<p>ಶಿವಮೊಗ್ಗ: ನಗರ ನೀರು ಪೂರೈಕೆಗೆ ಉಂಟಾಗುತ್ತಿದ್ದ ವಿದ್ಯುತ್ ಸಮಸ್ಯೆ ನಿವಾರಿಸುವ ದೃಷ್ಟಿಯಿಂದ ಗಾಜನೂರಿನಲ್ಲಿ ನಿರ್ಮಿಸಿರುವ 10ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಯನ್ನು ಶಾಸಕ ಕೆ.ಬಿ.ಪ್ರಸನ್ನಕುಮಾರ ಮಂಗಳವಾರ ಪರಿಶೀಲಿಸಿದರು.<br /> <br /> ವಿದ್ಯುತ್ ಉತ್ಪಾದನಾ ಘಟಕವು ಸುಮಾರು ರೂ.4.35ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಶಿವಮೊಗ್ಗ–ಮಂಗಳೂರು ಎಕ್ಸ್ ಪ್ರೆಸ್ ಲೈನ್ ನಿಂದ ವಿದ್ಯುತ್ ಪಡೆಯಲಾಗುತ್ತದೆ. ಆದರೆ, ಪ್ರಸ್ತುತ ಎಂಆರ್ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸಂಪರ್ಕಿಸಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.<br /> <br /> ಸುಮಾರು ಮೂರು ಎಕರೆ ವಿಸ್ತೀರ್ಣದಲ್ಲಿ ಘಟಕ ಸ್ಥಾಪಿಸಲಾಗುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ವಿದ್ಯುತ್ ವಿತರಣಾ ಕೇಂದ್ರಕ್ಕೂ ಸಂಪರ್ಕ ಕಲ್ಪಿಸಲಾಗಿದೆ. ಘಟಕ ಸ್ಥಾಪನೆಯಿಂದ ಗಾಜನೂರು ಸುತ್ತಮುತ್ತಲಿನ ಗ್ರಾಮಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆಯಾಗಲಿದ್ದು, ನಗರದ ಜನತೆಗೂ ನಿರಂತರ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.<br /> <br /> ಭೇಟಿಯ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಖುರ್ಷಿದಾ ಬಾನು, ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎನ್.ರಮೇಶ್,<br /> ಕೆಪಿಟಿಸಿಎಲ್ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ನಗರ ನೀರು ಪೂರೈಕೆಗೆ ಉಂಟಾಗುತ್ತಿದ್ದ ವಿದ್ಯುತ್ ಸಮಸ್ಯೆ ನಿವಾರಿಸುವ ದೃಷ್ಟಿಯಿಂದ ಗಾಜನೂರಿನಲ್ಲಿ ನಿರ್ಮಿಸಿರುವ 10ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಯನ್ನು ಶಾಸಕ ಕೆ.ಬಿ.ಪ್ರಸನ್ನಕುಮಾರ ಮಂಗಳವಾರ ಪರಿಶೀಲಿಸಿದರು.<br /> <br /> ವಿದ್ಯುತ್ ಉತ್ಪಾದನಾ ಘಟಕವು ಸುಮಾರು ರೂ.4.35ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಶಿವಮೊಗ್ಗ–ಮಂಗಳೂರು ಎಕ್ಸ್ ಪ್ರೆಸ್ ಲೈನ್ ನಿಂದ ವಿದ್ಯುತ್ ಪಡೆಯಲಾಗುತ್ತದೆ. ಆದರೆ, ಪ್ರಸ್ತುತ ಎಂಆರ್ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸಂಪರ್ಕಿಸಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.<br /> <br /> ಸುಮಾರು ಮೂರು ಎಕರೆ ವಿಸ್ತೀರ್ಣದಲ್ಲಿ ಘಟಕ ಸ್ಥಾಪಿಸಲಾಗುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ವಿದ್ಯುತ್ ವಿತರಣಾ ಕೇಂದ್ರಕ್ಕೂ ಸಂಪರ್ಕ ಕಲ್ಪಿಸಲಾಗಿದೆ. ಘಟಕ ಸ್ಥಾಪನೆಯಿಂದ ಗಾಜನೂರು ಸುತ್ತಮುತ್ತಲಿನ ಗ್ರಾಮಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆಯಾಗಲಿದ್ದು, ನಗರದ ಜನತೆಗೂ ನಿರಂತರ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.<br /> <br /> ಭೇಟಿಯ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಖುರ್ಷಿದಾ ಬಾನು, ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎನ್.ರಮೇಶ್,<br /> ಕೆಪಿಟಿಸಿಎಲ್ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>