<p><span style="font-size: 26px;"><strong>ಪಾವಗಡ:</strong> ಕ್ಷುಲ್ಲಕ ಕಾರಣಕ್ಕೆ ವಿದ್ಯುತ್ ಕಂಬವೇರಿದ ವ್ಯಕ್ತಿಯೊಬ್ಬನನ್ನು ಕೆಳಗಿಳಿಸಲು ಗ್ರಾಮಸ್ಥರು ಪರದಾಡಿದ ಘಟನೆ ತಾಲ್ಲೂಕಿನ ಮಂಗಳವಾಡ ಗ್ರಾಮದಲ್ಲಿ ಬುಧವಾರ ನಡೆದಿದೆ.</span><br /> <br /> ಗ್ರಾಮದ ಲಿಂಗರಾಜು (22) ಎಂಬಾತ ತನ್ನನ್ನು ಅಜ್ಜಿ ಬೈದಳೆಂಬ ಕಾರಣಕ್ಕೆ ಬೆಳಿಗ್ಗೆ 9 ಗಂಟೆಗೆ ವಿದ್ಯುತ್ ಕಂಬ ಏರಿದ. ಗ್ರಾಮಸ್ಥರು ಕೂಡಲೇ ಬೆಸ್ಕಾಂ ಕಚೇರಿಗೆ ಫೋನ್ ಮಾಡಿ ವಿದ್ಯುತ್ ಸಂಪರ್ಕ ತೆಗೆಯಲು ಮನವಿ ಮಾಡಿ ಅನಾಹುತ ತಪ್ಪಿಸಿದರು.<br /> <br /> ಏಣಿ ಹಾಕಿ ಕಂಬದಿಂದ ಇಳಿಯುವಂತೆ ಪರಿಪರಿಯಾಗಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಯಾರಾದರೂ ತನ್ನ ಹತ್ತಿರ ಬಂದರೆ ಮೇಲಿಂದ ಧುಮುಕುವುದಾಗಿ ಬೆದರಿಸಿದ. ಸ್ಥಳಕ್ಕೆ ಬಂಧ ಅರಸೀಕೆರೆ ಪೊಲೀಸರು ಲಿಂಗರಾಜುವಿನ ಮನವೊಲಿಸಿ ಕಂಬದಿಂದ ಕೆಳಗಿಳಿಸಿದರು.<br /> ನಂತರ ಮದ್ಯ ಸೇವಿಸಿದ್ದ ಅವನನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ವಶಕ್ಕೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಪಾವಗಡ:</strong> ಕ್ಷುಲ್ಲಕ ಕಾರಣಕ್ಕೆ ವಿದ್ಯುತ್ ಕಂಬವೇರಿದ ವ್ಯಕ್ತಿಯೊಬ್ಬನನ್ನು ಕೆಳಗಿಳಿಸಲು ಗ್ರಾಮಸ್ಥರು ಪರದಾಡಿದ ಘಟನೆ ತಾಲ್ಲೂಕಿನ ಮಂಗಳವಾಡ ಗ್ರಾಮದಲ್ಲಿ ಬುಧವಾರ ನಡೆದಿದೆ.</span><br /> <br /> ಗ್ರಾಮದ ಲಿಂಗರಾಜು (22) ಎಂಬಾತ ತನ್ನನ್ನು ಅಜ್ಜಿ ಬೈದಳೆಂಬ ಕಾರಣಕ್ಕೆ ಬೆಳಿಗ್ಗೆ 9 ಗಂಟೆಗೆ ವಿದ್ಯುತ್ ಕಂಬ ಏರಿದ. ಗ್ರಾಮಸ್ಥರು ಕೂಡಲೇ ಬೆಸ್ಕಾಂ ಕಚೇರಿಗೆ ಫೋನ್ ಮಾಡಿ ವಿದ್ಯುತ್ ಸಂಪರ್ಕ ತೆಗೆಯಲು ಮನವಿ ಮಾಡಿ ಅನಾಹುತ ತಪ್ಪಿಸಿದರು.<br /> <br /> ಏಣಿ ಹಾಕಿ ಕಂಬದಿಂದ ಇಳಿಯುವಂತೆ ಪರಿಪರಿಯಾಗಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಯಾರಾದರೂ ತನ್ನ ಹತ್ತಿರ ಬಂದರೆ ಮೇಲಿಂದ ಧುಮುಕುವುದಾಗಿ ಬೆದರಿಸಿದ. ಸ್ಥಳಕ್ಕೆ ಬಂಧ ಅರಸೀಕೆರೆ ಪೊಲೀಸರು ಲಿಂಗರಾಜುವಿನ ಮನವೊಲಿಸಿ ಕಂಬದಿಂದ ಕೆಳಗಿಳಿಸಿದರು.<br /> ನಂತರ ಮದ್ಯ ಸೇವಿಸಿದ್ದ ಅವನನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ವಶಕ್ಕೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>