<p><strong>ಹಾವೇರಿ:</strong> `ರಾಜ್ಯ ಸರ್ಕಾರ ವಿದ್ಯುತ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಮಳೆಗಾಲ ಮುಗಿಯುವ ಮುನ್ನವೇ ರಾಜ್ಯವನ್ನು ಸಂಪೂರ್ಣ ಕತ್ತಲಲ್ಲಿ ಮುಳಗುವಂತೆ ಮಾಡಿದೆ~ ಎಂದು ಮಾಜಿ ಸಚಿವ ಕೆ.ಬಿ.ಕೋಳಿವಾಡ ಆರೋಪಿಸಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಆದರೆ, ರಾಜ್ಯ ಸರ್ಕಾರಕ್ಕೆ ಮುಂದಾಲೋಚನೆ ಇಲ್ಲದ್ದರಿಂದ ವಿದ್ಯುತ್ ಉತ್ಪಾದನೆ ಕುಂಠಿತಗೊಂಡು ರಾಜ್ಯ ಅಕಾಲಿಕವಾಗಿ ವಿದ್ಯುತ್ ಕ್ಷಾಮವನ್ನು ಎದುರಿಸಬೇಕಾಗಿದೆ ಎಂದು ಹೇಳಿದರು.<br /> <br /> ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರು ತಮ್ಮ ವೈಫಲ್ಯ ಹಾಗೂ ಜವಾಬ್ದಾರಿಯಿಂದ ನುಣಚಿಕೊಳ್ಳಲು ಅನವಶ್ಯಕವಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಪಾದಿಸಿದರು.<br /> <br /> ಕೇಂದ್ರ ಸರ್ಕಾರ ನಿಜವಾಗಿಯೂ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದ್ದರೇ ಕಲ್ಲಿದ್ದಲು ಪೂರೈಕೆಯ ಅಂಕಿ ಸಂಖ್ಯೆಯನ್ನು ರಾಜ್ಯ ಸರ್ಕಾರ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.<br /> <br /> <strong>ಸಿ.ಎಂ.ಕೈಗೊಂಬೆ</strong>: ಲೋಕಾಯುಕ್ತ ಸಂತೋಷ ಹೆಗಡೆ ಅವರು ಗಣಿ ಅವ್ಯವಹಾರ ಕುರಿತು ವರದಿ ಸಲ್ಲಿಸಿ ಎರಡು ತಿಂಗಳಾಗುತ್ತಾ ಬಂದಿದೆ. ರಾಜ್ಯ ಸರ್ಕಾರ ಇನ್ನೂ ಆ ವರದಿಯನ್ನು ಒಪ್ಪಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ. ಅ.16 ರೊಳಗೆ ಒಪ್ಪಿಕೊಳ್ಳದಿದ್ದರೆ, ಮುಖ್ಯಮಂತ್ರಿ ಸದಾನಂದಗೌಡರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೈಗೊಂಬೆ ಎಂಬುದನ್ನು ಸಾಬೀತು ಪಡಿಸಿದಂತಾಗುತ್ತದೆ ಎಂದು ಹೇಳಿದರು.<br /> <br /> ಭ್ರಷ್ಟಾಚಾರದಿಂದ ಏನೆಲ್ಲ ಆವಾಂತರಗಳನ್ನು ಸೃಷ್ಟಿಸಿಕೊಂಡ ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಬುದ್ದ್ಧಿ ಕಲಿತಂತಿಲ್ಲ. ಮತ್ತೆ ಮತ್ತೆ ತಪ್ಪುಗಳನ್ನು ಎಸಗಿ ಜನರನ್ನು ಗೊಂದಲಕ್ಕೆ ಸಿಲುಕಿಸುವ ಕೆಲಸ ಮಾಡುತ್ತಿದೆ. ಭ್ರಷ್ಟ ವ್ಯವಸ್ಥೆಯನ್ನು ಪ್ರೋತ್ಸಾಹಿಸವ ಮೂಲಕ ನಾಡಿನ ಜನರಿಗೆ ವ್ಯವಸ್ಥಿತವಾಗಿ ವಂಚಿಸಿ ಸಮಸ್ಯೆ ಹುಟ್ಟು ಹಾಕುತ್ತಿದೆ.