<p><strong>ಹಳೇಬೀಡು: </strong>ಮೂರು ದಿನಗಳಿಂದ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾ ಗದೆ ಇರುವುದರಿಂದ ಹಲವು ಬೆಳೆಗಳಿಗೆ ಹಾನಿಯಾಗಿದೆ. <br /> <br /> ವಿದ್ಯುತ್ ಅಭಾವದ ಜೊತೆಗೆ ಮಳೆ ಇಲ್ಲದೆ ಬಿಸಿಲಿನ ತಾಪ ಹೆಚ್ಚಾಗಿರು ವುದರಿಂದ ಬೆಳೆಗಳು ಬಾಡುತ್ತಿವೆ. ಬೆಳೆಗಳು ಒಣಗುವ ಹಂತ ತಲುಪಿವೆ. ಮಳೆ ಹಾಗೂ ವಿದ್ಯುತ್ ಕ್ಷಾಮದಿಂದ ರೈತವರ್ಗ ಕಣ್ಣೀರಲ್ಲಿ ಕೈತೊಳೆಯು ವಂತಾಗಿದೆ. <br /> <br /> `ಸೆಸ್ಕ್ನವರು ಮಾಹಿತಿ ನೀಡದೆ ಬೇಕಾಬಿಟ್ಟಿ ವಿದ್ಯುತ್ ಸರಬರಾಜು ಮಾಡುತ್ತಿರುವುದರಿಂದ ಬೆಳೆಗಳಿಗೆ ನೀರುಣಿಸಲು ದಿನವಿಡಿ ಜಮೀನಿನಲ್ಲಿ ಕಾಯುವಂತಾಗಿದೆ. ಮನೆಗೆ ಬಂದಾಗ ವಿದ್ಯುತ್ ಬಂದರೆ ಪುನಃ ಹೊಲಕ್ಕೆ ಹೋಗುವುದರಲ್ಲಿ ನಾಪತ್ತೆ ಯಾಗುತ್ತದೆ. ದಿನದಲ್ಲಿ ಕನಿಷ್ಠ ಮೂರು ಗಂಟೆಯೂ ಗುಣಮಟ್ಟದ ವಿದ್ಯುತ್ ಸರಬರಾಜಾಗುತ್ತಿಲ್ಲ~ ಎಂಬುದು ರೈತರ ಅಳಲು.<br /> <br /> ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ವಿದ್ಯಾರ್ಥಿಗಳು ರಾತ್ರಿ ಅಭ್ಯಾಸ ಮಾಡಲು ತೊಂದರೆಯಾಗಿದೆ. ಅರ್ಧ ವಾರ್ಷಿಕ ಪರೀಕ್ಷೆ ಸಮಯದಲ್ಲಿಯೂ ವಿದ್ಯುತ್ ತೆಗೆಯುತ್ತಿರುವುದರಿಂದ ಪೋಷಕರು ಹಿಡಿಶಾಪ ಹಾಕುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳೇಬೀಡು: </strong>ಮೂರು ದಿನಗಳಿಂದ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾ ಗದೆ ಇರುವುದರಿಂದ ಹಲವು ಬೆಳೆಗಳಿಗೆ ಹಾನಿಯಾಗಿದೆ. <br /> <br /> ವಿದ್ಯುತ್ ಅಭಾವದ ಜೊತೆಗೆ ಮಳೆ ಇಲ್ಲದೆ ಬಿಸಿಲಿನ ತಾಪ ಹೆಚ್ಚಾಗಿರು ವುದರಿಂದ ಬೆಳೆಗಳು ಬಾಡುತ್ತಿವೆ. ಬೆಳೆಗಳು ಒಣಗುವ ಹಂತ ತಲುಪಿವೆ. ಮಳೆ ಹಾಗೂ ವಿದ್ಯುತ್ ಕ್ಷಾಮದಿಂದ ರೈತವರ್ಗ ಕಣ್ಣೀರಲ್ಲಿ ಕೈತೊಳೆಯು ವಂತಾಗಿದೆ. <br /> <br /> `ಸೆಸ್ಕ್ನವರು ಮಾಹಿತಿ ನೀಡದೆ ಬೇಕಾಬಿಟ್ಟಿ ವಿದ್ಯುತ್ ಸರಬರಾಜು ಮಾಡುತ್ತಿರುವುದರಿಂದ ಬೆಳೆಗಳಿಗೆ ನೀರುಣಿಸಲು ದಿನವಿಡಿ ಜಮೀನಿನಲ್ಲಿ ಕಾಯುವಂತಾಗಿದೆ. ಮನೆಗೆ ಬಂದಾಗ ವಿದ್ಯುತ್ ಬಂದರೆ ಪುನಃ ಹೊಲಕ್ಕೆ ಹೋಗುವುದರಲ್ಲಿ ನಾಪತ್ತೆ ಯಾಗುತ್ತದೆ. ದಿನದಲ್ಲಿ ಕನಿಷ್ಠ ಮೂರು ಗಂಟೆಯೂ ಗುಣಮಟ್ಟದ ವಿದ್ಯುತ್ ಸರಬರಾಜಾಗುತ್ತಿಲ್ಲ~ ಎಂಬುದು ರೈತರ ಅಳಲು.<br /> <br /> ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ವಿದ್ಯಾರ್ಥಿಗಳು ರಾತ್ರಿ ಅಭ್ಯಾಸ ಮಾಡಲು ತೊಂದರೆಯಾಗಿದೆ. ಅರ್ಧ ವಾರ್ಷಿಕ ಪರೀಕ್ಷೆ ಸಮಯದಲ್ಲಿಯೂ ವಿದ್ಯುತ್ ತೆಗೆಯುತ್ತಿರುವುದರಿಂದ ಪೋಷಕರು ಹಿಡಿಶಾಪ ಹಾಕುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>