<p><strong>ಬೆಂಗಳೂರು:</strong> ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯ<br /> ವನ್ನು ಸೋಮವಾರ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ನಗರದ ಪಶ್ಚಿಮ ಭಾಗದಲ್ಲಿ ಸೋಮವಾರ ಬೆಳಿಗ್ಗೆ<br /> 10ರಿಂದ ಸಂಜೆ ಐದು ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಯಿತು. ಇದರಿಂದಾಗಿ ಗ್ರಾಹಕರು ಪರದಾಡಬೇಕಾಯಿತು.<br /> <br /> ರಾಜಾಜಿನಗರ, ಪಶ್ಚಿಮ ಕಾರ್ಡ್ ರಸ್ತೆ, ವಿದ್ಯಾರಣ್ಯ ನಗರ, ವಿಜಯನಗರ, ಮಾಗಡಿ ಮುಖ್ಯ ರಸ್ತೆ, ದಾಸರಹಳ್ಳಿ, ಗೋವಿಂದರಾಜನಗರ, ಬಿನ್ನಿ ಲೇಔಟ್, ನಾಗರಬಾವಿ, ಕಾಮಾಕ್ಷಿಪಾಳ್ಯ, ಜೆ.ಸಿ.ನಗರ, ಮೈಸೂರು ರಸ್ತೆ, ಕಾಟನ್ಪೇಟೆ, ಸುಲ್ತಾನ್ಪೇಟೆ, ಚಿಕ್ಕಪೇಟೆ 3ಸೇರಿದಂತೆ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.<br /> ಈ ದುರಸ್ತಿ ಕಾಮಗಾರಿ ನಾಲ್ಕು ಸಬ್ ಸ್ಟೇಷನ್ಗಳ ವ್ಯಾಪ್ತಿಯಲ್ಲಿ ನಡೆದಿದೆ. ಹೀಗೆ ನಗರದ ಅರ್ಧದಷ್ಟು ಭಾಗದಲ್ಲಿ ವಿದ್ಯುತ್ ಇರಲಿಲ್ಲ. ಜನರಿಗೆ ಹೆಚ್ಚಿನ ತೊಂದರೆಯಾಗದಂತೆ ವಿದ್ಯುತ್ ಕಡಿತ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.<br /> <br /> ‘ಈಗ ಪರೀಕ್ಷಾ ಸಮಯ. ಇಷ್ಟು ದೀರ್ಘವಾಗಿ ವಿದ್ಯುತ್ ಕಡಿತ ಮಾಡಿದರೆ ಪರೀಕ್ಷಾ ಪೂರ್ವ ತಯಾರಿಗೆ ಕಷ್ಟವಾಗುತ್ತದೆ. ಅಲ್ಲದೆ ಉದ್ಯಮಗಳ ನಿರ್ವಹಣೆಗೆ ತೊಂದರೆಯಾಗುತ್ತದೆ’ ಎಂದು ಗ್ರಾಹಕರೊಬ್ಬರು ಅಭಿಪ್ರಾಯಪಟ್ಟರು.<br /> <br /> ‘ಪಿಯುಸಿ ಹಾಗೂ ಸಿಇಟಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ವಿದ್ಯುತ್ ಕಡಿತದಿಂದ ಸಮಸ್ಯೆಯಾಗಿದೆ. ಪರೀಕ್ಷಾ ಸಮಯದಲ್ಲಿ ಈ ರೀತಿ ಮಾಡುವುದು ಸರಿಯಲ್ಲ’ ಎಂದು ಪೋಷಕರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯ<br /> ವನ್ನು ಸೋಮವಾರ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ನಗರದ ಪಶ್ಚಿಮ ಭಾಗದಲ್ಲಿ ಸೋಮವಾರ ಬೆಳಿಗ್ಗೆ<br /> 10ರಿಂದ ಸಂಜೆ ಐದು ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಯಿತು. ಇದರಿಂದಾಗಿ ಗ್ರಾಹಕರು ಪರದಾಡಬೇಕಾಯಿತು.<br /> <br /> ರಾಜಾಜಿನಗರ, ಪಶ್ಚಿಮ ಕಾರ್ಡ್ ರಸ್ತೆ, ವಿದ್ಯಾರಣ್ಯ ನಗರ, ವಿಜಯನಗರ, ಮಾಗಡಿ ಮುಖ್ಯ ರಸ್ತೆ, ದಾಸರಹಳ್ಳಿ, ಗೋವಿಂದರಾಜನಗರ, ಬಿನ್ನಿ ಲೇಔಟ್, ನಾಗರಬಾವಿ, ಕಾಮಾಕ್ಷಿಪಾಳ್ಯ, ಜೆ.ಸಿ.ನಗರ, ಮೈಸೂರು ರಸ್ತೆ, ಕಾಟನ್ಪೇಟೆ, ಸುಲ್ತಾನ್ಪೇಟೆ, ಚಿಕ್ಕಪೇಟೆ 3ಸೇರಿದಂತೆ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.<br /> ಈ ದುರಸ್ತಿ ಕಾಮಗಾರಿ ನಾಲ್ಕು ಸಬ್ ಸ್ಟೇಷನ್ಗಳ ವ್ಯಾಪ್ತಿಯಲ್ಲಿ ನಡೆದಿದೆ. ಹೀಗೆ ನಗರದ ಅರ್ಧದಷ್ಟು ಭಾಗದಲ್ಲಿ ವಿದ್ಯುತ್ ಇರಲಿಲ್ಲ. ಜನರಿಗೆ ಹೆಚ್ಚಿನ ತೊಂದರೆಯಾಗದಂತೆ ವಿದ್ಯುತ್ ಕಡಿತ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.<br /> <br /> ‘ಈಗ ಪರೀಕ್ಷಾ ಸಮಯ. ಇಷ್ಟು ದೀರ್ಘವಾಗಿ ವಿದ್ಯುತ್ ಕಡಿತ ಮಾಡಿದರೆ ಪರೀಕ್ಷಾ ಪೂರ್ವ ತಯಾರಿಗೆ ಕಷ್ಟವಾಗುತ್ತದೆ. ಅಲ್ಲದೆ ಉದ್ಯಮಗಳ ನಿರ್ವಹಣೆಗೆ ತೊಂದರೆಯಾಗುತ್ತದೆ’ ಎಂದು ಗ್ರಾಹಕರೊಬ್ಬರು ಅಭಿಪ್ರಾಯಪಟ್ಟರು.<br /> <br /> ‘ಪಿಯುಸಿ ಹಾಗೂ ಸಿಇಟಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ವಿದ್ಯುತ್ ಕಡಿತದಿಂದ ಸಮಸ್ಯೆಯಾಗಿದೆ. ಪರೀಕ್ಷಾ ಸಮಯದಲ್ಲಿ ಈ ರೀತಿ ಮಾಡುವುದು ಸರಿಯಲ್ಲ’ ಎಂದು ಪೋಷಕರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>