<br /> <br /> ಮೆಗಾಸಿಟಿ ಭೂ ಹಗರಣದಲ್ಲಿ ಭಾಗಿಯಾಗಿರುವ ಸಚಿವ ಯೋಗಿಶ್ವರ ಅವರನ್ನು ಸಂಪುಟದಿಂದ ಕೈಬಿಡಲು ಮೀನ ಮೇಷ ಎನಿಸುವ ಮೂಲಕ ಮತ್ತೆ ಭ್ರಷ್ಟಾಚಾರಿಗಳಿಗೆ ರಕ್ಷಣೆ ನೀಡಲು ಮುಂದಾಗಿದೆ. ತಕ್ಷಣವೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಅವರು ಒತ್ತಾಯಿಸಿದರು.<br /> <br /> ವಿಧಾನಸಭಾಪತಿ ಅವರು ಶ್ರೀರಾಮುಲು ರಾಜೀನಾಮೆ ನೀಡಿ ತಿಂಗಳಾಗುತ್ತಾ ಬಂದಿದೆ. ಅವರ ರಾಜೀನಾಮೆ ಸ್ವೀಕರಿಸದೇ ಹಾಗೆ ಇಟ್ಟುಕೊಳ್ಳುವ ಮೂಲಕ ಸಭಾಪತಿಯವರು ಪಕ್ಷದ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಅಯೋಗ್ಯ ಹಾಗೂ ಅನರ್ಹ ಸಭಾಪತಿ ಸಿಕ್ಕಿರುವುದು ರಾಜ್ಯದ ದುರ್ದೈವ ಎಂದು ಹೇಳಿದರು.<br /> <br /> ಮುಂಬರುವ ವಿಧಾನಸಭೆ, ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆ ಘೋಷಣೆಯಾಗುವ ಮೂರು ತಿಂಗಳ ಮುನ್ನವೇ ಪ್ರಕಟಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಪರಮೇಶಪ್ಪ ಮೇಗಳಮನಿ, ಮಾಜಿ ಶಾಸಕ ರುದ್ರಪ್ಪ ಲಮಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಜಗದೀಶ ಬೆಟಗೇರಿ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> `ರಾಜ್ಯ ಸರ್ಕಾರ ವಿದ್ಯುತ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಮಳೆಗಾಲ ಮುಗಿಯುವ ಮುನ್ನವೇ ರಾಜ್ಯವನ್ನು ಸಂಪೂರ್ಣ ಕತ್ತಲಲ್ಲಿ ಮುಳಗುವಂತೆ ಮಾಡಿದೆ~ ಎಂದು ಮಾಜಿ ಸಚಿವ ಕೆ.ಬಿ.ಕೋಳಿವಾಡ ಆರೋಪಿಸಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಆದರೆ, ರಾಜ್ಯ ಸರ್ಕಾರಕ್ಕೆ ಮುಂದಾಲೋಚನೆ ಇಲ್ಲದ್ದರಿಂದ ವಿದ್ಯುತ್ ಉತ್ಪಾದನೆ ಕುಂಠಿತಗೊಂಡು ರಾಜ್ಯ ಅಕಾಲಿಕವಾಗಿ ವಿದ್ಯುತ್ ಕ್ಷಾಮವನ್ನು ಎದುರಿಸಬೇಕಾಗಿದೆ ಎಂದು ಹೇಳಿದರು.<br /> <br /> ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರು ತಮ್ಮ ವೈಫಲ್ಯ ಹಾಗೂ ಜವಾಬ್ದಾರಿಯಿಂದ ನುಣಚಿಕೊಳ್ಳಲು ಅನವಶ್ಯಕವಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಪಾದಿಸಿದರು.<br /> <br /> ಕೇಂದ್ರ ಸರ್ಕಾರ ನಿಜವಾಗಿಯೂ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದ್ದರೇ ಕಲ್ಲಿದ್ದಲು ಪೂರೈಕೆಯ ಅಂಕಿ ಸಂಖ್ಯೆಯನ್ನು ರಾಜ್ಯ ಸರ್ಕಾರ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.