬದಲು ಗಾಂಧಿ ಟೋಪಿ</strong><br /> (<strong>ಭೋಪಾಲ್ ವರದಿ, ಪಿಟಿಐ): </strong>ಅಣ್ಣಾ ಹಜಾರೆ ಅವರ ನಿರಶನದ ನಂತರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರು ಕರಿ ಟೋಪಿ ಬದಲಿಗೆ ಗಾಂಧಿ ಟೋಪಿ ಧರಿಸತೊಡಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.<br /> <br /> `ಬಿಳಿಯ ಬಣ್ಣದ ಗಾಂಧಿ ಟೋಪಿ ಧರಿಸುತ್ತಿರುವುದರ ಜೊತೆಗೆ ನಾಗಪುರದಲ್ಲಿರುವ ಆರ್ಎಸ್ಎಸ್ ಮುಖ್ಯ ಕಚೇರಿಯ ಕಾರ್ಯಕರ್ತರು ಕೇಸರಿ ಬಣ್ಣದ ಬಾವುಟದ ಬದಲು ರಾಷ್ಟ್ರಧ್ವಜ ಹಿಡಿಯತೊಡಗಿದ್ದಾರೆ~ ಎಂದು ಅವರು ಸುದ್ದಿಗಾರರ ಬಳಿ ಶುಕ್ರವಾರ ವ್ಯಂಗ್ಯವಾಡಿದ್ದಾರೆ.<br /> <br /> ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ಕೈಗೊಳ್ಳಲು ನಿರ್ಧರಿಸಿರುವ ರಥಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಸಿಂಗ್, ಅಡ್ವಾಣಿ ಅವರು ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಲಿ ಎಂದಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>