<p><strong>ನವದೆಹಲಿ (ಪಿಟಿಐ):</strong> ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಯ ನಂತರ ಬಿಜೆಪಿ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಾಧ್ಯತೆ ಇದ್ದುದ್ದರಿಂದ ಮತ್ತು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ದೆಹಲಿ ವಿಧಾನಸಭೆಯನ್ನು ವಿಸರ್ಜಿಸದೇ ಅಮಾನತಿನಲ್ಲಿ ಇಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.<br /> <br /> ಅಲ್ಪಾವಧಿಯಲ್ಲಿ ಮತ್ತೊಂದು ಚುನಾವಣೆ ನಡೆಸುವುದು ಸಾರ್ವಜನಿಕ ಹಿತಾಸಕ್ತಿಯಿಂದ ಸರಿಯಲ್ಲ ಎಂದು ಲೆ. ಗರ್ವನರ್ ಅವರು ಶಿಫಾರಸು ಮಾಡಿದ್ದರಿಂದ ದೆಹಲಿ ವಿಧಾನಸಭೆ ವಿಸರ್ಜಿಸದೇ ಅಮಾನತಿನಲ್ಲಿಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಹೇಳಿದೆ.<br /> <br /> 2013ರ ಡಿಸೆಂಬರ್ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಡಿ. 28ರಂದು ಸರ್ಕಾರ ರಚಿಸಲಾಯಿತು. ಈಗ ಪುನಃ ಚುನಾವಣೆ ನಡೆಸುವುದು ಸಾರ್ವಜನಿಕ ಹಿತಾಸಕ್ತಿಯಿಂದ ಯುಕ್ತವಲ್ಲ ಎಂದು ಲೆ. ಗವರ್ನರ್ ಅವರು ಶಿಫಾರಸು ಮಾಡಿದ್ದರು. ಲೆ. ಗವರ್ನರ್ ಮಾಡಿದ್ದ ಶಿಫಾರಸು ಸರಿಯಾಗಿಯೂ ಮತ್ತು ಆ ಸಂದರ್ಭದಲ್ಲಿ ಪ್ರಸ್ತುತವೂ ಆಗಿತ್ತು ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.<br /> <br /> ದೆಹಲಿಯಲ್ಲಿ ರಾಷ್ಟ್ರಪತಿಗಳ ಆಳ್ವಿಕೆಯನ್ನು ಪ್ರಶ್ನಿಸಿ ಎಎಪಿ ಫೆ. 24ರಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ದೆಹಲಿ ವಿಧಾನಸಭೆ ವಿಸರ್ಜಿಸಿ, ಚುನಾವಣೆ ನಡೆಸುವಂತೆ ದೆಹಲಿ ಲೆ. ಗವರ್ನರ್ ನಿರ್ದೇಶನ ನೀಡಬೇಕೆಂದೂ ಎಎಪಿ ಕೋರ್ಟ್ಗೆ ಮನವಿ ಮಾಡಿತ್ತು.<br /> ಬಿಜೆಪಿ ಹಾಗೂ ಕಾಂಗ್ರೆಸ್ಗೆ ನೋಟಿಸ್ ಜಾರಿ ಮಾಡಿದ ಕೋರ್ಟ್, ಸಂವಿಧಾನಾತ್ಮಕ ದೃಷ್ಟಿಯಿಂದ ಮಾತ್ರ ಕೋರ್ಟ್ ಪ್ರಕರಣದ ವಿಚಾರಣೆ ನಡೆ-ಸುತ್ತದೆಯೇ ಹೊರತು ರಾಜಕೀಯ ದೃಷ್ಟಿಕೋನದಿಂದ ಅಲ್ಲ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಯ ನಂತರ ಬಿಜೆಪಿ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಾಧ್ಯತೆ ಇದ್ದುದ್ದರಿಂದ ಮತ್ತು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ದೆಹಲಿ ವಿಧಾನಸಭೆಯನ್ನು ವಿಸರ್ಜಿಸದೇ ಅಮಾನತಿನಲ್ಲಿ ಇಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.<br /> <br /> ಅಲ್ಪಾವಧಿಯಲ್ಲಿ ಮತ್ತೊಂದು ಚುನಾವಣೆ ನಡೆಸುವುದು ಸಾರ್ವಜನಿಕ ಹಿತಾಸಕ್ತಿಯಿಂದ ಸರಿಯಲ್ಲ ಎಂದು ಲೆ. ಗರ್ವನರ್ ಅವರು ಶಿಫಾರಸು ಮಾಡಿದ್ದರಿಂದ ದೆಹಲಿ ವಿಧಾನಸಭೆ ವಿಸರ್ಜಿಸದೇ ಅಮಾನತಿನಲ್ಲಿಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಹೇಳಿದೆ.<br /> <br /> 2013ರ ಡಿಸೆಂಬರ್ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಡಿ. 28ರಂದು ಸರ್ಕಾರ ರಚಿಸಲಾಯಿತು. ಈಗ ಪುನಃ ಚುನಾವಣೆ ನಡೆಸುವುದು ಸಾರ್ವಜನಿಕ ಹಿತಾಸಕ್ತಿಯಿಂದ ಯುಕ್ತವಲ್ಲ ಎಂದು ಲೆ. ಗವರ್ನರ್ ಅವರು ಶಿಫಾರಸು ಮಾಡಿದ್ದರು. ಲೆ. ಗವರ್ನರ್ ಮಾಡಿದ್ದ ಶಿಫಾರಸು ಸರಿಯಾಗಿಯೂ ಮತ್ತು ಆ ಸಂದರ್ಭದಲ್ಲಿ ಪ್ರಸ್ತುತವೂ ಆಗಿತ್ತು ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.<br /> <br /> ದೆಹಲಿಯಲ್ಲಿ ರಾಷ್ಟ್ರಪತಿಗಳ ಆಳ್ವಿಕೆಯನ್ನು ಪ್ರಶ್ನಿಸಿ ಎಎಪಿ ಫೆ. 24ರಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ದೆಹಲಿ ವಿಧಾನಸಭೆ ವಿಸರ್ಜಿಸಿ, ಚುನಾವಣೆ ನಡೆಸುವಂತೆ ದೆಹಲಿ ಲೆ. ಗವರ್ನರ್ ನಿರ್ದೇಶನ ನೀಡಬೇಕೆಂದೂ ಎಎಪಿ ಕೋರ್ಟ್ಗೆ ಮನವಿ ಮಾಡಿತ್ತು.<br /> ಬಿಜೆಪಿ ಹಾಗೂ ಕಾಂಗ್ರೆಸ್ಗೆ ನೋಟಿಸ್ ಜಾರಿ ಮಾಡಿದ ಕೋರ್ಟ್, ಸಂವಿಧಾನಾತ್ಮಕ ದೃಷ್ಟಿಯಿಂದ ಮಾತ್ರ ಕೋರ್ಟ್ ಪ್ರಕರಣದ ವಿಚಾರಣೆ ನಡೆ-ಸುತ್ತದೆಯೇ ಹೊರತು ರಾಜಕೀಯ ದೃಷ್ಟಿಕೋನದಿಂದ ಅಲ್ಲ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>