<p>ಹೈದರಾಬಾದ್ (ಪಿಟಿಐ): ವಿದ್ಯುತ್ ದರ ಏರಿಕೆ ಮತ್ತು ಅನಿಯಮಿತ ವಿದ್ಯುತ್ ಕಡಿತವನ್ನು ವಿರೋಧಿಸಿ ವಿದ್ಯುತ್ ಕಚೇರಿಗೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ತೆರಳುತ್ತಿದ್ದ ತೆಲುಗುದೇಶಂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು, ಪಕ್ಷದ 25 ಶಾಸಕರು ಮತ್ತು ಹಿರಿಯ ಮುಖಂಡರನ್ನು ಪೊಲೀಸರು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಿದ್ದಾರೆ.<br /> <br /> ಬಂಧಿತರನ್ನು ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ತಮ್ಮ ಬಂಧನವನ್ನು ವಿರೋಧಿಸಿ ಈ ನಾಯಕರು ಠಾಣೆಯಲ್ಲೇ ಧರಣಿ ನಡೆಸಿದರು.<br /> <br /> ತೆಲುಗು ದೇಶಂ ಪಕ್ಷದ ಪ್ರಧಾನ ಕಚೇರಿ ಎನ್ಟಿಆರ್ ಭವನದಿಂದ ಸೋಮಾಜಿಗುಡದಲ್ಲಿರುವ ವಿದ್ಯುತ್ ಭವನದವರೆಗೆ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು. ಮೆರವಣಿಗೆ ಬಂಜಾರಾ ಹಿಲ್ಸ್ ಬಳಿಯ ಒಂದನೇ ರಸ್ತೆಗೆ ಬಂದಾಗ ಪೊಲೀಸರು ಮೆರವಣಿಗೆಕಾರರನ್ನು ತಡೆದು ವಶಕ್ಕೆ ತೆಗೆದುಕೊಂಡರು. <br /> <br /> ಪೊಲೀಸರು ವ್ಯಾನಿನೊಳಗೆ ಪ್ರತಿಭಟನಾಕಾರರನ್ನು ಬಲವಂತವಾಗಿ ತಳ್ಳುವಾಗ ಮಾತಿನ ಚಕಮಕಿ ನಡೆಯಿತು. ಸುಮಾರು 45 ನಿಮಿಷಗಳ ಕಾಲ ನಡೆದ ವಾಕ್ಸಮರದ ನಂತರ ಪೊಲೀಸರು ಚಂದ್ರಬಾಬು ನಾಯ್ಡು ಸೇರಿದಂತೆ ಪ್ರಮುಖ ಮುಖಂಡರನ್ನು ವಶಕ್ಕೆ ತೆಗೆದುಕೊಂಡರು.<br /> <br /> `2004ರಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಆದರೆ ಕಳೆದ ಏಳು ವರ್ಷಗಳಿಂದ ವಿದ್ಯುತ್ ಕ್ಷೇತ್ರ ತುಂಬಾ ಹದಗೆಟ್ಟಿದ್ದು, ಕೈಗಾರಿಕೆ ಮತ್ತು ಕೃಷಿ ಕುಂಠಿತಗೊಂಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್ (ಪಿಟಿಐ): ವಿದ್ಯುತ್ ದರ ಏರಿಕೆ ಮತ್ತು ಅನಿಯಮಿತ ವಿದ್ಯುತ್ ಕಡಿತವನ್ನು ವಿರೋಧಿಸಿ ವಿದ್ಯುತ್ ಕಚೇರಿಗೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ತೆರಳುತ್ತಿದ್ದ ತೆಲುಗುದೇಶಂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು, ಪಕ್ಷದ 25 ಶಾಸಕರು ಮತ್ತು ಹಿರಿಯ ಮುಖಂಡರನ್ನು ಪೊಲೀಸರು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಿದ್ದಾರೆ.<br /> <br /> ಬಂಧಿತರನ್ನು ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ತಮ್ಮ ಬಂಧನವನ್ನು ವಿರೋಧಿಸಿ ಈ ನಾಯಕರು ಠಾಣೆಯಲ್ಲೇ ಧರಣಿ ನಡೆಸಿದರು.<br /> <br /> ತೆಲುಗು ದೇಶಂ ಪಕ್ಷದ ಪ್ರಧಾನ ಕಚೇರಿ ಎನ್ಟಿಆರ್ ಭವನದಿಂದ ಸೋಮಾಜಿಗುಡದಲ್ಲಿರುವ ವಿದ್ಯುತ್ ಭವನದವರೆಗೆ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು. ಮೆರವಣಿಗೆ ಬಂಜಾರಾ ಹಿಲ್ಸ್ ಬಳಿಯ ಒಂದನೇ ರಸ್ತೆಗೆ ಬಂದಾಗ ಪೊಲೀಸರು ಮೆರವಣಿಗೆಕಾರರನ್ನು ತಡೆದು ವಶಕ್ಕೆ ತೆಗೆದುಕೊಂಡರು. <br /> <br /> ಪೊಲೀಸರು ವ್ಯಾನಿನೊಳಗೆ ಪ್ರತಿಭಟನಾಕಾರರನ್ನು ಬಲವಂತವಾಗಿ ತಳ್ಳುವಾಗ ಮಾತಿನ ಚಕಮಕಿ ನಡೆಯಿತು. ಸುಮಾರು 45 ನಿಮಿಷಗಳ ಕಾಲ ನಡೆದ ವಾಕ್ಸಮರದ ನಂತರ ಪೊಲೀಸರು ಚಂದ್ರಬಾಬು ನಾಯ್ಡು ಸೇರಿದಂತೆ ಪ್ರಮುಖ ಮುಖಂಡರನ್ನು ವಶಕ್ಕೆ ತೆಗೆದುಕೊಂಡರು.<br /> <br /> `2004ರಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಆದರೆ ಕಳೆದ ಏಳು ವರ್ಷಗಳಿಂದ ವಿದ್ಯುತ್ ಕ್ಷೇತ್ರ ತುಂಬಾ ಹದಗೆಟ್ಟಿದ್ದು, ಕೈಗಾರಿಕೆ ಮತ್ತು ಕೃಷಿ ಕುಂಠಿತಗೊಂಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>