<p><span style="font-size: medium"><strong>ಚೆನ್ನೈ, (ಐಎಎನ್ಎಸ್): </strong><a href="http://prajavani.net/include/story.php?news=71266&section=1&menuid=10">ಕೂಡುಂಕುಳಂ ಪರಮಾಣು</a> ವಿದ್ಯುತ್ ಘಟಕದಲ್ಲಿ (ಕೆಎನ್ಪಿಪಿ) ಉತ್ಪಾದನೆಯಾಗುವ ಪೂರ್ಣ ವಿದ್ಯುತ್ನ್ನು ರಾಜ್ಯಕ್ಕೆ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕೇಂದ್ರ ಪರಿಶೀಲಿಸುತ್ತಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ವಿ.ನಾರಾಯಣಸ್ವಾಮಿ ಶುಕ್ರವಾರ ಹೇಳಿದ್ದಾರೆ.<br /> <br /> ತಮಿಳುನಾಡಿನ ಬೇಡಿಕೆ ವಿಷಯವನ್ನು ಈಗಾಗಲೇ ಪ್ರಧಾನಿ ಅವರ ಗಮನಕ್ಕೆ ತರಲಾಗಿದ್ದು, ಈ ಕುರಿತಂತೆ ಶೀಘ್ರವೇ ಅವರೊಂದಿಗೆ ಚರ್ಚಿಸುವುದಾಗಿ ನಾರಾಯಣಸ್ವಾಮಿ ತಿಳಿಸಿದ್ದಾರೆ.<br /> <br /> ನನಗೆ ರಾಜ್ಯದಲ್ಲಿನ ವಿದ್ಯುತ್ ಕೊರತೆ ಸಮಸ್ಯೆಯ ಅರಿವಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರು ಮಾಡಿರುವ ಮನವಿಯನ್ನು ಪರಿಗಣಿಸುವಂತೆ ಪ್ರಧಾನಿ ಅವರಲ್ಲಿ ಕೋರುವುದಾಗಿ ಅವರು ಹೇಳಿದರು.<br /> <br /> ಕೂಡುಂಕುಂಳಂ ಪರಮಾಣು ವಿದ್ಯುತ್ ಸ್ಥಾವರದಿಂದ ಉತ್ಪಾದನೆಯಾಗುವ ಪೂರ್ಣ ವಿದ್ಯುತ್ನ್ನು ರಾಜ್ಯಕ್ಕೆ ನೀಡುವಂತೆ ಕೇಳಿ ಮುಖ್ಯಮಂತ್ರಿ ಜಯಲಲಿತಾ ಅವರು ಇತ್ತೀಚೆಗೆ ಪ್ರಧಾನಿ ಅವರಿಗೆ ಪತ್ರವೊಂದನ್ನು ಬರೆದು ಮನವಿ ಮಾಡಿಕೊಂಡಿದ್ದರು. </span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: medium"><strong>ಚೆನ್ನೈ, (ಐಎಎನ್ಎಸ್): </strong><a href="http://prajavani.net/include/story.php?news=71266&section=1&menuid=10">ಕೂಡುಂಕುಳಂ ಪರಮಾಣು</a> ವಿದ್ಯುತ್ ಘಟಕದಲ್ಲಿ (ಕೆಎನ್ಪಿಪಿ) ಉತ್ಪಾದನೆಯಾಗುವ ಪೂರ್ಣ ವಿದ್ಯುತ್ನ್ನು ರಾಜ್ಯಕ್ಕೆ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕೇಂದ್ರ ಪರಿಶೀಲಿಸುತ್ತಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ವಿ.ನಾರಾಯಣಸ್ವಾಮಿ ಶುಕ್ರವಾರ ಹೇಳಿದ್ದಾರೆ.<br /> <br /> ತಮಿಳುನಾಡಿನ ಬೇಡಿಕೆ ವಿಷಯವನ್ನು ಈಗಾಗಲೇ ಪ್ರಧಾನಿ ಅವರ ಗಮನಕ್ಕೆ ತರಲಾಗಿದ್ದು, ಈ ಕುರಿತಂತೆ ಶೀಘ್ರವೇ ಅವರೊಂದಿಗೆ ಚರ್ಚಿಸುವುದಾಗಿ ನಾರಾಯಣಸ್ವಾಮಿ ತಿಳಿಸಿದ್ದಾರೆ.<br /> <br /> ನನಗೆ ರಾಜ್ಯದಲ್ಲಿನ ವಿದ್ಯುತ್ ಕೊರತೆ ಸಮಸ್ಯೆಯ ಅರಿವಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರು ಮಾಡಿರುವ ಮನವಿಯನ್ನು ಪರಿಗಣಿಸುವಂತೆ ಪ್ರಧಾನಿ ಅವರಲ್ಲಿ ಕೋರುವುದಾಗಿ ಅವರು ಹೇಳಿದರು.<br /> <br /> ಕೂಡುಂಕುಂಳಂ ಪರಮಾಣು ವಿದ್ಯುತ್ ಸ್ಥಾವರದಿಂದ ಉತ್ಪಾದನೆಯಾಗುವ ಪೂರ್ಣ ವಿದ್ಯುತ್ನ್ನು ರಾಜ್ಯಕ್ಕೆ ನೀಡುವಂತೆ ಕೇಳಿ ಮುಖ್ಯಮಂತ್ರಿ ಜಯಲಲಿತಾ ಅವರು ಇತ್ತೀಚೆಗೆ ಪ್ರಧಾನಿ ಅವರಿಗೆ ಪತ್ರವೊಂದನ್ನು ಬರೆದು ಮನವಿ ಮಾಡಿಕೊಂಡಿದ್ದರು. </span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>