<p><span style="font-size: 26px;"><strong>ಮಂಡ್ಯ:</strong> ವಿದ್ಯಾದಾನದಷ್ಟೇ ರಕ್ತದಾನವೂ ಶ್ರೇಷ್ಠವಾದುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ ಅವರು ಹೇಳಿದರು.</span><br /> ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆಗೊಡಿ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ `ವಿಶ್ವ ರಕ್ತದಾನಿಗಳ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ಪ್ರತಿಯೊಬ್ಬರೂ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವಂತಹ ಪವಿತ್ರ ಕೆಲಸಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.<br /> <br /> ಇದೇ ಸಂದರ್ಭದಲ್ಲಿ ರಕ್ತದಾನಿಗಳಾದ ಚಿನ್ನಗಿರಿಕೊಪ್ಪಲು ಗ್ರಾಮದ ಸ್ವಾಮಿಗೌಡ, ರಾಜಮುನಿ ಹಾಗೂ ರಕ್ತ ದಾನ ಶಿಬಿರದ ಮೂಲಕ ರಕ್ತ ಸಂಗ್ರಹಿಸಿಕೊಟ್ಟಿರುವ ಜೀವಧಾರೆ ಟ್ರಸ್ಟ್ನ ನಟರಾಜು, ಮಳವಳ್ಳಿ ವಿಶ್ವಮಾನವ ಯುವಕರ ಸಂಘದ ಗೋಪಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಪರವಾಗಿ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.<br /> <br /> ರೆಡ್ಕ್ರಾಸ್ ಸಂಸ್ಥೆಯ ಮೀರಾ ಶಿವಲಿಂಗಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮರೀಗೌಡ, ಡಾ. ರೋಚನಾ, ಡಾ. ಮಂಜುನಾಥ್ ಸೇರಿದಂತೆ ಹಲವರು ಇದ್ದರು. ಸಮಾರಂಭದ ನಂತರ ಹಲವು ಮಂದಿ ರಕ್ತದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಮಂಡ್ಯ:</strong> ವಿದ್ಯಾದಾನದಷ್ಟೇ ರಕ್ತದಾನವೂ ಶ್ರೇಷ್ಠವಾದುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ ಅವರು ಹೇಳಿದರು.</span><br /> ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆಗೊಡಿ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ `ವಿಶ್ವ ರಕ್ತದಾನಿಗಳ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ಪ್ರತಿಯೊಬ್ಬರೂ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವಂತಹ ಪವಿತ್ರ ಕೆಲಸಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.<br /> <br /> ಇದೇ ಸಂದರ್ಭದಲ್ಲಿ ರಕ್ತದಾನಿಗಳಾದ ಚಿನ್ನಗಿರಿಕೊಪ್ಪಲು ಗ್ರಾಮದ ಸ್ವಾಮಿಗೌಡ, ರಾಜಮುನಿ ಹಾಗೂ ರಕ್ತ ದಾನ ಶಿಬಿರದ ಮೂಲಕ ರಕ್ತ ಸಂಗ್ರಹಿಸಿಕೊಟ್ಟಿರುವ ಜೀವಧಾರೆ ಟ್ರಸ್ಟ್ನ ನಟರಾಜು, ಮಳವಳ್ಳಿ ವಿಶ್ವಮಾನವ ಯುವಕರ ಸಂಘದ ಗೋಪಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಪರವಾಗಿ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.<br /> <br /> ರೆಡ್ಕ್ರಾಸ್ ಸಂಸ್ಥೆಯ ಮೀರಾ ಶಿವಲಿಂಗಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮರೀಗೌಡ, ಡಾ. ರೋಚನಾ, ಡಾ. ಮಂಜುನಾಥ್ ಸೇರಿದಂತೆ ಹಲವರು ಇದ್ದರು. ಸಮಾರಂಭದ ನಂತರ ಹಲವು ಮಂದಿ ರಕ್ತದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>