<br /> <br /> <strong>ಸಿ.ಎಂ.ಕೈಗೊಂಬೆ</strong>: ಲೋಕಾಯುಕ್ತ ಸಂತೋಷ ಹೆಗಡೆ ಅವರು ಗಣಿ ಅವ್ಯವಹಾರ ಕುರಿತು ವರದಿ ಸಲ್ಲಿಸಿ ಎರಡು ತಿಂಗಳಾಗುತ್ತಾ ಬಂದಿದೆ. ರಾಜ್ಯ ಸರ್ಕಾರ ಇನ್ನೂ ಆ ವರದಿಯನ್ನು ಒಪ್ಪಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ. ಅ.16 ರೊಳಗೆ ಒಪ್ಪಿಕೊಳ್ಳದಿದ್ದರೆ, ಮುಖ್ಯಮಂತ್ರಿ ಸದಾನಂದಗೌಡರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೈಗೊಂಬೆ ಎಂಬುದನ್ನು ಸಾಬೀತು ಪಡಿಸಿದಂತಾಗುತ್ತದೆ ಎಂದು ಹೇಳಿದರು.<br /> <br /> ಭ್ರಷ್ಟಾಚಾರದಿಂದ ಏನೆಲ್ಲ ಆವಾಂತರಗಳನ್ನು ಸೃಷ್ಟಿಸಿಕೊಂಡ ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಬುದ್ದ್ಧಿ ಕಲಿತಂತಿಲ್ಲ. ಮತ್ತೆ ಮತ್ತೆ ತಪ್ಪುಗಳನ್ನು ಎಸಗಿ ಜನರನ್ನು ಗೊಂದಲಕ್ಕೆ ಸಿಲುಕಿಸುವ ಕೆಲಸ ಮಾಡುತ್ತಿದೆ. ಭ್ರಷ್ಟ ವ್ಯವಸ್ಥೆಯನ್ನು ಪ್ರೋತ್ಸಾಹಿಸವ ಮೂಲಕ ನಾಡಿನ ಜನರಿಗೆ ವ್ಯವಸ್ಥಿತವಾಗಿ ವಂಚಿಸಿ ಸಮಸ್ಯೆ ಹುಟ್ಟು ಹಾಕುತ್ತಿದೆ.<br /> <br /> ಮೆಗಾಸಿಟಿ ಭೂ ಹಗರಣದಲ್ಲಿ ಭಾಗಿಯಾಗಿರುವ ಸಚಿವ ಯೋಗಿಶ್ವರ ಅವರನ್ನು ಸಂಪುಟದಿಂದ ಕೈಬಿಡಲು ಮೀನ ಮೇಷ ಎನಿಸುವ ಮೂಲಕ ಮತ್ತೆ ಭ್ರಷ್ಟಾಚಾರಿಗಳಿಗೆ ರಕ್ಷಣೆ ನೀಡಲು ಮುಂದಾಗಿದೆ. ತಕ್ಷಣವೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಅವರು ಒತ್ತಾಯಿಸಿದರು.<br /> <br /> ವಿಧಾನಸಭಾಪತಿ ಅವರು ಶ್ರೀರಾಮುಲು ರಾಜೀನಾಮೆ ನೀಡಿ ತಿಂಗಳಾಗುತ್ತಾ ಬಂದಿದೆ. ಅವರ ರಾಜೀನಾಮೆ ಸ್ವೀಕರಿಸದೇ ಹಾಗೆ ಇಟ್ಟುಕೊಳ್ಳುವ ಮೂಲಕ ಸಭಾಪತಿಯವರು ಪಕ್ಷದ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಅಯೋಗ್ಯ ಹಾಗೂ ಅನರ್ಹ ಸಭಾಪತಿ ಸಿಕ್ಕಿರುವುದು ರಾಜ್ಯದ ದುರ್ದೈವ ಎಂದು ಹೇಳಿದರು.<br /> <br /> ಮುಂಬರುವ ವಿಧಾನಸಭೆ, ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆ ಘೋಷಣೆಯಾಗುವ ಮೂರು ತಿಂಗಳ ಮುನ್ನವೇ ಪ್ರಕಟಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಪರಮೇಶಪ್ಪ ಮೇಗಳಮನಿ, ಮಾಜಿ ಶಾಸಕ ರುದ್ರಪ್ಪ ಲಮಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಜಗದೀಶ ಬೆಟಗೇರಿ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>