<p>ಶಿಡ್ಲಘಟ್ಟ: ಆರ್ಎಪಿಡಿಆರ್ಪಿ ಯೋಜನೆಯಡಿ ಪುರಸಭೆ ವ್ಯಾಪ್ತಿಯ ವಿದ್ಯುತ್ ಮಾರ್ಗಗಳ ಬದಲಾವಣೆಗೆ 7.50 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.<br /> <br /> ರಹಮತ್ನಗರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ನಾಗರಿಕರ ಕುಂದುಕೊರತೆಗಳ ಸಭೆಯಲ್ಲಿ ಮಾತನಾಡಿ, ಮನೆಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳ ಬದಲಾವಣೆಗೆ 35 ಲಕ್ಷ ರೂಪಾಯಿ ಹೆಚ್ಚುವರಿ ಯೋಜನೆ ಸಿದ್ದಪಡಿಸಲಾಗಿದೆ. ಶೀಘ್ರದಲ್ಲಿಯೇ ವಿದ್ಯುತ್ ಮಾರ್ಗ ಬದಲಾವಣೆಗೆ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.<br /> <br /> ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗಿದ್ದು. ಈ ಹಿಂದೆ 3.5 ಕೋಟಿ ರೂಪಾಯಿ ವೆಚ್ಚದಲ್ಲಿ 27 ಕೊಳವೆ ಬಾವಿಗಳನ್ನು ಕೊರೆಯಿಸಿ ಎರಡು ಪಂಪ್ಹೌಸ್ ಮತ್ತು ಟ್ಯಾಂಕ್ ನಿರ್ಮಿಸಲಾಗಿದೆ. ಇದೀಗ ರಹಮತ್ನಗರದ ಗೌಸೀಯಾ ಮಸೀದಿ ಸಮೀಪ ಸೇರಿದಂತೆ 30 ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. <br /> <br /> ತಾ.ಪಂ. ಅಧ್ಯಕ್ಷ ಬಿ.ಎನ್.ವೇಣುಗೋಪಾಲ್, ಪುರಸಭಾ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ, ಗೌಸೀಯಾ ಮಸೀದಿ ಅಧ್ಯಕ್ಷ ಅನ್ವರ್ ಸಾಬ್, ತೈಬಾನಗರ ಗೌಸ-ಎ -ಆಝಂ ಮಸೀದಿ ಅಧ್ಯಕ್ಷ ಕಲೀಂ, ಅಬ್ದುಲ್ ಗಫೂರ್, ಬಿ.ಮುಬಾರಕ್ ಖಾನ್, ನ್ಯಾಮತ್, ತನ್ವೀರ್ ನೂರುಲ್ಲಾ, ಅಬ್ದುಲ್ ರಶೀದ್, ಶಾಬುದ್ದೀನ್, ಅಜೀಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ಆರ್ಎಪಿಡಿಆರ್ಪಿ ಯೋಜನೆಯಡಿ ಪುರಸಭೆ ವ್ಯಾಪ್ತಿಯ ವಿದ್ಯುತ್ ಮಾರ್ಗಗಳ ಬದಲಾವಣೆಗೆ 7.50 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.<br /> <br /> ರಹಮತ್ನಗರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ನಾಗರಿಕರ ಕುಂದುಕೊರತೆಗಳ ಸಭೆಯಲ್ಲಿ ಮಾತನಾಡಿ, ಮನೆಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳ ಬದಲಾವಣೆಗೆ 35 ಲಕ್ಷ ರೂಪಾಯಿ ಹೆಚ್ಚುವರಿ ಯೋಜನೆ ಸಿದ್ದಪಡಿಸಲಾಗಿದೆ. ಶೀಘ್ರದಲ್ಲಿಯೇ ವಿದ್ಯುತ್ ಮಾರ್ಗ ಬದಲಾವಣೆಗೆ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.<br /> <br /> ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗಿದ್ದು. ಈ ಹಿಂದೆ 3.5 ಕೋಟಿ ರೂಪಾಯಿ ವೆಚ್ಚದಲ್ಲಿ 27 ಕೊಳವೆ ಬಾವಿಗಳನ್ನು ಕೊರೆಯಿಸಿ ಎರಡು ಪಂಪ್ಹೌಸ್ ಮತ್ತು ಟ್ಯಾಂಕ್ ನಿರ್ಮಿಸಲಾಗಿದೆ. ಇದೀಗ ರಹಮತ್ನಗರದ ಗೌಸೀಯಾ ಮಸೀದಿ ಸಮೀಪ ಸೇರಿದಂತೆ 30 ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. <br /> <br /> ತಾ.ಪಂ. ಅಧ್ಯಕ್ಷ ಬಿ.ಎನ್.ವೇಣುಗೋಪಾಲ್, ಪುರಸಭಾ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ, ಗೌಸೀಯಾ ಮಸೀದಿ ಅಧ್ಯಕ್ಷ ಅನ್ವರ್ ಸಾಬ್, ತೈಬಾನಗರ ಗೌಸ-ಎ -ಆಝಂ ಮಸೀದಿ ಅಧ್ಯಕ್ಷ ಕಲೀಂ, ಅಬ್ದುಲ್ ಗಫೂರ್, ಬಿ.ಮುಬಾರಕ್ ಖಾನ್, ನ್ಯಾಮತ್, ತನ್ವೀರ್ ನೂರುಲ್ಲಾ, ಅಬ್ದುಲ್ ರಶೀದ್, ಶಾಬುದ್ದೀನ್, ಅಜೀಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>